ರಾಜ್ಯ

ಎಸ್‌ಎಸ್‌ಎಲ್‌ಸಿ, ಪಿಯುಸಿ ಮಕ್ಕಳಿಗೆ ಗುಡ್‌ನ್ಯೂಸ್:‌ ಏನದು ಗೊತ್ತಾ?

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಮಕ್ಕಳಿಗೆ ಗುಡ್‌ನ್ಯೂಸ್‌ ಸಿಕ್ಕಿದ್ದು, ಪಾಸ್‌ ಆಗುವ ಕನಿಷ್ಠ ಅಂಕವನ್ನು ಇಳಿಕೆ ಮಾಡಲಾಗಿದೆ.

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು 600ಕ್ಕೆ 198 ಅಂಕ ಪಡೆದರೆ ಪಾಸ್‌ ಆಗುತ್ತಾರೆ. ಇನ್ನು ಮುಂದೆ ಉತ್ತೀರ್ಣ ಅಂಕವನ್ನು 33ಕ್ಕೆ ನಿಗದಿ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಇದನ್ನು ಓದಿ: ಎಸ್‌ಎಸ್‌ಎಲ್‌ಸಿ ಪರೀಕ್ಷಾ ಶುಲ್ಕ ಶೇ.5ರಷ್ಟು ಹೆಚ್ಚಳ: ಪೋಷಕರ ಆಕ್ರೋಶ

ಕನ್ನಡ ಭಾಷೆಗೆ ನಿಗದಿ ಮಾಡಿರುವ 125 ಅಂಕವನ್ನು 100ಕ್ಕೆ ಇಳಿಸುವ ಬಗ್ಗೆ ಇನ್ನೂ ಯಾವುದೇ ಚರ್ಚೆಯಾಗಿಲ್ಲ. ಸಾರ್ವಜನಿಕರ ಅಭಿಪ್ರಾಯವನ್ನು ತೆಗೆದುಕೊಂಡ ಬಳಿಕ ನಿರ್ಧಾರ ಮಾಡುತ್ತೇವೆ. ಎಲ್ಲಾ ವಿಷಯಗಳಿಗೆ ನಿಗದಿ ಮಾಡಿರುವ ಉತ್ತೀರ್ಣ ಅಂಕ 35ನ್ನು 33ಕ್ಕೆ ಇಳಿಸುವ ಬಗ್ಗೆ ಚರ್ಚಿಸಲು ಸಾರ್ವಜನಿಕ ವಲಯಕ್ಕೆ ಬಿಟ್ಟಿದ್ದೇವೆ.

ಅದರಲ್ಲಿ ಸುಮಾರು 701 ಮಂದಿ 33 ಅಂಕಗಳ ಪರವಾಗಿಯೂ ಹಾಗೂ 35ರ ಪರವಾಗಿ ಕೇವಲ 8 ಅಭಿಪ್ರಾಯಗಳು ಬಂದವು. ಹೀಗಾಗಿ ಈ ಶೈಕ್ಷಣಿಕ ವರ್ಷದಿಂದ ನಮ್ಮ ರಾಜ್ಯದಲ್ಲಿ ಉತ್ತೀರ್ಣ ಅಂಕವನ್ನು 33ಕ್ಕೆ ನಿಗದಿ ಮಾಡಲಾಗಿದೆ. ಈ ಬಗ್ಗೆ ನಾಳೆ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಎಲ್‌ಪಿಜಿ ಸಿಲಿಂಡರ್‌ ಸಿಗುತ್ತದೆ, ಜನರಲ್ಲಿ ಭೀತಿ ಬೇಡ : ಕೇಂದ್ರ

ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…

6 hours ago

IPL 2026 | ಮಾ.28ರಿಂದ ಪಂದ್ಯ ಆರಂಭ, ಬೆಂಗಳೂರಿನಲ್ಲಿ ಉದ್ಘಾಟನೆ, ಹೀಗಿದೆ ವೇಳಾಪಟ್ಟಿ

ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…

7 hours ago

“ಸಂಶೋಧನೆಗೆ AI ನಿಂದಲ್ಲ, ಸ್ವಂತಿಕೆಯಿಂದ ಕೂಡಿರಲಿ” : ಕುಲಪತಿ ಶರಣಪ್ಪ ಹಲಸೆ ಸಲಹೆ

ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…

7 hours ago

ಖಾತೆ ಮಾಡಿಕೊಡದ ಅಧಿಕಾರಿಗಳು : ರೈತನಿಂದ ವಿಷ ಸೇವನೆ ಯತ್ನ

ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…

7 hours ago

ಹಡುಗುಗಳ ಮೇಲೆ ದಾಳಿ : ಇಬ್ಬರು ಭಾರತೀಯರ ಸಾವು

ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…

8 hours ago

ಗುಂಡ್ಲುಪೇಟೆ | ಕತ್ತು ಕೂಯ್ದು ವ್ಯಕ್ತಿಯ ಬರ್ಬರ ಹತ್ಯೆ

ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…

8 hours ago