ರಾಜ್ಯ

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ : ಜನ್ಮದಿನ, ವಿವಾಹ ವಾರ್ಷಿಕೋತ್ಸವಕ್ಕೂ ರಜೆ

ಬೆಂಗಳೂರು : ಹಬ್ಬ-ಹರಿದಿನಗಳನ್ನೂ ಲೆಕ್ಕಿಸದೆ ಜನರಿಗಾಗಿ ದುಡಿಯುವ ಪೊಲೀಸರಿಗೆ ಕರ್ನಾಟಕ ಪೊಲೀಸ್ ಇಲಾಖೆ ಸಿಹಿಸುದ್ದಿ ನೀಡಿದ್ದು, ಜನ್ಮದಿನ ಮತ್ತು ವಿವಾಹ ವಾರ್ಷಿಕೋತ್ಸವಕ್ಕೆ ರಜೆ ಘೋಷಿಸಿದೆ.

ಕರ್ನಾಟಕ ಪೊಲೀಸ್ ಸಿಬ್ಬಂದಿಯ ಹುಟ್ಟುಹಬ್ಬ ಹಾಗೂ ವಿವಾಹ ವಾರ್ಷಿಕೋತ್ಸವಕ್ಕೆ ಸಾಂದರ್ಭಿಕ ರಜೆ ನೀಡುವಂತೆ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ.ಸಲೀಂ ಆದೇಶ ಹೊರಡಿಸಿದ್ದಾರೆ.

ಇದರಿಂದ ಒತ್ತಡದ ಕೆಲಸ ಹಾಗೂ ವೈಯಕ್ತಿಕ ಜೀವನ ಸಮತೋಲನಗೆ ರಜೆ ಸಹಾಯಕವಾಗಲಿದೆ. ಹೀಗಾಗಿ ಸಾಂದರ್ಭಿಕ ರಜೆ ನೀಡುವಂತೆ ಸಲೀಂ ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.
ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುವ ಸಿಬ್ಬಂದಿ ತಮ್ಮ ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವದ ದಿನದಂದು ಕುಟುಂಬದವರ ಜೊತೆ ಕಾಲ ಕಳೆಯಲು ಅನುಕೂಲವಾಗುವಂತೆ ಆ ದಿನ ಕಡ್ಡಾಯ ರಜೆ ನೀಡುವ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯ ಒಳಾಡಳಿತ ಇಲಾಖೆಯು ಪೊಲೀಸ್ ಮಹಾನಿರ್ದೇಶಕರಿಗೆ ಅಽಕೃತ ಪತ್ರ ಬರೆದಿತ್ತು. ಇದನ್ನು ಪರಿಶೀಲಿಸಿದ ಡಿಜಿಪಿ ಡಾ ಸಲೀಂ ಅವರು, ಕಡ್ಡಾಯ ರಜೆ ನೀಡಿ ಆದೇಶ ಹೊರಡಿಸಿದ್ದಾರೆ.

ಆದೇಶದಲ್ಲೇನಿದೆ?
ಸಾರ್ವಜನಿಕರ ಸುರಕ್ಷತೆ ಹಾಗೂ ಕಾನೂನು ಜಾರಿಯನ್ನು ಖಚಿತಪಡಿಸಿಕೊಳ್ಳಲು ಕಠಿಣ ಪರಿಸ್ಥಿತಿಗಳಲ್ಲಿ ಕೆಲಸ ನಿರ್ವಹಿಸುವ ಪೊಲೀಸ್ ಸಿಬ್ಬಂದಿಗಳಿಗೆ ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವಗಳಂತಹ ವೈಯಕ್ತಿಕ ಕಾರ್ಯಕ್ರಮಗಳನ್ನು ಆಚರಿಸುವುದು ಬಹಳ ಮಹತ್ವದ್ದಾಗಿದೆ. ಈ ವಿಶೇಷ ದಿನಗಳಲ್ಲಿ ರಜೆ ಪಡೆಯುವುದರಿಂದ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾವನಾತ್ಮಕವಾಗಿ ಪುನಶ್ಚತನಗೊಳ್ಳಲು, ಕುಟುಂಬದೊಂದಿಗೆ ಸಮಯ ಕಳೆಯಲು ಹಾಗೂ ಕರ್ತವ್ಯ ಮತ್ತು ವೈಯಕ್ತಿಕ ಜೀವನದ ನಡುವೆ ಸಮತೋಲನವನ್ನು ಕಾಪಾಡಿಕೊಳ್ಳಲು ಸಹಾಯವಾಗುತ್ತದೆ. ಇದರಿಂದ ಮನೋಬಲ ವೃದ್ಧಿಯಾಗುತ್ತದೆ. ಒತ್ತಡ ಲಡಿಮೆಯಾಗುತ್ತದೆ ಮತ್ತು ಒಟ್ಟಾರೆ ಕೆಲಸದ ತೃಪ್ತಿ ಉತ್ಪಾದಕತೆಯನ್ನು ಹೆಚ್ಚಿಸುತ್ತದೆ.

