ರಾಜ್ಯ

ರೈತರಿಗೆ ಸಿಹಿ ಸುದ್ದಿ ; ಕೊಬ್ಬರಿಗೆ ಬೆಂಬಲ ಬೆಲೆ

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರ ನೇತೃತ್ವದ ಕೇಂದ್ರ ಸಚಿವ ಸಂಪುಟವು ೨೦೨೬ರ ಹಂಗಾಮಿನ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ಹೆಚ್ಚಿಸಲು ಅನುಮೋದನೆ ನೀಡಿದ್ದು, ರಾಜ್ಯದ ರೈತರಿಗೆ ಮತ್ತೊಮೆ ಸಿಹಿ ಸುದ್ದಿ ನೀಡಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕರ್ನಾಟಕದ ತೆಂಗು ಬೆಳೆಗಾರರಿಗೆ ಮೋದಿ ಸರ್ಕಾರವು ಹೊಸವರ್ಷದ ಕೊಡುಗೆಯಾಗಿ ಕೊಬ್ಬರಿ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ ಮಾಡಿದೆ ಎಂದು ಹೇಳಿದ್ದಾರೆ.

ಕೇಂದ್ರದ ಈ ನಿರ್ಧಾರದಿಂದಾಗಿ ರಾಜ್ಯದ ತೆಂಗು ಬೆಳೆಗಾರರಿಗೆ ಹೆಚ್ಚಿನ ಲಾಭ ದೊರೆಯಲಿದ್ದು, ಹೋಳು ಕೊಬ್ಬರಿ ಮತ್ತು ಉಂಡೆ ಕೊಬ್ಬರಿ ಎರಡರ ದರದಲ್ಲೂ ಗಮನಾರ್ಹ ಏರಿಕೆ ಮಾಡಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಹೋಳು ಕೊಬ್ಬರಿಗೆ ೪೪೫ ರೂ., ಉಂಡೆ ಕೊಬ್ಬರಿಗೆ ೪೦೦ ರೂ. ಹೆಚ್ಚಳ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:-ಮಾಗಿ ಚಳಿಯ ಅಬ್ಬರಕ್ಕೆ ರಾಜ್ಯದ ಜನತೆ ಕಕ್ಕಾಬಿಕ್ಕಿ

ಹೋಳು ಕೊಬ್ಬರಿ ಕ್ವಿಂಟಾಲ್‌ಗೆ ೨೦೨೫ರಲ್ಲಿ ೧೧,೫೮೨ ರೂ. ಇದ್ದ ದರವು ೨೦೨೬ಕ್ಕೆ ೧೨,೦೨೭ ರೂ.ಗೆ ಏರಿಕೆಯಾಗಲಿದೆ. ಒಟ್ಟು ೪೪೫ ರೂ. ಹೆಚ್ಚಳವಾಗಿದೆ ಎಂದು ಹೇಳಿರುವ ಅವರು, ಉಂಡೆ ಕೊಬ್ಬರಿ ಪ್ರತಿ ಕ್ವಿಂಟಾಲ್‌ಗೆ ಪ್ರಸ್ತುತ ೧೨,೧೦೦ ರೂ. ಇದ್ದು ೨೦೨೬ಕ್ಕೆ ೧೨,೫೦೦ ರೂ. ಏರಿಕೆಯಾಗಲಿದ್ದು, ಒಟ್ಟು ೪೦೦ ರೂ. ಹೆಚ್ಚಳವಾಗಲಿದೆ ಎಂದು ತಿಳಿಸಿದ್ದಾರೆ.

೨೦೧೪ರಿಂದ ಕೇಂದ್ರ ಸರ್ಕಾರವು ಮಿಲ್ಲಿಂಗ್ ಕೊಬ್ಬರಿಯ ಎಂಎಸ್‌ಪಿಯನ್ನು ಗಣನೀಯವಾಗಿ ಹೆಚ್ಚಿಸುತ್ತಾ ಬಂದಿದ್ದು, ೨೦೧೪ರ ಮಾರುಕಟ್ಟೆ ಋತುವಿನಲ್ಲಿ ಕ್ವಿಂಟಲ್‌ಗೆ ಎಂಎಸ್‌ಪಿ ೫,೨೫೦ ರೂ. ಇತ್ತು. ಕಳೆದ ೧೦ ವರ್ಷಗಳಲ್ಲಿ ಶೇ.೧೨೯ರಷ್ಟು ಜಾಸ್ತಿ ಆಗಿದೆ. ಅದೇ ರೀತಿ ಉಂಡೆ ಕೊಬ್ಬರಿಯ ಬೆಲೆಯು ಕ್ವಿಂಟಲ್‌ಗೆ ೫,೫೦೦ ರೂ.ನಿಂದ ೧೨,೫೦೦ ರೂ.ಗೆ ಏರಿಕೆಯಾಗಿದ್ದು, ಶೇ.೧೨೭ ರಷ್ಟು ಹೆಚ್ಚಳವಾಗಿದೆ ಎಂದು ಅವರು ವಿವರಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ವೋಟ್‌ ಚೋರಿ | ಸತ್ಯದ ಬೆನ್ನಿಗೆ ನಿಂತು ಮೋದಿ, ಶಾ, ಆರ್‌ಎಸ್‌ಎಸ್‌ ಅನ್ನು ಖಾಲಿ ಮಾಡಿಸುತ್ತೇವೆ : ಕಾಂಗ್ರೆಸ್‌ ಶಪಥ

