ರಾಜ್ಯ

ಕೃಷಿ ಪದವಿ ಪಡೆಯಲು ಸುವರ್ಣ ಅವಕಾಶ : 50% ಮೀಸಲು, ಏಪ್ರಿಲ್ 29ಕ್ಕೆ ಪ್ರಾಯೋಗಿಕ ಪರೀಕ್ಷೆ

ಮೈಸೂರು : ರಾಜ್ಯದಲ್ಲಿ ಕೃಷಿ, ತೋಟಗಾರಿಕೆ, ಪಶುವೈದ್ಯಕೀಯ ಮತ್ತು ಅರಣ್ಯ ಶಾಸ್ತ್ರ ಪದವಿಗಳಿಗೆ ಕೃಷಿಕರ ಕೋಟಾದಡಿ (50%) ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಮಹತ್ವದ ಅವಕಾಶ ದೊರೆಯುತ್ತಿದೆ. 2026-27ನೇ ಶೈಕ್ಷಣಿಕ ಸಾಲಿನ ಪ್ರವೇಶಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಏ.21ರೊಳಗೆ ಅರ್ಜಿಸಲ್ಲಿಸಲು ಅವಕಾಶವಿದೆ.

ಕೃಷಿಕರು ಮತ್ತು ಕೃಷಿ ಕೂಲಿ ಕಾರ್ಮಿಕರ ಮಕ್ಕಳಿಗೆ ವಿಶೇಷ ಮೀಸಲಾತಿ ಒದಗಿಸುವ ಈ ವ್ಯವಸ್ಥೆಯು ಗ್ರಾಮೀಣ ವಿದ್ಯಾರ್ಥಿಗಳಿಗೆ ಕೃಷಿ ಕ್ಷೇತ್ರದಲ್ಲಿ ಉನ್ನತ ಶಿಕ್ಷಣ ಪಡೆಯುವ ಸುವರ್ಣಾವಕಾಶವಾಗಿದೆ. ಕೆಇಎ ಅಧಿಕೃತ ವೆಬ್‌ಸೈಟ್‌ನಲ್ಲಿ ಮೂಲ ದಾಖಲೆಗಳನ್ನು ಅಪ್‌ಲೋಡ್ ಮಾಡುವ ವ್ಯವಸ್ಥೆ ಕಲ್ಪಿಸಲಾಗಿದೆ.

ಆನ್‌ಲೈನ್ ಸಲ್ಲಿಕೆಗೆ ಬೇಕಾದ ಅಗತ್ಯ ದಾಖಲೆಗಳು ಇಂತಿವೆ.
– ಕೃಷಿಕ / ಕೃಷಿ ಕೂಲಿ ಕಾರ್ಮಿಕರ ಪ್ರಮಾಣಪತ್ರ (RD ಸಂಖ್ಯೆ ಸಹಿತ)
– ವಂಶವೃಕ್ಷ ಪ್ರಮಾಣಪತ್ರ (ಅವಿಭಾಜ್ಯ ಕುಟುಂಬಕ್ಕೆ)
– ಆದಾಯಕ್ಕೆ ಸಂಬಂಧಿಸಿದ ಅಫಿಡವಿಟ್
– ವೇತನ / ಖಾಸಗಿ ವ್ಯವಹಾರದ ಆದಾಯ ದಾಖಲೆಗಳು

ಏಪ್ರಿಲ್ 29ಕ್ಕೆ ಪ್ರಯೋಗಿಕ ಪರೀಕ್ಷೆ
ದ್ವಿತೀಯ ಪಿಯುಸಿ ಪೂರೈಸಿದ ವಿದ್ಯಾರ್ಥಿಗಳಿಗೆ ಕೃಷಿ ಸಂಬಂಧಿತ ಪದವಿಗಳ ಪ್ರವೇಶಕ್ಕೆ ಏಪ್ರಿಲ್ 29ರಂದು ಪ್ರಾಯೋಗಿಕ ಪರೀಕ್ಷೆ ನಡೆಯಲಿದೆ.

ತರಬೇತಿ ಮತ್ತು ಮಾರ್ಗದರ್ಶನ
ಪ್ರಯೋಗಿಕ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಲು ಸರಿಯಾದ ತರಬೇತಿ ಅತ್ಯಗತ್ಯ. ಈ ಹಿನ್ನೆಲೆಯಲ್ಲಿ ಮಂಡ್ಯದ ಚಿಗುರು ಅಗ್ರಿ ಕೋಚಿಂಗ್ ಸೆಂಟರ್ ನಾಲ್ಕು ದಿನಗಳ ವಿಶೇಷ ತರಬೇತಿ ಕಾರ್ಯಕ್ರಮವನ್ನು ಮೈಸೂರು ಮತ್ತು ಮಂಡ್ಯದಲ್ಲಿ ಆಯೋಜಿಸಿದೆ.

ಅಗ್ರಿ ಕೋಚಿಂಗಸ್‌ ಸೆಂಟರ್ ಸಂಸ್ಥೆಯ ಮುಖ್ಯಸ್ಥ ನಾಗೇಶ್ ಸಿ.ಆರ್ ಅವರು ಮಂಡ್ಯದ ವಿ.ಸಿ.ಫಾರಂ ನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ ಅನುಭವದೊಂದಿಗೆ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ತರಬೇತಿ ನೀಡುತ್ತಿದ್ದಾರೆ. ತರಬೇತಿಯಲ್ಲಿ ಕೃಷಿಕರ ಕೋಟಾ ದಾಖಲಾತಿ ವಿವರ, ಕ್ಷೇತ್ರ ಭೇಟಿ, ಪರೀಕ್ಷಾ ಮಾದರಿ ಅಭ್ಯಾಸ ಸೇರಿವೆ.

