ಬೆಂಗಳೂರು: ರಾಜ್ಯದ ಎಲ್ಲ ಚಿತ್ರಮಂದಿರ ಮತ್ತು ಮಲ್ಟಿಪ್ಲೆಕ್ಸ್ಗಳಲ್ಲಿ ಇನ್ನು ಮುಂದೆ ಏಕರೂಪದ ದರ ಇರಬೇಕು ಎಂದು ಸರ್ಕಾರ ಆದೇಶಿಸಿದೆ. ಆ ಮೂಲಕ ರಾಜ್ಯಾದ್ಯಂತ ಒಂದೇ ದರ ನಿಗದಿ ಮಾಡಲಾಗಿದೆ.
ಸಿನಿಮಾ ಪ್ರದರ್ಶನದ ಟಿಕೆಟ್ ಬೆಲೆ 200 ರೂ. ಮೀರಬಾರದು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದು ಎಲ್ಲ ಭಾಷೆಯ ಸಿನಿಮಾಗಳಿಗೂ ಅನ್ವಯ ಆಗಲಿದೆ.
ಕನ್ನಡ ಚಿತ್ರರಂಗ ಕಷ್ಟದಲ್ಲಿದೆ. ನಿರೀಕ್ಷಿತ ಪ್ರಮಾಣದ ಪ್ರೇಕ್ಷಕರು ಬಾರದೇ ಇರುವುದರಿಂದ ಅನೇಕ ಚಿತ್ರಮಂದಿರಗಳನ್ನು ಮುಚ್ಚಲಾಗಿದೆ. ಕರ್ನಾಟಕದಲ್ಲಿಯೇ ಪರಭಾಷೆ ಸಿನಿಮಾಗಳು ಬಹುಕೋಟಿ ರೂಪಾಯಿ ಮಾಡಿಕೊಳ್ಳುತ್ತವೆ. ಪರಭಾಷೆ ಸಿನಿಮಾಗಳ ಟಿಕೆಟ್ಗಳು ಸಾವಿರ ರೂಪಾಯಿ ಮೀರಿದ ಉದಾಹರಣೆ ಕೂಡ ಇದೆ. ಆದ್ದರಿಂದ ಟಿಕೆಟ್ ಬೆಲೆ ಕಡಿಮೆ ಆಗಬೇಕು ಎಂಬುದು ಬಹುದಿನಗಳ ಬೇಡಿಕೆ ಆಗಿತ್ತು.
2025-26ನೇ ಸಾಲಿನ ರಾಜ್ಯ ಬಜೆಟ್ನಲ್ಲಿ ಸರ್ಕಾರ ಈ ಬಗ್ಗೆ ಪ್ರಕಟಿಸಿತ್ತು. ಮಲ್ಟಿಪ್ಲೆಕ್ಸ್ಗಳಲ್ಲಿ ಎಗ್ಗಿಲ್ಲದೇ ಏರಿಕೆ ಆಗುತ್ತಿದ್ದ ಟಿಕೆಟ್ ಬೆಲೆಗೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿತ್ತು.
ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…
ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…
ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…
ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…
ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…