ರಾಜ್ಯ

ಕಲಾವಿದರಿಗೆ ಸಿಹಿ ಸುದ್ದಿ : ಮಾಸಾಶನ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಹಲವು ದಿನಗಳ ಬೇಡಿಕೆಯಂತೆ ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿನ ಕಲಾವಿದರ ಮಾಸಾಶನವನ್ನು 2 ಸಾವಿರ ರೂ. ನಿಂದ 2,500 ರೂ.ಗೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಹಿಂದೆ ಕಲಾವಿದರ ಮಾಸಾಶನ 2000 ರೂಪಾಯಿಗಳಿದ್ದು, ಅದನ್ನು ಹೆಚ್ಚಿಸಿ 2500 ಮಾಡಲಾಗಿದ್ದು, ಇದಕ್ಕಾಗಿ 32.94 ಕೋಟಿ ಹಣವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬಿಡುಗಡೆ ಮಾಡಿದೆ.

2025-26ನೇ ಸಾಲಿನ ಆಯವ್ಯಯದಲ್ಲಿ ಘೋಷಣೆ ಮಾಡಿದಂತೆ ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿನ ಕಲಾವಿದರ ಮಾಸಾಶನವನ್ನು 2 ಸಾವಿರ ರೂ. ನಿಂದ 2,500 ರೂ. ಗೆ ಹೆಚ್ಚಿಸಲಾಗಿದೆ. ಇದಕ್ಕೆ ಬೇಕಾಗುವ 40,76,72,000 ರೂ. ಬಿಡುಗಡೆ ಮಾಡಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರು ಪ್ರಸ್ತಾವನೆ ಸಲ್ಲಿಸಿದ್ದರು.

ಈ ಪ್ರಸ್ತಾವನೆ ಪರಿಶೀಲಿಸಿದ ಸರ್ಕಾರ, 2,500 ರೂ. ಮಾಸಾಶನ ನೀಡಲು ಅನುಮೋದನೆ ನೀಡಿದೆ. ಕಲಾವಿದರ ಮಾಸಾಶನ ಪಾವತಿಸಲು ತಗಲುವ ವೆಚ್ಚ 32,94,61,000 ರೂ. ಬಿಡುಗಡೆ ಮಾಡಲು ಸರ್ಕಾರ ಮಂಜೂರಾತಿ ನೀಡಿದೆ.

ಕಳೆದ ವರ್ಷ ನಾಟಕ ಅಕಾಡೆಮಿಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ ಅವರು ಕಲಾವಿದರ ಮಾಸಾಶನವನ್ನು ಎರಡು ಸಾವಿರದಿಂದ ಮೂರು ಸಾವಿರಕ್ಕೆ ಏರಿಕೆ ಮಾಡುವುದಾಗಿ ಭರವಸೆ ನೀಡಿದ್ದರು. ಆದರೆ 2500 ರೂಪಾಯಿ ಏರಿಕೆ ಮಾಡಲಾಗಿದೆ. ಅಸಲಿಗೆ ಕಲಾವಿದರಿಗೆ ತಿಂಗಳ ಮಾಸಾಶನವಾಗಿ ಐದು ಸಾವಿರ ರೂಪಾಯಿ ನೀಡಬೇಕು ಎಂಬುದು ಸಂಘದ ಬೇಡಿಕೆ ಆಗಿತ್ತು. ಈಗ 500 ರೂಪಾಯಿಗಳನ್ನು ಮಾತ್ರವೇ ಏರಿಕೆ ಮಾಡಲಾಗಿದೆ.

60 ವರ್ಷ ಮೀರಿದ 12,543 ಮಂದಿ ಕಲಾವಿದರು ರಾಜ್ಯದಾದ್ಯಂತ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿ ಮಾಸಾಶನ ಪಡೆಯುತ್ತಿದ್ದರು. ಇನ್ನು ಮುಂದೆ ಇಷ್ಟೂ ಮಂದಿಗೆ 2500 ರೂಪಾಯಿ ಮಾಸಾಶನ ದೊರೆಯಲಿದೆ. ಅಲ್ಲದೆ ಗ್ರಾಮಗಳಲ್ಲಿ ಕಲಾವಿದರನ್ನು ಗುರುತಿಸಿ ಅವರಿಗೆ ಮಾಸಾಶನ ಕೊಡಿಸುವ ಕ್ರಮವನ್ನು ಕೈಗೊಳ್ಳುವುದಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಳೆದ ವರ್ಷ ಹೇಳಿತ್ತು.

2023 ರಿಂದಲೂ ಈ ಮಾಸಾಶನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಸಭೆಗಳು, ಅನುಮೋದನೆಗಳು, ಬೇಡಿಕೆ ಸಲ್ಲಿಕೆ ಇನ್ನಿತರೆಗಳು ನಡೆಯುತ್ತಲೇ ಇದ್ದವು. ಕಳೆದ ವರ್ಷ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ ಬಳಿಕ ಪ್ರಕ್ರಿಯೆಗೆ ಇನ್ನಷ್ಟು ಚುರುಕು ದೊರಕಿತ್ತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರೂ ಸಹ ಈ ಬಗ್ಗೆ ಭರವಸೆ ನೀಡಿದ್ದರು. ಕೊನೆಗೆ ಮಾಸಾಶನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಅನುದಾನವನ್ನು ಇಲಾಖೆ ಬಿಡುಗಡೆ ಮಾಡಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

2 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

2 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

2 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

2 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

3 hours ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

3 hours ago