ಬೆಳಗಾವಿ: ರಾಜ್ಯ ಸರ್ಕಾರವು ಅನ್ನದಾತರಿಗೆ ಗುಡ್ ನ್ಯೂಸ್ ನೀಡಿದ್ದು, ಕೆಐಎಡಿಬಿ ಕೈಗಾರಿಕೆಗಳಲ್ಲಿ ರೈತರಿಗೂ ಸಹಭಾಗಿತ್ವ ನೀಡಲು ಯೋಜನೆ ರೂಪಿಸಿದೆ.
ಈ ಬಗ್ಗೆ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಾತನಾಡಿದ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಮಾಹಿತಿ ನೀಡಿದ್ದು, ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ ಸ್ವಾಧೀನಪಡಿಸಿಕೊಳ್ಳುವ ಜಮೀನಿನಲ್ಲಿ ಸ್ಥಾಪಿತವಾಗುವ ಕೈಗಾರಿಕೆಗಳಲ್ಲಿ ರೈತರಿಗೂ ಸಹಭಾಗಿತ್ವ ನೀಡಲಾಗುವುದು ಎಂದರು.
ಒಂದು ವೇಳೆ ರೈತರೇ ಕೈಗಾರಿಗೆ ಸ್ಥಾಪಿಸಲು ಮುಂದಾದರೆ ಅದಕ್ಕೆ ನಾವು ನೆರವು ನೀಡುವ ಕುರಿತು ಪರಿಶೀಲನೆ ನಡೆಸುತ್ತೇವೆ ಎಂದು ಹೇಳಿದರು.
ಪ್ರಸ್ತುತ ಇರುವ ಕಾಯ್ದೆಯ ಪ್ರಕಾರ ಕೆಐಎಡಿಬಿ ವಶಪಡಿಸಿಕೊಳ್ಳುವ ಭೂಮಿಗೆ ಮಾರುಕಟ್ಟೆ ದರದಲ್ಲಿ ಪರಿಹಾರ ನೀಡಲಾಗುತ್ತಿದೆ. ಅವರು ಬಯಸಿದರೆ ಅಭಿವೃದ್ಧಿಗೊಳಿಸಿದ ಅವರ ಪ್ರದೇಶದಲ್ಲಿ ಪ್ರತಿ ಎಕರೆಗೆ ಪರ್ಯಾಯವಾಗಿ 10,781 ಚದರ ಅಡಿ ಜಾಗ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ನಗರಾಭಿವೃದ್ಧಿ ಪ್ರಾಧಿಕಾರಗಳು ರೈತರಿಂದ ಸ್ವಾಧೀನಪಡಿಸಿಕೊಂಡ ಜಮೀನಿನ ಬದಲಿಗೆ ಅಭಿವೃದ್ಧಿಪಡಿಸಲಾದ ನಿವೇಶನಗಳನ್ನು ನೀಡುವ ಮಾದರಿಯಲ್ಲಿ ಕೈಗಾರಿಕಾ ಪ್ರದೇಶದಲ್ಲೂ ರೈತರನ್ನು ಒಳಗೊಳ್ಳುವಂತೆ ಮಾಡಲು ಸೂಕ್ತ ನಿರ್ಧಾರ ರೂಪಿಸಬೇಕಿದೆ ಎಂದು ಹೇಳಿದರು.
ಶಿವಮೊಗ್ಗ: ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ವಿಶ್ವವಿಖ್ಯಾತ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ. ಕಳೆದ ನಾಲ್ಕೈದು ದಿನಗಳಿಂದ ಶಿವಮೊಗ್ಗದಲ್ಲಿ ಭಾರೀ…
ಕೊಡಗು: ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಜಿಲ್ಲೆಯ ಮಳೆಯ ವಿವರ ಈ…
ಮಡಿಕೇರಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಇದರ ಭಾಗವಾಗಿ…
ತಿರುವನಂತಪುರಂ: ವಯನಾಡಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ…
ಮಂಗಳೂರು: ತೂಗುಸೇತುವೆಗಳ ಸರದಾರ, ಸುಳ್ಯದ ವಿಶ್ವೇಶ್ವರಯ್ಯ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಎಂಜಿನಿಯರ್ ಡಾ.ಗಿರೀಶ್ ಭಾರದ್ವಾಜ್ ಅವರು ಇಂದು ನಿಧನರಾಗಿದ್ದಾರೆ.…
ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ…