ಬೆಳಗಾವಿ : ರಾಜ್ಯದಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 360 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ವಿಧಾನಸಭೆಗೆ ತಿಳಿಸಿದರು.
ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೊಠಡಿಗಳ ದುರಸ್ಥಿಗೆ ೧೦೦ ಕೋಟಿ ರೂ., ಶೌಚಾಲಯ ನಿರ್ಮಾಣಕ್ಕೆ ೯೦ ಕೋಟಿ ರೂ. ಮಂಜೂರಾಗಿದೆ. ಪದವಿ ಪೂರ್ವ ಕಾಲೇಜುಗಳಲ್ಲಿ ಹೊಸ ಕಟ್ಟಡ ನಿರ್ಮಾಣ, ದುರಸ್ತಿ ಹಾಗೂ ಶೌಚಾಲಯ ನಿರ್ಮಾಣಕ್ಕಾಗಿ ೯೭ ಕೋಟಿ ರೂ. ಮಂಜೂರಾಗಿದೆ ಎಂದರು.
ಇದನ್ನು ಓದಿ: ಹೊಸ ತಾಲ್ಲೂಕುಗಳಿಗೆ ಸದ್ಯಕ್ಕಿಲ್ಲ ಆಸ್ಪತ್ರೆ ಭಾಗ್ಯ
ಸಚಿವ ಸಂಪುಟ ಸಭೆಯಲ್ಲಿ ಹೊಸ ಕೊಠಡಿ ನಿರ್ಮಾಣ, ದುರಸ್ತಿ ಹಾಗೂ ಶೌಚಾಲಯ ನಿರ್ಮಾಣಕ್ಕೆ ಅನುಮೋದನೆ ದೊರೆತಿದೆ. ಆದ್ಯತೆ ಮೇಲೆ ಈ ಕೆಲಸಗಳನ್ನು ಪ್ರಾರಂಭಿಸಲಾಗುವುದು. ಈ ಕಾರ್ಯಗಳಿಗೆ ಹಣದ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದರು.
ಶಾಲಾ ವಿದ್ಯಾರ್ಥಿಗಳಿಗೆ ನೀಡಲಾಗುವ ಶೂ ಮತ್ತು ಸಾಕ್ಸ್ ಗಳಿಗೆ ೧೧೭ ಕೋಟಿ ರೂ. ಹಣ ಒದಗಿಸಲಾಗಿದ್ದು, ಈಗಾಗಲೇ ೯೭ ಕೋಟಿ ರೂ. ವಿತರಣೆಯಾಗಿದೆ. ಎಸ್ಡಿಎಂಸಿ ಸಮಿತಿಗೆ ಹಣ ನೀಡಲಿದ್ದು, ಆ ಸಮಿತಿಗಳೇ ಶೂ ಮತ್ತು ಸಾಕ್ಸ್ ಗಳನ್ನು ವಿತರಿಸಲಿವೆ. ಶೂ ಮತ್ತು ಸಾಕ್ಸ್ ಗಳಿಗೆ ಹಣದ ಕೊರತೆಯಿಲ್ಲ, ಮಧ್ಯವರ್ತಿಗಳೂ ಇಲ್ಲ. ಒಂದು ವೇಳೆ ಇಲಾಖಾಧಿಕಾರಿಗಳು ತಪ್ಪು ನಿರ್ವಹಣೆ ಮಾಡಿದ್ದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಸಂಚಿತ ನಿಧಿಯ ಹಣವನ್ನು ಬಳಸಲು ಸೂಚಿಸಿಲ್ಲ. ಹಾಗೊಂದು ವೇಳೆ ನಿರ್ದೇಶನ ನೀಡಿದ್ದರೆ ಸಂಬಂಧಿಸಿದ ಅಧಿಕಾರಿ ಮೇಲೆ ಕ್ರಮ ಕೈಗೊಳ್ಳುವ ಭರವಸೆಯನ್ನು ಸಚಿವರು ನೀಡಿದರು.
ಇದಕ್ಕೂ ಮುನ್ನ ಮಹೇಶ್ ಟೆಂಗಿನಕಾಯಿ, ಶಾಲಾ ಶೈಕ್ಷಣಿಕ ವರ್ಷ ಮುಗಿಯಲು ಇನ್ನು ೩ ತಿಂಗಳು ಮಾತ್ರ ಉಳಿದಿದೆ. ಇನ್ನೂ ಕೂಡ ಶೂ ಮತ್ತು ಸಾಕ್ಸ್ ಗಳನ್ನು ವಿದ್ಯಾರ್ಥಿಗಳಿಗೆ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…
ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…
ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…
ನಲವತ್ತು ವರುಷಗಳ ಕೆಳಗೆ ಇಂಗ್ಲೆಂಡಿನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಈಗ ಇರುವುದಕ್ಕಿಂತ ಬಹಳ ಕಡಿಮೆಯಾಗಿತ್ತು. ತಾವು ಮದುವೆಯಾದವರಾಗಿದ್ದರೂ, ಬ್ರಹ್ಮಚಾರಿಗಳೆಂದು ನಟಿಸುವುದು…
ಭೇರ್ಯ ಮಹೇಶ್ ಮಳೆ ಅಭಾವದಿಂದ ಬಿತ್ತನೆ ಮಾಡಿದ್ದ ಬೆಳೆಗಳು ಒಣಗಿ, ರೈತರಿಗೆ ಸಾಕಷ್ಟು ನಷ್ಟ ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…