ಬೆಂಗಳೂರು: ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಮಕ್ಕಳಿಗೆ ಗುಡ್ನ್ಯೂಸ್ ಸಿಕ್ಕಿದ್ದು, ಪಾಸ್ ಆಗುವ ಕನಿಷ್ಠ ಅಂಕವನ್ನು ಇಳಿಕೆ ಮಾಡಲಾಗಿದೆ.
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು 600ಕ್ಕೆ 198 ಅಂಕ ಪಡೆದರೆ ಪಾಸ್ ಆಗುತ್ತಾರೆ. ಇನ್ನು ಮುಂದೆ ಉತ್ತೀರ್ಣ ಅಂಕವನ್ನು 33ಕ್ಕೆ ನಿಗದಿ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಇದನ್ನು ಓದಿ: ಎಸ್ಎಸ್ಎಲ್ಸಿ ಪರೀಕ್ಷಾ ಶುಲ್ಕ ಶೇ.5ರಷ್ಟು ಹೆಚ್ಚಳ: ಪೋಷಕರ ಆಕ್ರೋಶ
ಕನ್ನಡ ಭಾಷೆಗೆ ನಿಗದಿ ಮಾಡಿರುವ 125 ಅಂಕವನ್ನು 100ಕ್ಕೆ ಇಳಿಸುವ ಬಗ್ಗೆ ಇನ್ನೂ ಯಾವುದೇ ಚರ್ಚೆಯಾಗಿಲ್ಲ. ಸಾರ್ವಜನಿಕರ ಅಭಿಪ್ರಾಯವನ್ನು ತೆಗೆದುಕೊಂಡ ಬಳಿಕ ನಿರ್ಧಾರ ಮಾಡುತ್ತೇವೆ. ಎಲ್ಲಾ ವಿಷಯಗಳಿಗೆ ನಿಗದಿ ಮಾಡಿರುವ ಉತ್ತೀರ್ಣ ಅಂಕ 35ನ್ನು 33ಕ್ಕೆ ಇಳಿಸುವ ಬಗ್ಗೆ ಚರ್ಚಿಸಲು ಸಾರ್ವಜನಿಕ ವಲಯಕ್ಕೆ ಬಿಟ್ಟಿದ್ದೇವೆ.
ಅದರಲ್ಲಿ ಸುಮಾರು 701 ಮಂದಿ 33 ಅಂಕಗಳ ಪರವಾಗಿಯೂ ಹಾಗೂ 35ರ ಪರವಾಗಿ ಕೇವಲ 8 ಅಭಿಪ್ರಾಯಗಳು ಬಂದವು. ಹೀಗಾಗಿ ಈ ಶೈಕ್ಷಣಿಕ ವರ್ಷದಿಂದ ನಮ್ಮ ರಾಜ್ಯದಲ್ಲಿ ಉತ್ತೀರ್ಣ ಅಂಕವನ್ನು 33ಕ್ಕೆ ನಿಗದಿ ಮಾಡಲಾಗಿದೆ. ಈ ಬಗ್ಗೆ ನಾಳೆ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ತಿಳಿಸಿದರು.
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…
ಮೈಸೂರು : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…
ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…
ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…