ಬೆಂಗಳೂರು: ದುಬೈನಿಂದ ಬೆಂಗಳೂರಿಗೆ ಅಕ್ರಮ ಚಿನ್ನ ಸಾಗಾಣೆ ಮಾಡಿದ ಆರೋಪದ ಹಿನ್ನೆಲೆ ಸಿನಿಮಾ ನಟಿ ರನ್ಯಾ ರಾವ್ ಅವರನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ.
ರನ್ಯಾ ರಾವ್ ಅವರು ದುಬೈನಿಂದ ಬೆಂಗಳೂರಿಗೆ ಸೋಮವಾರ(ಮಾರ್ಚ್.3) ರಾತ್ರಿ ಹಿಂದಿರುಗಿದ್ದರು. ಈ ವೇಳೆ ಪ್ರಯಾಣಿಕರನ್ನು ತಪಾಸಣೆ ಮಾಡುವಂತೆ ಇವರನ್ನು ತಪಾಸಣೆ ಮಾಡುವಾಗ ವಿದೇಶದಿಂದ ಹೆಚ್ಚುವರಿ ಚಿನ್ನ ತಂದಿದ್ದಾರೆ ಎಂದು ಪತ್ತೆಯಾಗಿದೆ. ಹೀಗಾಗಿ ರನ್ಯಾ ಅವರನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ.
ಇನ್ನು ರನ್ಯಾ ಅವರು ವಿದೇಶದಿಂದ 14.8 ಕೆ.ಜಿ. ಚಿನ್ನವನ್ನು ಕಳ್ಳಸಾಗಣೆ ಮಾಡುತ್ತಿದ್ದ ಆರೋಪದಲ್ಲಿ DRI ಅಧಿಕಾರಿಗಳು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈಕೆ ಐಪಿಎಸ್ ಅಧಿಕಾರಿಯ ಪುತ್ರಿಯಾಗಿದ್ದು, ಕಿಚ್ಚ ಸುದೀಪ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ಅವರೊಂದಿಗೆ ಸ್ಕ್ರೀನ್ ಶೇರ್ ಮಾಡಿಕೊಂಡಿದ್ದರು.
ವಿಮಾನ ನಿಲ್ದಾಣದಲ್ಲಿ ಗ್ರೀನ್ಫಿಲ್ಡ್ ಕಾರ್ಗೋ
ರಾಷ್ಟ್ರದಲ್ಲಿ ಹೆಚ್ಚುತ್ತಿರುವ ವಾಯುಮಾರ್ಗ ಸರಕು ಸಾಗಣೆಯ ಬೇಡಿಕೆ ಪೂರೈಸುವ ಉದ್ದೇಶದಿಂದ ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ದೇಶದಲ್ಲೇ ದೊಡ್ಡ ಗ್ರೀನ್ಫೀಲ್ಡ್ ದೇಶೀಯ ಕಾರ್ಗೋ ಟರ್ಮಿನಲ್ ಅನ್ನು ಆರಂಭಿಸಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತ ಮತ್ತು ಮೆನ್ಜೀಸ್ ಏವಿಯೇಷನ್ ಸಹಯೋಗದಲ್ಲಿ ನಿರ್ಮಾಣವಾಗಿರುವ ಕಾರ್ಗೋ ಟರ್ಮಿನಲ್ 2 ಲಕ್ಷದ 45 ಸಾವಿರ ಚದರ ಅಡಿ ವಿಸ್ತೀರ್ಣ ಒಳಗೊಂಡಿದೆ. ಇದು ಕೈಗಾರಿಕೆಗಳ ಸಂಪರ್ಕ ಮತ್ತು ಪೂರೈಕೆಯನ್ನು ಬಲಪಡಿಸುವುದಲ್ಲದೇ, ದೇಶದಲ್ಲಿ ಸರಕು ಸಾಗಣೆ ಮತ್ತು ಪ್ರಾದೇಶಿಕ ವ್ಯಾಪಾರದ ಸುಸ್ಥಿರತೆ ಸಾಧಿಸುತ್ತದೆ.
ಬೆಂಗಳೂರು : ಬಜೆಟ್ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…
ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…
ಹನೂರು : ಅಜ್ಜೀಪುರದ ಬಳಿ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಅಪರೂಪದ ಬಿಳಿ ಜಿಂಕೆ ದರ್ಶನ ನೀಡುವ ಮೂಲಕ ಅಚ್ಚರಿ ಮೂಡಿಸಿದೆ.…
ಬೆಂಗಳೂರು : ಪಂಚ ರಾಜ್ಯಗಳ ಮತದಾನ ಮುಗಿದ ಕೂಡಲೇ, ಕೇಂದ್ರ ಬಿಜೆಪಿ ಸರ್ಕಾರ ವಾಣಿಜ್ಯ ಬಳಕೆ ಅಡುಗೆ ಸಿಲಿಂಡರ್ ಹಾಗೂ…
ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾಗುವ ಸಮಯ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು…