ರಾಜ್ಯ

ಬಾಡಿಗೆದಾರರಿಗೆ ಶುಭ ಸುದ್ದಿ- ಗೃಹಜ್ಯೋತಿಗೆ ಡಿ-ಲಿಂಕ್

ಮೈಸೂರು: ಬಾಡಿಗೆದಾರರಿಗೊಂದು ಸಿಹಿ ಸುದ್ದಿ. ಕಾಂಗ್ರೆಸ್‌ ತನ್ನ ಮಹತ್ವಾಕಾಂಕ್ಷಿ ಗೃಹಜ್ಯೋತಿ ಯೋಜನೆಗೆ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಡಿ-ಲಿಂಕ್‌ಗೆ  ಅವಕಾಶ ಮಾಡಿಕೊಟ್ಟಿದೆ. ಅದರಂತೆ ಬಾಡಿಗೆದಾರರು ಮನೆ ಬದಲಾಯಿಸಿದಾಗೆಲ್ಲ ಹಳೇ ಮನೆಯ ಆರ್‌.ಆರ್‌. ನಂಬರ್‌ನೊಂದಿಗೆ ಆಧಾರ್‌ ಸಂಖ್ಯೆ ಕಡಿತಗೊಳಿಸಿ, ಹೊಸದಾಗಿ ಲಿಂಕ್‌ ಮಾಡಿಕೊಳ್ಳಬಹುದಾಗಿದೆ.

ಆಗ, ಹೊಸ ಬಾಡಿಗೆ ಮನೆಗೆ ಹೋದ ನಂತರವೂ ತಮ್ಮ ಈ ಹಿಂದಿನ ಸರಾಸರಿಯಷ್ಟೇ ವಿದ್ಯುತ್‌ ಬಳಸಲು ಗ್ರಾಹಕರಿಗೆ ಅನುಕೂಲ ಆಗಲಿದೆ.

ಪ್ರಸ್ತುತ ಡಿ-ಲಿಂಕ್‌ಗೆ ಅವಕಾಶ ಇರಲಿಲ್ಲ. ಹಾಗಾಗಿ, ಯಾವುದೇ ಬಾಡಿಗೆದಾರರು ಮನೆ ಬದಲಾಯಿಸಿದರೆ ಅಲ್ಲಿದ್ದ ಈ ಹಿಂದಿನ ಸರಾಸರಿ ವಿದ್ಯುತ್‌ ಬಳಕೆಗೆ ಅಡ್ಜೆಸ್ಟ್‌ ಆಗಬೇಕಾದ ಅನಿವಾರ್ಯತೆ ಇದೆ. ಹಾಗಾಗಿ, ಕೆಲವರು ತಮ್ಮ ಕುಟುಂಬದ ಬೇರೆ ಸದಸ್ಯರ ಆಧಾರ್‌ ಲಿಂಕ್‌ ಮಾಡುತ್ತಿದ್ದಾರೆ. ಈ ಕಿರಿಕಿರಿ ತಪ್ಪಿಸಲು ಇಂಧನ ಇಲಾಖೆ ಈಗ ಡಿ-ಲಿಂಕ್‌ಗೆ ಅವಕಾಶ ಮಾಡಿಕೊಟ್ಟಿದೆ.

ಡಿ-ಲಿಂಕ್‌ ಮಾಡುವುದು ಹೇಗೆ…?

ಡಿ-ಲಿಂಕ್‌ ಅನ್ನು ಈಗಾಗಲೇ ಗೃಹಜ್ಯೋತಿ ಸೌಲಭ್ಯ ಪಡೆಯಲು ವಿವಿಧ ವಿದ್ಯುತ್‌ ಸರಬರಾಜು ಕಂಪನಿ (ಎಸ್ಕಾಂ)ಗಳ ಉಪಕೇಂದ್ರಗಳಲ್ಲಿ “ಆಧಾರ್‌’ ಲಿಂಕ್‌ ಮಾಡುವ ಸೌಲಭ್ಯ ಕಲ್ಪಿಸಲಾಗಿದೆ. ಅಲ್ಲಿಯೇ ಈ ಡಿ-ಲಿಂಕ್‌ ಕೂಡ ಮಾಡಬಹುದು. ಅಥವಾ ನೇರವಾಗಿ  https://sevasindhu.karnataka.gov.in/ GruhaJyothiDelink/GetAadhaarData.aspx ಲಿಂಕ್‌ ಮೂಲಕವೂ ಗ್ರಾಹಕರು ನೋಂದಾಯಿಸಿಕೊಳ್ಳಬಹುದು. ಗೃಹಜ್ಯೋತಿ ಪೋರ್ಟಲ್‌ ಓಪನ್‌ ಆಗದೆ ಇದ್ದರೆ, Cache Memory Clear ಮಾಡಿ ನಂತರ ಪೋರ್ಟಲ್‌ ಲಿಂಕ್‌ ಕ್ಲಿಕ್‌ ಮಾಡಿ ಸೇವೆಯನ್ನು ಪಡೆಯಬಹುದು. ಹೊಸ ಲಿಂಕ್‌ ಪಡೆಯುವ ಮುನ್ನ ಡಿ-ಲಿಂಕ್‌ ಮಾಡಿರುವುದನ್ನು ಖಾತ್ರಿಪಡಿಸಿಕೊಳ್ಳಬೇಕು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪಿರಿಯಾಪಟ್ಟಣ | ನಿಲ್ಲದ ಸರ್ವರ್‌ ಸಮಸ್ಯೆ ; ಪಡಿತರ ಪಡೆಯಲು ಪರದಾಟ

ಪಿರಿಯಾಪಟ್ಟಣ : ಪಿರಿಯಾಪಟ್ಟಣದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಜನರು ಪಡಿತರ ಪಡೆಯಲು ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಜನಸಾಮಾನ್ಯರು ಎಂದಿನಂತೆ ಪ್ರತಿ…

2 hours ago

ಗೌರವಯುತವಾಗಿ ನಡೆದುಕೊಂಡ ಸಿದ್ದರಾಮಯ್ಯ : ಮಾಜಿ ಸಂಸದ ಪ್ರತಾಪ್‌ ಸಿಂಹ

ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…

3 hours ago

ನಾಳೆ ಸಿಎಲ್‌ಪಿ ಸಭೆ ಕರೆದಿದ್ದೇವೆ, ಸಿದ್ದರಾಮಯ್ಯ ಜತೆ ಚರ್ಚಿಸಿದ್ದೇನೆ : ಡಿ.ಕೆ.ಶಿವಕುಮಾರ್‌

ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…

4 hours ago

ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ…

9 hours ago

ರಾಜ್ಯ ಸಚಿವ ಸಂಪುಟ ವಿಸರ್ಜನೆ: ಸಚಿವರ ಸರ್ಕಾರಿ ವಾಹನಗಳು ವಾಪಸ್‌

ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…

9 hours ago

ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಡಿ.ಕೆ.ಶಿವಕುಮಾರ್‌

ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…

10 hours ago