ರಾಜ್ಯ

ಬಾಡಿಗೆದಾರರಿಗೆ ಶುಭ ಸುದ್ದಿ- ಗೃಹಜ್ಯೋತಿಗೆ ಡಿ-ಲಿಂಕ್

ಮೈಸೂರು: ಬಾಡಿಗೆದಾರರಿಗೊಂದು ಸಿಹಿ ಸುದ್ದಿ. ಕಾಂಗ್ರೆಸ್‌ ತನ್ನ ಮಹತ್ವಾಕಾಂಕ್ಷಿ ಗೃಹಜ್ಯೋತಿ ಯೋಜನೆಗೆ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಡಿ-ಲಿಂಕ್‌ಗೆ  ಅವಕಾಶ ಮಾಡಿಕೊಟ್ಟಿದೆ. ಅದರಂತೆ ಬಾಡಿಗೆದಾರರು ಮನೆ ಬದಲಾಯಿಸಿದಾಗೆಲ್ಲ ಹಳೇ ಮನೆಯ ಆರ್‌.ಆರ್‌. ನಂಬರ್‌ನೊಂದಿಗೆ ಆಧಾರ್‌ ಸಂಖ್ಯೆ ಕಡಿತಗೊಳಿಸಿ, ಹೊಸದಾಗಿ ಲಿಂಕ್‌ ಮಾಡಿಕೊಳ್ಳಬಹುದಾಗಿದೆ.

ಆಗ, ಹೊಸ ಬಾಡಿಗೆ ಮನೆಗೆ ಹೋದ ನಂತರವೂ ತಮ್ಮ ಈ ಹಿಂದಿನ ಸರಾಸರಿಯಷ್ಟೇ ವಿದ್ಯುತ್‌ ಬಳಸಲು ಗ್ರಾಹಕರಿಗೆ ಅನುಕೂಲ ಆಗಲಿದೆ.

ಪ್ರಸ್ತುತ ಡಿ-ಲಿಂಕ್‌ಗೆ ಅವಕಾಶ ಇರಲಿಲ್ಲ. ಹಾಗಾಗಿ, ಯಾವುದೇ ಬಾಡಿಗೆದಾರರು ಮನೆ ಬದಲಾಯಿಸಿದರೆ ಅಲ್ಲಿದ್ದ ಈ ಹಿಂದಿನ ಸರಾಸರಿ ವಿದ್ಯುತ್‌ ಬಳಕೆಗೆ ಅಡ್ಜೆಸ್ಟ್‌ ಆಗಬೇಕಾದ ಅನಿವಾರ್ಯತೆ ಇದೆ. ಹಾಗಾಗಿ, ಕೆಲವರು ತಮ್ಮ ಕುಟುಂಬದ ಬೇರೆ ಸದಸ್ಯರ ಆಧಾರ್‌ ಲಿಂಕ್‌ ಮಾಡುತ್ತಿದ್ದಾರೆ. ಈ ಕಿರಿಕಿರಿ ತಪ್ಪಿಸಲು ಇಂಧನ ಇಲಾಖೆ ಈಗ ಡಿ-ಲಿಂಕ್‌ಗೆ ಅವಕಾಶ ಮಾಡಿಕೊಟ್ಟಿದೆ.

ಡಿ-ಲಿಂಕ್‌ ಮಾಡುವುದು ಹೇಗೆ…?

