ರಾಜ್ಯ

ರೈತರಿಗೆ ಸಿಹಿ ಸುದ್ದಿ ; ಕೊಬ್ಬರಿಗೆ ಬೆಂಬಲ ಬೆಲೆ

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರ ನೇತೃತ್ವದ ಕೇಂದ್ರ ಸಚಿವ ಸಂಪುಟವು ೨೦೨೬ರ ಹಂಗಾಮಿನ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ಹೆಚ್ಚಿಸಲು ಅನುಮೋದನೆ ನೀಡಿದ್ದು, ರಾಜ್ಯದ ರೈತರಿಗೆ ಮತ್ತೊಮೆ ಸಿಹಿ ಸುದ್ದಿ ನೀಡಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕರ್ನಾಟಕದ ತೆಂಗು ಬೆಳೆಗಾರರಿಗೆ ಮೋದಿ ಸರ್ಕಾರವು ಹೊಸವರ್ಷದ ಕೊಡುಗೆಯಾಗಿ ಕೊಬ್ಬರಿ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ ಮಾಡಿದೆ ಎಂದು ಹೇಳಿದ್ದಾರೆ.

ಕೇಂದ್ರದ ಈ ನಿರ್ಧಾರದಿಂದಾಗಿ ರಾಜ್ಯದ ತೆಂಗು ಬೆಳೆಗಾರರಿಗೆ ಹೆಚ್ಚಿನ ಲಾಭ ದೊರೆಯಲಿದ್ದು, ಹೋಳು ಕೊಬ್ಬರಿ ಮತ್ತು ಉಂಡೆ ಕೊಬ್ಬರಿ ಎರಡರ ದರದಲ್ಲೂ ಗಮನಾರ್ಹ ಏರಿಕೆ ಮಾಡಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಹೋಳು ಕೊಬ್ಬರಿಗೆ ೪೪೫ ರೂ., ಉಂಡೆ ಕೊಬ್ಬರಿಗೆ ೪೦೦ ರೂ. ಹೆಚ್ಚಳ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:-ಮಾಗಿ ಚಳಿಯ ಅಬ್ಬರಕ್ಕೆ ರಾಜ್ಯದ ಜನತೆ ಕಕ್ಕಾಬಿಕ್ಕಿ

ಹೋಳು ಕೊಬ್ಬರಿ ಕ್ವಿಂಟಾಲ್‌ಗೆ ೨೦೨೫ರಲ್ಲಿ ೧೧,೫೮೨ ರೂ. ಇದ್ದ ದರವು ೨೦೨೬ಕ್ಕೆ ೧೨,೦೨೭ ರೂ.ಗೆ ಏರಿಕೆಯಾಗಲಿದೆ. ಒಟ್ಟು ೪೪೫ ರೂ. ಹೆಚ್ಚಳವಾಗಿದೆ ಎಂದು ಹೇಳಿರುವ ಅವರು, ಉಂಡೆ ಕೊಬ್ಬರಿ ಪ್ರತಿ ಕ್ವಿಂಟಾಲ್‌ಗೆ ಪ್ರಸ್ತುತ ೧೨,೧೦೦ ರೂ. ಇದ್ದು ೨೦೨೬ಕ್ಕೆ ೧೨,೫೦೦ ರೂ. ಏರಿಕೆಯಾಗಲಿದ್ದು, ಒಟ್ಟು ೪೦೦ ರೂ. ಹೆಚ್ಚಳವಾಗಲಿದೆ ಎಂದು ತಿಳಿಸಿದ್ದಾರೆ.

೨೦೧೪ರಿಂದ ಕೇಂದ್ರ ಸರ್ಕಾರವು ಮಿಲ್ಲಿಂಗ್ ಕೊಬ್ಬರಿಯ ಎಂಎಸ್‌ಪಿಯನ್ನು ಗಣನೀಯವಾಗಿ ಹೆಚ್ಚಿಸುತ್ತಾ ಬಂದಿದ್ದು, ೨೦೧೪ರ ಮಾರುಕಟ್ಟೆ ಋತುವಿನಲ್ಲಿ ಕ್ವಿಂಟಲ್‌ಗೆ ಎಂಎಸ್‌ಪಿ ೫,೨೫೦ ರೂ. ಇತ್ತು. ಕಳೆದ ೧೦ ವರ್ಷಗಳಲ್ಲಿ ಶೇ.೧೨೯ರಷ್ಟು ಜಾಸ್ತಿ ಆಗಿದೆ. ಅದೇ ರೀತಿ ಉಂಡೆ ಕೊಬ್ಬರಿಯ ಬೆಲೆಯು ಕ್ವಿಂಟಲ್‌ಗೆ ೫,೫೦೦ ರೂ.ನಿಂದ ೧೨,೫೦೦ ರೂ.ಗೆ ಏರಿಕೆಯಾಗಿದ್ದು, ಶೇ.೧೨೭ ರಷ್ಟು ಹೆಚ್ಚಳವಾಗಿದೆ ಎಂದು ಅವರು ವಿವರಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಉಪಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ: ನಾಳೆ ಮನೆ ಮನೆಗೆ ತೆರಳಿ ಮತಯಾಚನೆ

ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…

12 hours ago

ಮಣಿಪುರದಲ್ಲಿ ಮನೆ ಮೇಲೆ ಬಾಂಬ್‌ ದಾಳಿ: ಇಬ್ಬರು ಮಕ್ಕಳು ಸಾವು

ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್‌ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…

13 hours ago

ನನ್ನ ತಾಳ್ಮೆಗೆ ಕಾಲವೇ ಉತ್ತರ ನೀಡುತ್ತದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್‌ ಅಹ್ಮಮದ್‌ ಖಾನ್‌ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ.…

13 hours ago

ನಮ್ಮಣ್ಣ ಇವತ್ತೇ ಸಿಎಂ ಆಗಬೇಕು ಎಂದೇನಿಲ್ಲ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…

13 hours ago

ಏಪ್ರಿಲ್.‌17ರಂದು ಸಿಎಂ ಸಿದ್ದರಾಮಯ್ಯ ಕೊಡಗು ಜಿಲ್ಲೆಗೆ ಭೇಟಿ ಸಾಧ್ಯತೆ

ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.‌17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…

13 hours ago

ಇರಾನ್‌ಗೆ ಇಸ್ರೇಲ್‌ ಖಡಕ್‌ ಎಚ್ಚರಿಕೆ: ಏನದು ಗೊತ್ತಾ.?

ಟೆಹರಾನ್:‌ ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್‌ ಈಗ ಇರಾನ್‌ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…

13 hours ago