ಈ ಮಾನವೀಯ ಕಾರ್ಯವು ಅವರ ತ್ಯಾಗಗಳನ್ನು ಗುರುತಿಸುವುದರ ಜೊತೆಗೆ ನಿಷ್ಠೆಯನ್ನು ಬೆಳೆಸುತ್ತದೆ ಮತ್ತು ಪೊಲೀಸ್ ಪಡೆಯ ಬದ್ಧತೆಯನ್ನು ಬಲಪಡಿಸಿ, ಸೇವೆಯಲ್ಲಿ ಉತ್ತಮ ಶಿಸ್ತು ಮತ್ತು ಕಾರ್ಯಕ್ರಮತೆಗೆ ಸಹಕಾರಿಯಾಗುತ್ತದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಅಽಕಾರಿ ಮತ್ತು ಸಿಬ್ಬಂದಿಗಳು ತಮ್ಮ ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವದ ಸಂದರ್ಭದಲ್ಲಿ ರಜೆ ಕೋರಿದಲ್ಲಿ, ತಪ್ಪದೆ ರಜೆ ಮಂಜೂರು ಮಾಡಲು ಎಲ್ಲಾ ಘಟಕಾಧಿಕಾರಿಗಳಿಗೆ ನಿರ್ದೇಶಿಸಿದೆ ಎಂದು ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಂಡ್ಯದಲ್ಲಿ ಭಿಕ್ಷುಕಿ ನಿಧನ : ಮೃತಳ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ; ಊರಿಗೂರೇ ಶಾಕ್!

ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…

4 hours ago

ಜಿಲ್ಲೆಗೊಂದು ಕೈಗಾರಿಕೆ ತರುತ್ತೇನೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ

ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…

5 hours ago

ನಕಲಿ ಔಷಧ ತಯಾರಿಕಾ, ಮಾರಾಟ ಜಾಲ ; ವಿದೇಶದಲ್ಲಿ ಕಿಂಗ್‌ಪಿನ್ ಬಂಧನ

ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…

6 hours ago

ಗೋಣಿಕೊಪ್ಪ | ಮಾರುಕಟ್ಟೆಯಲ್ಲಿ ಗಸ್ತು ತಿರುಗಿದ ಪೊಲೀಸರು ; ಅಕ್ರಮ ಚಟುವಟಿಕೆ ಮೇಲೆ ನಿಗಾ

ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…

7 hours ago

ಪಾರದೀಪ್ ಕರಾವಳಿಯಲ್ಲಿ ಹಡಗು ಮುಳುಗಡೆ ; ಇಬ್ಬರ ರಕ್ಷಣೆ, 22 ಮಂದಿ ನಾಪತ್ತೆ

72,100 ಟನ್‌ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…

8 hours ago

ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಬಾಗಿಲು ಒಡೆದು ಇಡಿ ದಾಳಿ

ಬೆಂಗಳೂರು : ಕೆಪಿಎಸ್‌ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…

9 hours ago