ಡಿ-ಲಿಂಕ್‌ ಅನ್ನು ಈಗಾಗಲೇ ಗೃಹಜ್ಯೋತಿ ಸೌಲಭ್ಯ ಪಡೆಯಲು ವಿವಿಧ ವಿದ್ಯುತ್‌ ಸರಬರಾಜು ಕಂಪನಿ (ಎಸ್ಕಾಂ)ಗಳ ಉಪಕೇಂದ್ರಗಳಲ್ಲಿ “ಆಧಾರ್‌’ ಲಿಂಕ್‌ ಮಾಡುವ ಸೌಲಭ್ಯ ಕಲ್ಪಿಸಲಾಗಿದೆ. ಅಲ್ಲಿಯೇ ಈ ಡಿ-ಲಿಂಕ್‌ ಕೂಡ ಮಾಡಬಹುದು. ಅಥವಾ ನೇರವಾಗಿ  https://sevasindhu.karnataka.gov.in/ GruhaJyothiDelink/GetAadhaarData.aspx ಲಿಂಕ್‌ ಮೂಲಕವೂ ಗ್ರಾಹಕರು ನೋಂದಾಯಿಸಿಕೊಳ್ಳಬಹುದು. ಗೃಹಜ್ಯೋತಿ ಪೋರ್ಟಲ್‌ ಓಪನ್‌ ಆಗದೆ ಇದ್ದರೆ, Cache Memory Clear ಮಾಡಿ ನಂತರ ಪೋರ್ಟಲ್‌ ಲಿಂಕ್‌ ಕ್ಲಿಕ್‌ ಮಾಡಿ ಸೇವೆಯನ್ನು ಪಡೆಯಬಹುದು. ಹೊಸ ಲಿಂಕ್‌ ಪಡೆಯುವ ಮುನ್ನ ಡಿ-ಲಿಂಕ್‌ ಮಾಡಿರುವುದನ್ನು ಖಾತ್ರಿಪಡಿಸಿಕೊಳ್ಳಬೇಕು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಗ್ರಂಥಾಲಯ ನಿರ್ಮಿಸಿ

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ಗ್ರಂಥಾಲಯವಿಲ್ಲದೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದಲ್ಲಿ ೧೦೦ಕ್ಕೂ ಹೆಚ್ಚು…

3 hours ago

ಓದುಗರ ಪತ್ರ: ಪತ್ರಿಕಾ ವಿತರಕರಿಗೆ ಸೌಲಭ್ಯ ಕಲ್ಪಿಸಿ

ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ…

3 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳನ್ನು ಉನ್ನತೀಕರಣಗೊಳಿಸಿ

ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿರುವ ಸರ್ಕಾರಿ ಶಾಲೆಯನ್ನು ಉನ್ನತಿಕರಣಗೊಳಿಸದೇ ಇರುವುರಿಂದ ಪೋಷಕರು ಮಕ್ಕಳನ್ನು ಶಾಲೆಗೆ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಸ್ತುತ…

3 hours ago

ಓದುಗರ ಪತ್ರ: ಭಾರತೀಯ ರಿಸರ್ವ್ ಬ್ಯಾಂಕಿನ ಕ್ರಮ ಸ್ವಾಗತಾರ್ಹ

ಸೈಬರ್ ವಂಚನೆಯ ಸಂತ್ರಸ್ತರಿಗೆ ಗರಿಷ್ಟ ರೂ.೨೫,೦೦೦ ಪರಿಹಾರ ನೀಡುವುದಾಗಿ ಭಾರತದ ರಿಸರ್ವ್ ಬ್ಯಾಂಕ್ ಪ್ರಕಟಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ, ಅನೇಕ ಸಂದರ್ಭಗಳಲ್ಲಿ…

3 hours ago

ಓದುಗರ ಪತ್ರ: ಸೆಸ್ಕ್ ಭೂಗತ ಕೇಬಲ್ ಅಳವಡಿಕೆ ಅವಾಂತರಗಳು

ಮೈಸೂರಿನ ಕೆಲವು ಬಡಾವಣೆಗಳಲ್ಲಿ ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ದವರು ಭೂಗತ ಕೇಬಲ್ ಅಳವಡಿಸುವ ಸಲುವಾಗಿ ಯಂತ್ರಗಳ…

4 hours ago

ವಿವಿಗಳಲ್ಲಿ ಸಾಮಾಜಿಕ ನ್ಯಾಯ: ಸಂಕಟಗಳು – ಸವಾಲುಗಳು

 ಡಾ.ಶಿವಲಿಂಗಸ್ವಾಮಿ ಎಚ್.ಕೆ. ಯುಜಿಸಿ- ೨೦೨೬ ನಿಯಮಾವಳಿಗಳು ಹೇಳುವುದೇನು? ಉನ್ನತ ಶಿಕ್ಷಣದಲ್ಲಿ ಸೃಷ್ಟಿಸಬೇಕಿರುವ ಸಮಾನತೆಗೆ ಸಂಬಂಧಿಸಿದಂತೆ ಯುಜಿಸಿ (ವಿಶ್ವವಿದ್ಯಾಲಯಗಳ ಅನುದಾನ ಆಯೋಗ)-೨೦೨೬ರ…

4 hours ago