ಬೆಂಗಳೂರು : ನಮ್ಮ ಮೆಟ್ರೋ ಪ್ರಯಾಣ ದರಗಳಲ್ಲಿ ಫೆಬ್ರವರಿ 9ರಿಂದ ಯೋಜಿಸಲಾಗಿದ್ದ ಸುಮಾರು 5% ಏರಿಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ಕೇಂದ್ರ ನಗರಾಭಿವೃದ್ಧಿ ಸಚಿವ ಮನೋಹರ್ ಲಾಲ್ ಖಟ್ಟರ್ ಅವರೊಂದಿಗೆ ನಡೆಸಿದ ಚರ್ಚೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ಘೋಷಿಸಿದ್ದಾರೆ.
ಸಂಸದ ತೇಜಸ್ವಿ ಸೂರ್ಯ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಹೇಳಿಕೆ ನೀಡಿ, “ಕೇಂದ್ರ ಸಚಿವರೊಂದಿಗಿನ ದೂರವಾಣಿ ಸಂಭಾಷಣೆಯ ನಂತರ, ಫೆಬ್ರವರಿ 9ರಿಂದ ಯಾವುದೇ ದರ ಏರಿಕೆ ಇರುವುದಿಲ್ಲ ಎಂದು ಸೂಚಿಸಲಾಗಿದೆ. ಇದು ತಾತ್ಕಾಲಿಕ ಸ್ಥಗಿತವಾಗಿದ್ದು, ದರ ನಿಗದಿ ಸಮಿತಿಯ (Fare Fixation Committee – FFC) ಲೆಕ್ಕಾಚಾರದಲ್ಲಿನ ದೋಷಗಳನ್ನು ಪರಿಶೀಲಿಸಲಾಗುವುದು” ಎಂದು ತಿಳಿಸಿದ್ದಾರೆ.
ಫೆಬ್ರವರಿ 5ರಂದು ಸಚಿವ ಖಟ್ಟರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಂಸದ ತೇಜಸ್ವಿ, ಹೊಸ ದರ ನಿಗದಿ ಸಮಿತಿ ರಚಿಸಿ, ದರ ಏರಿಕೆಯನ್ನು ಸ್ಥಗಿತಗೊಳಿಸಬೇಕು ಎಂದು ಕೋರಿದರು. ಫೆಬ್ರವರಿ 7ರಂದು ಪೂನಃ ದೂರವಾಣಿ ಮೂಲಕ ಚರ್ಚೆ ನಡೆಸಿ, ತಕ್ಷಣದ ಹಸ್ತಕ್ಷೇಪಕ್ಕೆ ಮನವಿ ಮಾಡಿದರು. “ಬೆಂಗಳೂರು ಮೆಟ್ರೋ ದರಗಳು ದೇಶದಲ್ಲೇ ಅತಿ ಹೆಚ್ಚು. ಇನ್ನೊಂದು ಏರಿಕೆ ಸಾಮಾನ್ಯ ಜನರಿಗೆ ಸಾರಿಗೆಯನ್ನು ದುಬಾರಿಯಾಗಿಸುತ್ತದೆ” ಎಂದು ಟೀಕಿಸಿದರು. ರಾಜ್ಯ ಸರ್ಕಾರದ ಕಾಂಗ್ರೆಸ್ ನೇತೃತ್ವವನ್ನು ಟೀಕಿಸಿ, “ರಾಜ್ಯ ಸರ್ಕಾರವೇ ದರ ಏರಿಕೆಗೆ ಕಾರಣ. ‘ಶ್ಯಾಡೋ ಕ್ಯಾಶ್ ಸಪೋರ್ಟ್’ ಹಿಂತೆಗೆದುಕೊಂಡಿದ್ದರಿಂದ ಈ ಸ್ಥಿತಿ ಉಂಟಾಗಿದೆ” ಎಂದು ಆರೋಪಿಸಿದರು.
ರಾಜ್ಯ ಸರ್ಕಾರದ ಪ್ರತಿಕ್ರಿಯೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದರ ನಿಗದಿ ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿಲ್ಲ ಎಂದು ಹೇಳಿದ್ದರು. ಆದರೆ ಸಂಸದ ಸೂರ್ಯ ಅವರು ದಾಖಲೆಗಳನ್ನು ತೋರಿಸಿ, ರಾಜ್ಯದ ಹಣಕಾಸು ಮತ್ತು ನಗರಾಭಿವೃದ್ಧಿ ಇಲಾಖೆಗಳೇ ದರ ಏರಿಕೆಗೆ ಒತ್ತಾಯಿಸಿದ್ದಾಗಿ ಆರೋಪಿಸಿದ್ದಾರೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…