ಮೈಸೂರು : ರಾಜ್ಯದಲ್ಲಿ ಕೃಷಿ, ತೋಟಗಾರಿಕೆ, ಪಶುವೈದ್ಯಕೀಯ ಮತ್ತು ಅರಣ್ಯ ಶಾಸ್ತ್ರ ಪದವಿಗಳಿಗೆ ಕೃಷಿಕರ ಕೋಟಾದಡಿ (50%) ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಮಹತ್ವದ ಅವಕಾಶ ದೊರೆಯುತ್ತಿದೆ. 2026-27ನೇ ಶೈಕ್ಷಣಿಕ ಸಾಲಿನ ಪ್ರವೇಶಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಏ.21ರೊಳಗೆ ಅರ್ಜಿಸಲ್ಲಿಸಲು ಅವಕಾಶವಿದೆ.
ಕೃಷಿಕರು ಮತ್ತು ಕೃಷಿ ಕೂಲಿ ಕಾರ್ಮಿಕರ ಮಕ್ಕಳಿಗೆ ವಿಶೇಷ ಮೀಸಲಾತಿ ಒದಗಿಸುವ ಈ ವ್ಯವಸ್ಥೆಯು ಗ್ರಾಮೀಣ ವಿದ್ಯಾರ್ಥಿಗಳಿಗೆ ಕೃಷಿ ಕ್ಷೇತ್ರದಲ್ಲಿ ಉನ್ನತ ಶಿಕ್ಷಣ ಪಡೆಯುವ ಸುವರ್ಣಾವಕಾಶವಾಗಿದೆ. ಕೆಇಎ ಅಧಿಕೃತ ವೆಬ್ಸೈಟ್ನಲ್ಲಿ ಮೂಲ ದಾಖಲೆಗಳನ್ನು ಅಪ್ಲೋಡ್ ಮಾಡುವ ವ್ಯವಸ್ಥೆ ಕಲ್ಪಿಸಲಾಗಿದೆ.
ಆನ್ಲೈನ್ ಸಲ್ಲಿಕೆಗೆ ಬೇಕಾದ ಅಗತ್ಯ ದಾಖಲೆಗಳು ಇಂತಿವೆ.
– ಕೃಷಿಕ / ಕೃಷಿ ಕೂಲಿ ಕಾರ್ಮಿಕರ ಪ್ರಮಾಣಪತ್ರ (RD ಸಂಖ್ಯೆ ಸಹಿತ)
– ವಂಶವೃಕ್ಷ ಪ್ರಮಾಣಪತ್ರ (ಅವಿಭಾಜ್ಯ ಕುಟುಂಬಕ್ಕೆ)
– ಆದಾಯಕ್ಕೆ ಸಂಬಂಧಿಸಿದ ಅಫಿಡವಿಟ್
– ವೇತನ / ಖಾಸಗಿ ವ್ಯವಹಾರದ ಆದಾಯ ದಾಖಲೆಗಳು
ಏಪ್ರಿಲ್ 29ಕ್ಕೆ ಪ್ರಯೋಗಿಕ ಪರೀಕ್ಷೆ
ದ್ವಿತೀಯ ಪಿಯುಸಿ ಪೂರೈಸಿದ ವಿದ್ಯಾರ್ಥಿಗಳಿಗೆ ಕೃಷಿ ಸಂಬಂಧಿತ ಪದವಿಗಳ ಪ್ರವೇಶಕ್ಕೆ ಏಪ್ರಿಲ್ 29ರಂದು ಪ್ರಾಯೋಗಿಕ ಪರೀಕ್ಷೆ ನಡೆಯಲಿದೆ.
ತರಬೇತಿ ಮತ್ತು ಮಾರ್ಗದರ್ಶನ
ಪ್ರಯೋಗಿಕ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಲು ಸರಿಯಾದ ತರಬೇತಿ ಅತ್ಯಗತ್ಯ. ಈ ಹಿನ್ನೆಲೆಯಲ್ಲಿ ಮಂಡ್ಯದ ಚಿಗುರು ಅಗ್ರಿ ಕೋಚಿಂಗ್ ಸೆಂಟರ್ ನಾಲ್ಕು ದಿನಗಳ ವಿಶೇಷ ತರಬೇತಿ ಕಾರ್ಯಕ್ರಮವನ್ನು ಮೈಸೂರು ಮತ್ತು ಮಂಡ್ಯದಲ್ಲಿ ಆಯೋಜಿಸಿದೆ.
ಅಗ್ರಿ ಕೋಚಿಂಗಸ್ ಸೆಂಟರ್ ಸಂಸ್ಥೆಯ ಮುಖ್ಯಸ್ಥ ನಾಗೇಶ್ ಸಿ.ಆರ್ ಅವರು ಮಂಡ್ಯದ ವಿ.ಸಿ.ಫಾರಂ ನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ ಅನುಭವದೊಂದಿಗೆ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ತರಬೇತಿ ನೀಡುತ್ತಿದ್ದಾರೆ. ತರಬೇತಿಯಲ್ಲಿ ಕೃಷಿಕರ ಕೋಟಾ ದಾಖಲಾತಿ ವಿವರ, ಕ್ಷೇತ್ರ ಭೇಟಿ, ಪರೀಕ್ಷಾ ಮಾದರಿ ಅಭ್ಯಾಸ ಸೇರಿವೆ.
ಈ ತರಬೇತಿಯ ಮೂಲಕ ತಯಾರಾಗಬಹುದಾದ ಕೋರ್ಸ್ಗಳು
– B.Sc (Hons.) Agriculture
– B.Sc (Hons.) Horticulture
– B.Sc (Hons.) Forestry
– B.V.Sc & AH (Veterinary Science)
ಕೃಷಿಕರ ಕೋಟಾದಡಿ ದೊರೆಯುತ್ತಿರುವ ಈ ಅವಕಾಶವನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು. ಸರಿಯಾದ ದಾಖಲೆಗಳ ಸಿದ್ಧತೆ, ಸಮಯಕ್ಕೆ ಅರ್ಜಿ ಸಲ್ಲಿಕೆ ಮತ್ತು ಪ್ರಯೋಗಿಕ ಪರೀಕ್ಷೆಗೆ ಸಕಾಲದಲ್ಲಿ ತಯಾರಿ ಇವು ಯಶಸ್ಸಿನ ಮುಖ್ಯ ಕೀಲಿಕೈಗಳಾಗಿವೆ. ಹೆಚ್ಚಿನ ಮಾಹಿತಿ ಮತ್ತು ತರಬೇತಿಗಾಗಿ ಸಂಪರ್ಕಿಸಿ 70266 94404





