ರಾಜ್ಯ

ಸರ್ಕಾರಿ ಶಾಲೆಗಳಿಗೆ ಗುಡ್‌ನ್ಯೂಸ್‌ : ಶಾಲಾ ಕೊಠಡಿ ದುರಸ್ಥಿಗೆ ರೂ.360 ಕೋಟಿ ಬಿಡುಗಡೆ

ಬೆಳಗಾವಿ : ರಾಜ್ಯದಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 360 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ವಿಧಾನಸಭೆಗೆ ತಿಳಿಸಿದರು.

ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೊಠಡಿಗಳ ದುರಸ್ಥಿಗೆ ೧೦೦ ಕೋಟಿ ರೂ., ಶೌಚಾಲಯ ನಿರ್ಮಾಣಕ್ಕೆ ೯೦ ಕೋಟಿ ರೂ. ಮಂಜೂರಾಗಿದೆ. ಪದವಿ ಪೂರ್ವ ಕಾಲೇಜುಗಳಲ್ಲಿ ಹೊಸ ಕಟ್ಟಡ ನಿರ್ಮಾಣ, ದುರಸ್ತಿ ಹಾಗೂ ಶೌಚಾಲಯ ನಿರ್ಮಾಣಕ್ಕಾಗಿ ೯೭ ಕೋಟಿ ರೂ. ಮಂಜೂರಾಗಿದೆ ಎಂದರು.

ಇದನ್ನು ಓದಿ: ಹೊಸ ತಾಲ್ಲೂಕುಗಳಿಗೆ ಸದ್ಯಕ್ಕಿಲ್ಲ ಆಸ್ಪತ್ರೆ ಭಾಗ್ಯ

ಸಚಿವ ಸಂಪುಟ ಸಭೆಯಲ್ಲಿ ಹೊಸ ಕೊಠಡಿ ನಿರ್ಮಾಣ, ದುರಸ್ತಿ ಹಾಗೂ ಶೌಚಾಲಯ ನಿರ್ಮಾಣಕ್ಕೆ ಅನುಮೋದನೆ ದೊರೆತಿದೆ. ಆದ್ಯತೆ ಮೇಲೆ ಈ ಕೆಲಸಗಳನ್ನು ಪ್ರಾರಂಭಿಸಲಾಗುವುದು. ಈ ಕಾರ್ಯಗಳಿಗೆ ಹಣದ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ಶಾಲಾ ವಿದ್ಯಾರ್ಥಿಗಳಿಗೆ ನೀಡಲಾಗುವ ಶೂ ಮತ್ತು ಸಾಕ್ಸ್ ಗಳಿಗೆ ೧೧೭ ಕೋಟಿ ರೂ. ಹಣ ಒದಗಿಸಲಾಗಿದ್ದು, ಈಗಾಗಲೇ ೯೭ ಕೋಟಿ ರೂ. ವಿತರಣೆಯಾಗಿದೆ. ಎಸ್‌ಡಿಎಂಸಿ ಸಮಿತಿಗೆ ಹಣ ನೀಡಲಿದ್ದು, ಆ ಸಮಿತಿಗಳೇ ಶೂ ಮತ್ತು ಸಾಕ್ಸ್ ಗಳನ್ನು ವಿತರಿಸಲಿವೆ. ಶೂ ಮತ್ತು ಸಾಕ್ಸ್ ಗಳಿಗೆ ಹಣದ ಕೊರತೆಯಿಲ್ಲ, ಮಧ್ಯವರ್ತಿಗಳೂ ಇಲ್ಲ. ಒಂದು ವೇಳೆ ಇಲಾಖಾಧಿಕಾರಿಗಳು ತಪ್ಪು ನಿರ್ವಹಣೆ ಮಾಡಿದ್ದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಸಂಚಿತ ನಿಧಿಯ ಹಣವನ್ನು ಬಳಸಲು ಸೂಚಿಸಿಲ್ಲ. ಹಾಗೊಂದು ವೇಳೆ ನಿರ್ದೇಶನ ನೀಡಿದ್ದರೆ ಸಂಬಂಧಿಸಿದ ಅಧಿಕಾರಿ ಮೇಲೆ ಕ್ರಮ ಕೈಗೊಳ್ಳುವ ಭರವಸೆಯನ್ನು ಸಚಿವರು ನೀಡಿದರು.

