ರಾಜ್ಯ

ರೈತರಿಗೆ ಸಿಹಿಸುದ್ದಿ | ಎಲ್ಲಾ ರೈತರಿಗೆ ಮತ್ತೆ ಸೂಕ್ಷ್ಮ ನೀರಾವರಿಗೆ ಸಹಾಯಧನ

ಕೃಷಿ ಇಲಾಖೆಯ ಮಹತ್ವದ ಆದೇಶ

ಬೆಂಗಳೂರು : ಸೂಕ್ಷ್ಮ ನೀರಾವರಿ ಪರಿಕರಗಳನ್ನು ಪಡೆಯಲು ಇದ್ದ ನಿರ್ಬಂಧವನ್ನು ಸರ್ಕಾರ ಸಡಿಲಿಸಿದ್ದು ಎಲ್ಲಾ ವರ್ಗದ ರೈತ ಫಲಾನುಭವಿಗಳು 7 ವರ್ಷಗಳ ನಂತರ ಅದೇ ಜಮೀನಿಗೆ ಮರು ಸಹಾಯಧನ ಪಡೆಯಲು ಅವಕಾಶ ಕಲ್ಪಿಸಿ ಆದೇಶ ಹೊರಡಿಸಲಾಗಿದೆ.

ಈ ಹಿಂದೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ರೈತ ಫಲಾನುಭವಿಗಳನ್ನು ಹೊರತುಪಡಿಸಿ ಇತರೆ ವರ್ಗದವರಿಗೆ ಒಮ್ಮೆ ಮಾತ್ರ ಒಂದು ನಿರ್ದಿಷ್ಟ ಜಮೀನಿಗೆ ಹನಿ ನೀರಾವರಿ ಹಾಗೂ ತುಂತುರು ನೀರಾವರಿ ಘಟಕಗಳನ್ನು ಪಡೆಯಲು ಅವಕಾಶ ಕಲ್ಪಿಸಲಾಗಿತ್ತು.

ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ರೈತ ಫಲಾನುಭವಿಗಳು 7 ವರ್ಷಗಳ ನಂತರ ಅದೇ ಜಮೀನಿಗೆ ಸಹಾಯಧನ ಪಡೆಯಲು ಇದ್ದ ಅವಕಾಶವನ್ನು ಇತರೆ ವರ್ಗಗಳಿಗೂ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.

ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರ ವಿಶೇಷ ಪ್ರಯತ್ನದ ಫಲವಾಗಿ ಈ ಆದೇಶ ಹೊರಬಿದ್ದಿದ್ದು, ಲಕ್ಷಾಂತರ ರೈತ ಕುಟುಂಬಗಳಿಗೆ ಅನುಕೂಲವಾಗಲಿವೆ.

ಕೃಷಿ ಸಚಿವರು ರಾಜ್ಯ ಪ್ರವಾಸ ಕೈಗೊಂಡ ಸಂದರ್ಭಗಳಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ರೈತರು ಇತರೆ ವರ್ಗಗಳಿಗೆ ಇರುವ ನಿರ್ಬಂಧ ಸಡಿಲಿಸುವಂತೆ ಮನವಿ ಮಾಡುತ್ತಿದ್ದುದನ್ನು ಗಂಭೀರವಾಗಿ ಪರಿಗಣಿಸಿ ನಿಯಮ ಸಡಿಲಿಕೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೇಂದ್ರ ಸರ್ಕಾರವು ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಇದ್ದ 9 ಘಟಕಗಳನ್ನು ಸೇರ್ಪಡೆಗೊಳಿಸಿ ಪ್ರಧಾನಮಂತ್ರಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ (ಪಿಎಂ-ಆರ್ಕೆವಿವೈ) ಎಂದು ಮರು ನಾಮಕರಣಗೊಳಿಸಿ ಅನುಷ್ಠಾನ ಮಾರ್ಗಸೂಚಿಗಳನ್ನು ಹೊರಡಿಸಿದೆ. ಇದರ ವ್ಯಾಪ್ತಿಗೆ ಒಳಪಡುವಂತೆ ರೈತರಿಗೆ ಸೌಲಭ್ಯ ಪಡೆಯಲು ಅವಕಾಶ ಕಲ್ಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

2024-25ನೇ ಸಾಲಿನಲ್ಲಿ ಪಿಎಂಕೆಎಸ್ವೈ ಮತ್ತು ಪಿಎಂಎಂಎಸ್ ಯೋಜನೆಯಡಿ ಸೂಕ್ಷ್ಮ ನೀರಾವರಿ ಯೋಜನೆಗೆ ರೂ.274 ಕೋಟಿ ಮೀಸಲಿರಿಸಲಾಗಿತ್ತು. ಇದರಿಂದ 2.60 ಲಕ್ಷ ರೈತರಿಗೆ ಇದರ ಅನುಕೂಲ ತಲುಪಲಿದೆ ಹಾಗೆಯೇ ಟಾಪ್ಅಪ್ ಯೋಜನೆಯಡಿ ರೂ.252 ಕೋಟಿಗಳ ಅನುದಾನವನ್ನು ಸೂಕ್ಷ್ಮ ನೀರಾವರಿ ಸಾಧನ ಸಲಕರಣೆಗಳ ಆರ್ಥಿಕ ನೆರವಿಗಾಗಿ ನೀಡಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

1 hour ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

1 hour ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

1 hour ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

1 hour ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

1 hour ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

1 hour ago