ರಾಜ್ಯ

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌: ಎರಡು ವರ್ಷದಲ್ಲಿ ರನ್ಯಾ ದುಬೈಗೆ ಎಷ್ಟು ಬಾರಿ ಹೋಗಿದ್ದರೂ ಗೊತ್ತಾ?

ಬೆಂಗಳೂರು: ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ನಲ್ಲಿ ಬಂಧಿಯಾಗಿದ್ದು ನಟಿ ರನ್ಯಾರಾವ್‌ ಅವರು 2023ರ ಜೂನ್‌ನಿಂದ ಇಲ್ಲಿಯವರೆಗೂ 52 ಬಾರಿ ದುಬೈಗೆ ಹೋಗಿ ಬಂದಿದ್ದರೂ ಎಂಬ ಮಾಹಿತಿ ಡಿಆಐ ತನಿಖೆಯಿಂದ ಬೆಳಕಿಗೆ ಬಂದಿದೆ.

ಹೌದು, ಆರೋಪಿ ರನ್ಯಾ ರಾವ್‌ 2021 ರಿಂದ 2025ರವರೆಗೂ ವಿದೇಶಕ್ಕೆ ಪ್ರಯಾಣ ಮಾಡಿದ ಲೆಕ್ಕ ದೊರೆತಿದ್ದು, 2021ರಲ್ಲಿ ಒಂದು ಬಾರಿ ಕುಟುಂದ ಜೊತೆ ವಿದೇಶಕ್ಕೆ ಹೋಗಿದ್ದರು. ಬಳಿಕ 2023ರ ಜೂನ್‌ನಿಂದ ಇಲ್ಲಿಯರೆಗೂ ಒಟ್ಟು 52 ಬಾರಿ ದುಬೈ ಪ್ರಯಾಣ ಮಾಡಿದ್ದರು. ಅದರಲ್ಲಿ 45 ಬಾರಿ ಒಂದೇ ದಿನದಲ್ಲಿ ದುಬೈಗೆ ಹೋಗಿ ಅದೇ ದಿನಗಳಂದೇ ಭಾರತಕ್ಕೆ ಮರಳಿ ಬಂದಿದ್ದರು. ಅಲ್ಲದೇ ತಿಂಗಳಿಗೆ ಕನಿಷ್ಠ 3 ಬಾರಿ ದುಬೈ ವಿಮಾನ ಹತ್ತುತ್ತಿದ್ದ ರನ್ಯಾ, ಕಳೆದ 5 ತಿಂಗಳಲ್ಲಿ 11 ಬಾರಿ ದುಬೈಗೆ ತೆರಳಿದ್ದರು. ಆದರೆ 2024r ನವೆಂಬರ್‌ನಿಂದ 2025 ಮಾರ್ಚ್‌ವರೆಗೆ ರನ್ಯಾ ಪ್ರಯಾಣ ಮಾಡಿದ್ದ ಮಾಹಿತಿ ಇದೀಗ ಲಭ್ಯವಾಗಿದೆ.

2024ರ ನವೆಂಬರ್‌ನಿಂದ 2025ರ ಮಾರ್ಚ್‌ನವರೆಗೂ ಯಾವ್ಯಾವ ದಿನಗಳಲ್ಲಿ ರನ್ಯಾ ಪ್ರಯಾಣ?

2024ರ ನವೆಂಬರ್.‌13‌
2024ರ ಡಿಸೆಂಬರ್.‌12
2024ರ ಡಿಸೆಂಬರ್‌.20
2024ರ ಡಿಸೆಂಬರ್‌.27
2025ರ ಜನವರಿ.7
2025ರ ಜನವರಿ.11
2025ರ ಜನವರಿ.16
2025ರ ಫೆಬ್ರವರಿ.10
2025ರ ಫೆಬ್ರವರಿ.12
2025ರ ಫೆಬ್ರವರಿ.18
2025ರ ಮಾರ್ಚ್.‌3

