ಬೆಳಗಾವಿ : ರಾಜ್ಯದಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 360 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ವಿಧಾನಸಭೆಗೆ ತಿಳಿಸಿದರು.
ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೊಠಡಿಗಳ ದುರಸ್ಥಿಗೆ ೧೦೦ ಕೋಟಿ ರೂ., ಶೌಚಾಲಯ ನಿರ್ಮಾಣಕ್ಕೆ ೯೦ ಕೋಟಿ ರೂ. ಮಂಜೂರಾಗಿದೆ. ಪದವಿ ಪೂರ್ವ ಕಾಲೇಜುಗಳಲ್ಲಿ ಹೊಸ ಕಟ್ಟಡ ನಿರ್ಮಾಣ, ದುರಸ್ತಿ ಹಾಗೂ ಶೌಚಾಲಯ ನಿರ್ಮಾಣಕ್ಕಾಗಿ ೯೭ ಕೋಟಿ ರೂ. ಮಂಜೂರಾಗಿದೆ ಎಂದರು.
ಇದನ್ನು ಓದಿ: ಹೊಸ ತಾಲ್ಲೂಕುಗಳಿಗೆ ಸದ್ಯಕ್ಕಿಲ್ಲ ಆಸ್ಪತ್ರೆ ಭಾಗ್ಯ
ಸಚಿವ ಸಂಪುಟ ಸಭೆಯಲ್ಲಿ ಹೊಸ ಕೊಠಡಿ ನಿರ್ಮಾಣ, ದುರಸ್ತಿ ಹಾಗೂ ಶೌಚಾಲಯ ನಿರ್ಮಾಣಕ್ಕೆ ಅನುಮೋದನೆ ದೊರೆತಿದೆ. ಆದ್ಯತೆ ಮೇಲೆ ಈ ಕೆಲಸಗಳನ್ನು ಪ್ರಾರಂಭಿಸಲಾಗುವುದು. ಈ ಕಾರ್ಯಗಳಿಗೆ ಹಣದ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದರು.
ಶಾಲಾ ವಿದ್ಯಾರ್ಥಿಗಳಿಗೆ ನೀಡಲಾಗುವ ಶೂ ಮತ್ತು ಸಾಕ್ಸ್ ಗಳಿಗೆ ೧೧೭ ಕೋಟಿ ರೂ. ಹಣ ಒದಗಿಸಲಾಗಿದ್ದು, ಈಗಾಗಲೇ ೯೭ ಕೋಟಿ ರೂ. ವಿತರಣೆಯಾಗಿದೆ. ಎಸ್ಡಿಎಂಸಿ ಸಮಿತಿಗೆ ಹಣ ನೀಡಲಿದ್ದು, ಆ ಸಮಿತಿಗಳೇ ಶೂ ಮತ್ತು ಸಾಕ್ಸ್ ಗಳನ್ನು ವಿತರಿಸಲಿವೆ. ಶೂ ಮತ್ತು ಸಾಕ್ಸ್ ಗಳಿಗೆ ಹಣದ ಕೊರತೆಯಿಲ್ಲ, ಮಧ್ಯವರ್ತಿಗಳೂ ಇಲ್ಲ. ಒಂದು ವೇಳೆ ಇಲಾಖಾಧಿಕಾರಿಗಳು ತಪ್ಪು ನಿರ್ವಹಣೆ ಮಾಡಿದ್ದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಸಂಚಿತ ನಿಧಿಯ ಹಣವನ್ನು ಬಳಸಲು ಸೂಚಿಸಿಲ್ಲ. ಹಾಗೊಂದು ವೇಳೆ ನಿರ್ದೇಶನ ನೀಡಿದ್ದರೆ ಸಂಬಂಧಿಸಿದ ಅಧಿಕಾರಿ ಮೇಲೆ ಕ್ರಮ ಕೈಗೊಳ್ಳುವ ಭರವಸೆಯನ್ನು ಸಚಿವರು ನೀಡಿದರು.
ಇದಕ್ಕೂ ಮುನ್ನ ಮಹೇಶ್ ಟೆಂಗಿನಕಾಯಿ, ಶಾಲಾ ಶೈಕ್ಷಣಿಕ ವರ್ಷ ಮುಗಿಯಲು ಇನ್ನು ೩ ತಿಂಗಳು ಮಾತ್ರ ಉಳಿದಿದೆ. ಇನ್ನೂ ಕೂಡ ಶೂ ಮತ್ತು ಸಾಕ್ಸ್ ಗಳನ್ನು ವಿದ್ಯಾರ್ಥಿಗಳಿಗೆ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…
ಆನೇಕಲ್ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…