ಈ ತರಬೇತಿಯ ಮೂಲಕ ತಯಾರಾಗಬಹುದಾದ ಕೋರ್ಸ್‌ಗಳು
– B.Sc (Hons.) Agriculture
– B.Sc (Hons.) Horticulture
– B.Sc (Hons.) Forestry
– B.V.Sc & AH (Veterinary Science)

ಕೃಷಿಕರ ಕೋಟಾದಡಿ ದೊರೆಯುತ್ತಿರುವ ಈ ಅವಕಾಶವನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು. ಸರಿಯಾದ ದಾಖಲೆಗಳ ಸಿದ್ಧತೆ, ಸಮಯಕ್ಕೆ ಅರ್ಜಿ ಸಲ್ಲಿಕೆ ಮತ್ತು ಪ್ರಯೋಗಿಕ ಪರೀಕ್ಷೆಗೆ ಸಕಾಲದಲ್ಲಿ ತಯಾರಿ ಇವು ಯಶಸ್ಸಿನ ಮುಖ್ಯ ಕೀಲಿಕೈಗಳಾಗಿವೆ. ಹೆಚ್ಚಿನ ಮಾಹಿತಿ ಮತ್ತು ತರಬೇತಿಗಾಗಿ ಸಂಪರ್ಕಿಸಿ 70266 94404

ಆಂದೋಲನ ಡೆಸ್ಕ್

Recent Posts

ಶಿವಾಜಿ ಗಣೇಶನ್ ಅವರ ವಾರದ ಅಂಕಣ : ಬಂಗಾಳ, ತಮಿಳುನಾಡಿನ ರಾಜಕಾರಣದಲ್ಲಿ ಬಿರುಗಾಳಿ

ವಿಧಾನಸಭೆ ಚುನಾವಣೆಯ ನಂತರ ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನ ರಾಜಕೀಯದಲ್ಲಿ ಬಿರುಗಾಳಿ ಎದ್ದಿದೆ. ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಭಾರತೀಯ…

10 mins ago

ಭಾನುವಾರದ ಹಾಡುಪಾಡು | ಆಡುಮಾತಿಗೆ ಹತ್ತಿರವಿರುವ ಕಾವ್ಯಾನುವಾದ

ಹಾಡುಪಾಡು ರಾಮು ಅನುವಾದಿಸಿ ದೇವನೂರ ಮಹಾದೇವ ಸಂಪಾದಿಸಿದ 'ಮಹಾಭಾರತದಿಂದ ಒಂದಿಷ್ಟು ಮೇರುಕೃತಿ' ಬರುವ ಭಾನುವಾರ ಮೈಸೂರಿನಲ್ಲಿ ಬಿಡುಗಡೆಯಾಗಲಿದೆ. ಈ ಪುಸ್ತಕಕ್ಕೆ…

34 mins ago

ಭಾನುವಾರದ ಹಾಡುಪಾಡು | ವಿಯಟ್ಟಾಮಿನಲ್ಲೂ ಹುಡುಗಿಯರೇ ಸ್ಟ್ರಾಂಗೂ ಗುರೂ

ಬಲಿಷ್ಟ ಮಹಿಳೆ, ಸಮೃದ್ದ ಕುಟುಂಬ, ಬಲಿಷ್ಠ ರಾಷ್ಟ್ರ ಎಂಬ ಮಾತು ವಿಯಾಟ್ಟಾಮಿನಲ್ಲಿ ಅಕ್ಷರಶಃ ಸತ್ಯ. ಇತಿಹಾಸದಿಂದ ಇಂದಿನವರೆಗೂ ಅಲ್ಲಿನ ಮಹಿಳೆಯರು…

44 mins ago

ಭಾನುವಾರದ ಹಾಡುಪಾಡು | “ಇಲ್ಲ ಕಣ್‌ ಪುಟ್ರಂಗಾ, ಡಿಕೆ ಏನಾರೂ ಮಾಡದ್ರೂ ಮಾಡಬೋದು ಅನಿಸ್ತಾದೆ”

• ಕುಸುಮ ಆಯರಹಳ್ಳಿ ವೀಕೆಂಡಿನಲ್ಲಿ ಊರಿಗೆ ಬಂದು ಅವನನ್ನು ಮಾತಾಡಿಸಿಕೊಂಡು ಹೋಗುವ ಪ್ರೊಫೆಸರ್ ಧರ್ಮರಾಜ್‌ಗೆ ಊರಲ್ಲಿ ಜನವೇ ಕಾಣದಿದ್ದುದು ಅಚ್ಚರಿಯಾಯ್ತು.…

1 hour ago

ಎಲ್‌ಪಿಜಿ ಸಿಲಿಂಡರ್‌ ದರ ಮತ್ತೆ ಏರಿಕೆ ; ಪರಿಷ್ಕೃತ ದರ ಇಂದಿನಿಂದಲೇ ಜಾರಿ

ಹೊಸದಿಲ್ಲಿ :  ಮಧ್ಯಪ್ರಾಚ್ಯ ಬಿಕ್ಕಟ್ಟು ಆರಂಭವಾದ ಬಳಿಕ ಕಳೆದ 3 ತಿಂಗಳ ಅವಧಿಯಲ್ಲಿ 2 ನೇ ಬಾರಿಗೆ ಗೃಹಬಳಕೆ ಎಲ್…

1 hour ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 7 ಭಾನುವಾರ

4 hours ago