ರಾಜ್ಯ

ಬಾಡಿಗೆದಾರರಿಗೆ ಶುಭ ಸುದ್ದಿ- ಗೃಹಜ್ಯೋತಿಗೆ ಡಿ-ಲಿಂಕ್

ಮೈಸೂರು: ಬಾಡಿಗೆದಾರರಿಗೊಂದು ಸಿಹಿ ಸುದ್ದಿ. ಕಾಂಗ್ರೆಸ್‌ ತನ್ನ ಮಹತ್ವಾಕಾಂಕ್ಷಿ ಗೃಹಜ್ಯೋತಿ ಯೋಜನೆಗೆ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಡಿ-ಲಿಂಕ್‌ಗೆ  ಅವಕಾಶ ಮಾಡಿಕೊಟ್ಟಿದೆ. ಅದರಂತೆ ಬಾಡಿಗೆದಾರರು ಮನೆ ಬದಲಾಯಿಸಿದಾಗೆಲ್ಲ ಹಳೇ ಮನೆಯ ಆರ್‌.ಆರ್‌. ನಂಬರ್‌ನೊಂದಿಗೆ ಆಧಾರ್‌ ಸಂಖ್ಯೆ ಕಡಿತಗೊಳಿಸಿ, ಹೊಸದಾಗಿ ಲಿಂಕ್‌ ಮಾಡಿಕೊಳ್ಳಬಹುದಾಗಿದೆ.

ಆಗ, ಹೊಸ ಬಾಡಿಗೆ ಮನೆಗೆ ಹೋದ ನಂತರವೂ ತಮ್ಮ ಈ ಹಿಂದಿನ ಸರಾಸರಿಯಷ್ಟೇ ವಿದ್ಯುತ್‌ ಬಳಸಲು ಗ್ರಾಹಕರಿಗೆ ಅನುಕೂಲ ಆಗಲಿದೆ.

ಪ್ರಸ್ತುತ ಡಿ-ಲಿಂಕ್‌ಗೆ ಅವಕಾಶ ಇರಲಿಲ್ಲ. ಹಾಗಾಗಿ, ಯಾವುದೇ ಬಾಡಿಗೆದಾರರು ಮನೆ ಬದಲಾಯಿಸಿದರೆ ಅಲ್ಲಿದ್ದ ಈ ಹಿಂದಿನ ಸರಾಸರಿ ವಿದ್ಯುತ್‌ ಬಳಕೆಗೆ ಅಡ್ಜೆಸ್ಟ್‌ ಆಗಬೇಕಾದ ಅನಿವಾರ್ಯತೆ ಇದೆ. ಹಾಗಾಗಿ, ಕೆಲವರು ತಮ್ಮ ಕುಟುಂಬದ ಬೇರೆ ಸದಸ್ಯರ ಆಧಾರ್‌ ಲಿಂಕ್‌ ಮಾಡುತ್ತಿದ್ದಾರೆ. ಈ ಕಿರಿಕಿರಿ ತಪ್ಪಿಸಲು ಇಂಧನ ಇಲಾಖೆ ಈಗ ಡಿ-ಲಿಂಕ್‌ಗೆ ಅವಕಾಶ ಮಾಡಿಕೊಟ್ಟಿದೆ.

ಡಿ-ಲಿಂಕ್‌ ಮಾಡುವುದು ಹೇಗೆ…?