ಅರ್ಚನ ಎಸ್‌ ಎಸ್

Recent Posts

ದಕ್ಷಿಣ ಭಾರತದ ಖ್ಯಾತ ನಟಿ ಬಿಂದು ಘೋಷ್‌ ನಿಧನ

ಚೆನ್ನೈ: ಕಳೆದ ಕೆಲವು ತಿಂಗಳುಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಹಾಸ್ಯ ನಟಿ ಬಿಂದು ಘೋಷ್‌ ನಿಧನರಾಗಿದ್ದಾರೆ. ತಮಿಳು ಚಿತ್ರರಂಗದಲ್ಲಿ…

46 mins ago

ಹಾಸನ: ಸತತ ನಾಲ್ಕು ಗಂಟೆಗಳ ನಂತರ ಸೆರೆಯಾದ ಒಂಟಿಸಲಗ: ಕಾರ್ಯಾಚರಣೆ ಹೇಗಿತ್ತು ಗೊತ್ತಾ?

ಹಾಸನ: ಜಿಲ್ಲೆಯ ಬೇಲೂರು ಭಾಗದಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ಇಂದು ಕಾಡಾನೆಯೊಂದನ್ನು ಸೆರೆಹಿಡಿಯಲಾಗಿದೆ. ಬೇಲೂರು ಭಾಗದಲ್ಲಿ ಕಾಡಾನೆಗಳ ಉಪಟಳ ದಿನದಿಂದ…

1 hour ago

ಮುಸ್ಲಿಮರಿಗೆ ಗುತ್ತಿಗೆ ಮೀಸಲಾತಿ ವಿಚಾರ: ಛಲವಾದಿ ನಾರಾಯಣಸ್ವಾಮಿ ಕೆಂಡಾಮಂಡಲ

ಬೆಂಗಳೂರು: ಮುಸ್ಲಿಮರಿಗೆ ಗುತ್ತಿಗೆ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಛಲವಾದಿ ನಾರಾಯಣಸ್ವಾಮಿ ಅವರು ಸರ್ಕಾರದ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಈ…

2 hours ago

ಪಾಕಿಸ್ತಾನ ಭಾರತದ ಜೊತೆ ಪರೋಕ್ಷ ಯುದ್ಧ ಮಾಡುತ್ತಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ನೆರೆಯ ಪಾಕಿಸ್ತಾನ ಭಾರತದ ಜೊತೆ ಪರೋಕ್ಷ ಯುದ್ಧ ನಡೆಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಕುರಿತು…

2 hours ago

ಎಚ್.ಡಿ.ಕೋಟೆ ಹಾಗೂ ಸರಗೂರು ತಾಲ್ಲೂಕಿನಾದ್ಯಂತ ವರ್ಷದ ಮೊದಲ ವರ್ಷಧಾರೆ

ಎಚ್.ಡಿ.ಕೋಟೆ/ಸರಗೂರು: ತಾಲ್ಲೂಕುಗಳಾದ್ಯಂತ ಇಂದು ಸಂಜೆ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗಿದ್ದು, ಕಾದ ಭೂಮಿಗೆ ತಂಪೆರೆದಿದೆ. ಎಚ್.ಡಿ.ಕೋಟೆ ಹಾಗೂ ಸರಗೂರು…

3 hours ago

ಹನೂರಿನಲ್ಲಿ ಮುಂದುವರಿದ ಕಾಡಾನೆಗಳ ಉಪಟಳ: ಸೋಲಾರ್‌ ಬೇಲಿಯನ್ನೇ ನಾಶ ಮಾಡಿದ ಆನೆಗಳು

ಹನೂರು: ತಾಲ್ಲೂಕಿನಲ್ಲಿ ಆನೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಅನ್ನದಾತರು ಕಂಗಾಲಾಗಿದ್ದಾರೆ. ಹನೂರು ತಾಲ್ಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಕಾಡಾನೆಗಳ ಹಾವಳಿ…

3 hours ago