ಹೊಸದಿಲ್ಲಿ : ವೋಟ್ ಚೋರಿ ವಿರುದ್ಧ ಮತ್ತೆ ರಾಷ್ಟ್ರ ಮಟ್ಟದಲ್ಲಿ ಅಬ್ಬರಿಸಿರುವ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಮತ್ತು…

32 mins ago

ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ

ಬೆಂಗಳೂರು : ಕಾಂಗ್ರೆಸ್‌ನ ಹಿರಿಯ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ(95) ಅವರು ನಿಧನರಾಗಿದ್ದಾರೆ.…

2 hours ago

ಆಯ್ತಪ್ಪ ನಾಳೆ ʻಗ್ಯಾರಂಟಿʼ ನಿಲ್ಲಿಸಿತ್ತೀವಿ ಬಿಡಿ : ಪರಮೇಶ್ವರ್‌ ಹೀಗೆ ಹೇಳಿದ್ಯಾಕೆ?

ತುಮಕೂರು : ವಿರೋಧ ಪಕ್ಷದವರು ಪದೇ ಪದೆ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯನ್ನು ವಿರೋಧಿಸುತ್ತಾರೆ. ಗ್ಯಾರಂಟಿ ಕೊಡದೆ ರಸ್ತೆ,…

2 hours ago

ಇಂದಿರಾಗಾಂಧಿ ತ್ಯಾಗದ ಮುಂದೆ ನಮ್ಮದೇನು ಇಲ್ಲ : ಖರ್ಗೆ ಭಾವುಕ ನುಡಿ

ಹೊಸದಿಲ್ಲಿ : ಇಂದು ನನ್ನ ಮಗನಿಗೆ ಎಂಟು ಗಂಟೆಯ ಆಪರೇಷನ್‌ ಇತ್ತು. ಪತ್ನಿ, ಮಗಳು ಎಲ್ಲರೂ ಫೋನ್‌ ಮಾಡಿ ಬಹಳ…

2 hours ago

ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ ; ಸಾರ್ವಜನಿಕರಲ್ಲಿ ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ!

ಮೈಸೂರು : ನಿರ್ದಿಷ್ಟ ಬ್ರಾಂಡ್‌ನ ಮೊಟ್ಟೆಗಳಲ್ಲಿ ಕ್ಯಾನ್ಸರ್‌ಗೆ ಕಾರಣವಾಗುವ 'ಜಿನೋಟಾಕ್ಸಿಕ್ ಅಂಶ' ಪತ್ತೆಯಾಗಿದೆ ಎಂದು ಹೇಳುವ ವೈರಲ್ ವಿಡಿಯೋ ಇದೀಗ…

2 hours ago

ಯತ್ನಾಳ್‌, ಸಂತೋಷ್‌ ಲಾಡ್‌ ಮಧ್ಯ ಸೈದ್ಧಾಂತಿಕ ವಾರ್‌ : ಶಿವಾಜಿ ಮುಸ್ಮಿಂ ವಿರೋಧಿಗಳಲ್ಲ ; ಲಾಡ್‌

ಬೆಳಗಾವಿ : ಮರಾಠರು ಮುಸ್ಲಿಂ ವಿರೋಧಿ ಅಂತ‌ ಹಣೆಪಟ್ಟಿ ಕಟ್ಟಿಕೊಂಡಿದ್ದೇವೆ. ನಾವು ಮೊಘಲರ ವಿರುದ್ಧ ಇದ್ದೆವು. ಆದರೆ ಮುಸ್ಲಿಂರ ವಿರೋಧಿಗಳಾಗಿರಲಿಲ್ಲ.…

3 hours ago