ಡಿ-ಲಿಂಕ್‌ ಅನ್ನು ಈಗಾಗಲೇ ಗೃಹಜ್ಯೋತಿ ಸೌಲಭ್ಯ ಪಡೆಯಲು ವಿವಿಧ ವಿದ್ಯುತ್‌ ಸರಬರಾಜು ಕಂಪನಿ (ಎಸ್ಕಾಂ)ಗಳ ಉಪಕೇಂದ್ರಗಳಲ್ಲಿ “ಆಧಾರ್‌’ ಲಿಂಕ್‌ ಮಾಡುವ ಸೌಲಭ್ಯ ಕಲ್ಪಿಸಲಾಗಿದೆ. ಅಲ್ಲಿಯೇ ಈ ಡಿ-ಲಿಂಕ್‌ ಕೂಡ ಮಾಡಬಹುದು. ಅಥವಾ ನೇರವಾಗಿ  https://sevasindhu.karnataka.gov.in/ GruhaJyothiDelink/GetAadhaarData.aspx ಲಿಂಕ್‌ ಮೂಲಕವೂ ಗ್ರಾಹಕರು ನೋಂದಾಯಿಸಿಕೊಳ್ಳಬಹುದು. ಗೃಹಜ್ಯೋತಿ ಪೋರ್ಟಲ್‌ ಓಪನ್‌ ಆಗದೆ ಇದ್ದರೆ, Cache Memory Clear ಮಾಡಿ ನಂತರ ಪೋರ್ಟಲ್‌ ಲಿಂಕ್‌ ಕ್ಲಿಕ್‌ ಮಾಡಿ ಸೇವೆಯನ್ನು ಪಡೆಯಬಹುದು. ಹೊಸ ಲಿಂಕ್‌ ಪಡೆಯುವ ಮುನ್ನ ಡಿ-ಲಿಂಕ್‌ ಮಾಡಿರುವುದನ್ನು ಖಾತ್ರಿಪಡಿಸಿಕೊಳ್ಳಬೇಕು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಚಾಮರಾಜನಗರ| ಒಟ್ಟಿಗೆ ಕಾಣಿಸಿಕೊಂಡ ಐದು ಹುಲಿಗಳು: ಭಯಭೀತರಾದ ಗ್ರಾಮಸ್ಥರು

ಚಾಮರಾಜನಗರ: ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲ್ಲೂಕುಗಳ ಗ್ರಾಮಸ್ಥರಲ್ಲಿ ವ್ಯಾಘ್ರಗಳ ಆತಂಕ ಮನೆ ಮಾಡಿದೆ. ಒಟ್ಟಿಗೆ ಐದು ಹುಲಿಗಳು ರಸ್ತೆಯಲ್ಲಿ ಹಾದು…

20 mins ago

ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿ

ಹಾಸನ: ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿಯಾಗಿರುವ ಘಟನೆ ನಡೆದಿದೆ. ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ದೊಡ್ಡಳ್ಳಿ ಗ್ರಾಮದ ಸುಧಾಮಣಿ ಹಾಗೂ…

41 mins ago

ಅಸ್ಸಾಂನಲ್ಲಿ ಘೋರ ದುರಂತ: ರೈಲು ಡಿಕ್ಕಿಯಾಗಿ 7 ಆನೆಗಳು ಸಾವು

ಗುವಾಹಟಿ: ರೈಲು ಡಿಕ್ಕಿ ಹೊಡೆದ ಪರಿಣಾಮ ಏಳು ಆನೆಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಒಂದು ಆನೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಸ್ಸಾಂನ…

2 hours ago

ಬುರುಡೆ ಗ್ಯಾಂಗ್‌ನಲ್ಲಿ ಬಿರುಕು: ಏನಾಗಿದೆ ಗೊತ್ತಾ?

ಮಂಗಳೂರು: ಧರ್ಮಸ್ಥಳ ಷಡ್ಯಂತ್ರ ಪ್ರಕರಣದ ಪ್ರಮುಖ ಆರೋಪಿ ಮಾಸ್ಕ್‌ ಮ್ಯಾನ್‌ ಚಿನ್ನಯ್ಯ ಇದೀಗ ಬುರುಡೆ ಗ್ಯಾಂಗ್‌ ವಿರುದ್ಧವೇ ತಿರುಗಿ ಬಿದ್ದಿದ್ದಾನೆ.…

2 hours ago

ದ್ವೇಷ ಭಾಷಣ ಪ್ರತಿಬಂಧನ ಮಸೂದೆಗೆ ಅಂಕಿತ ಹಾಕದಂತೆ ರಾಜ್ಯಪಾಲರಿಗೆ ಪತ್ರ ಬರೆದ ಶೋಭಾ ಕರಂದ್ಲಾಜೆ

ಬೆಂಗಳೂರು: ಬೆಳಗಾವಿ ವಿಧಾನಮಂಡಲ ಅಧಿವೇಶನದಲ್ಲಿ ಅಂಗೀಕರಿಸಲಾದ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಮಸೂದೆಗೆ ಅಂಕಿತ ಹಾಕಬಾರದು…

2 hours ago

ಓದುಗರ ಪತ್ರ: ಕಾನೂನು ಎಷ್ಟರ ಮಟ್ಟಿಗೆ ಕೆಲಸ ಮಾಡುತ್ತೆ?

ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ವಿಧೇಯಕವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಡಿ.೧೮ರಂದು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ…

3 hours ago