ಇದಕ್ಕೂ ಮುನ್ನ ಮಹೇಶ್ ಟೆಂಗಿನಕಾಯಿ, ಶಾಲಾ ಶೈಕ್ಷಣಿಕ ವರ್ಷ ಮುಗಿಯಲು ಇನ್ನು ೩ ತಿಂಗಳು ಮಾತ್ರ ಉಳಿದಿದೆ. ಇನ್ನೂ ಕೂಡ ಶೂ ಮತ್ತು ಸಾಕ್ಸ್ ಗಳನ್ನು ವಿದ್ಯಾರ್ಥಿಗಳಿಗೆ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ಮಾದಕ ವಸ್ತು ಮಾರಾಟ, ಬಳಕೆ ವಿರುದ್ಧ ಕಾರ್ಯಾಚರಣೆ

ನವೀನ್ ಡಿಸೋಜ ೩ ತಿಂಗಳಲ್ಲಿ ೧೩೮ ಎನ್‌ಡಿಪಿಎಸ್ ಪ್ರಕರಣ ದಾಖಲು; ೬ ಕೆ.ಜಿ. ೬೬೪ ಗ್ರಾಂ ಗಾಂಜಾ, ೩೫.೬೬ ಗ್ರಾಂ…

2 hours ago

ಹಾಳಾಗಿ ವರ್ಷಗಳೇ ಕಳೆದರೂ ದುರಸ್ತಿಯಾಗದ ಶುದ್ಧ ನೀರಿನ ಘಟಕಗಳು

ಮಹಾದೇಶ್ ಎಂ.ಗೌಡ ಹನೂರು: ತಾಲ್ಲೂಕಿನ ೨೫ ಗ್ರಾಮ ಪಂಚಾಯಿತಿಗಳ ಪೈಕಿ ೨೧ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ೪೭ ಶುದ್ಧ ಕುಡಿಯುವ ನೀರಿನ…

2 hours ago

ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ಅಪಘಾತಗಳಿಗೆ ಆಹ್ವಾನ

ಎಸ್.ನಾಗಸುಂದರ್ ರೈತನಿಗೆ ಕೈಮೂಳೆ ಮುರಿತ: ಪಾಂಡವಪುರದಲ್ಲಿ ಅವಗಢ, ಸಾರ್ವಜನಿಕರ ಆಕ್ರೋಶ ಪಾಂಡವಪುರ: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ಅವೈಜ್ಞಾನಿಕವಾಗಿ ಮತ್ತು…

3 hours ago

ಅರ್ಜುನಹಳ್ಳಿ ಗ್ರಾಪಂಗೆ ಗಾಂಧಿ ಗ್ರಾಮ ಪುರಸ್ಕಾರ

ಎರಡನೇ ಬಾರಿ ಪ್ರಶಸ್ತಿ ಪಡೆದು ಗಮನಸೆಳೆದ ಪಂಚಾಯಿತಿ ಭೇರ್ಯ ಮಹೇಶ್ ಕೆ.ಆರ್.ನಗರ : ತಾಲೂಕಿನ ಅರ್ಜುನಹಳ್ಳಿ ಗ್ರಾಮ ಪಂಚಾಯಿತಿ ಗ್ರಾಮೀಣಾಭಿವೃದ್ಧಿ…

3 hours ago

ಊರ ಜಾತ್ರೆ ಒಂದು ನೆನಪು…

ನಂಜನಗೂಡಿನ ಜಾತ್ರೆ ಅಂದು ಹೇಗಿತ್ತೋ ಇಂದೂ ಹಾಗೆ ತನ್ನ ಆಚರಣೆಯ ಮುಗ್ಧತೆ ಉಳಿಸಿಕೊಂಡಿದೆ  ಡಾ.ಹೆಚ್.ಸಿ.ಮಹದೇವಪ್ಪ, ಸಚಿವರು ನಂಜನಗೂಡಿನಿಂದ ಕೆಲವೇ ಮೈಲಿಗಳ…

3 hours ago

ಯುದ್ಧ: ಕಟ್ಟಡ ನಿರ್ಮಾಣ ವಲಯಕ್ಕೆ ಬೆಲೆ ಏರಿಕೆಯ ಬಿಸಿ

ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು: ಮಧ್ಯಪ್ರಾಚ್ಯ ದೇಶದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಜನಸಾಮಾನ್ಯರಿಗೆ ನಿತ್ಯ ಒಂದಲ್ಲಾ ಒಂದು ಬಿಸಿ ತಟ್ಟುತ್ತಿದೆ. ಕಟ್ಟಡ…

3 hours ago