ರಾಜ್ಯ

ಬಾಡಿಗೆದಾರರಿಗೆ ಶುಭ ಸುದ್ದಿ- ಗೃಹಜ್ಯೋತಿಗೆ ಡಿ-ಲಿಂಕ್

ಮೈಸೂರು: ಬಾಡಿಗೆದಾರರಿಗೊಂದು ಸಿಹಿ ಸುದ್ದಿ. ಕಾಂಗ್ರೆಸ್‌ ತನ್ನ ಮಹತ್ವಾಕಾಂಕ್ಷಿ ಗೃಹಜ್ಯೋತಿ ಯೋಜನೆಗೆ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಡಿ-ಲಿಂಕ್‌ಗೆ  ಅವಕಾಶ ಮಾಡಿಕೊಟ್ಟಿದೆ. ಅದರಂತೆ ಬಾಡಿಗೆದಾರರು ಮನೆ ಬದಲಾಯಿಸಿದಾಗೆಲ್ಲ ಹಳೇ ಮನೆಯ ಆರ್‌.ಆರ್‌. ನಂಬರ್‌ನೊಂದಿಗೆ ಆಧಾರ್‌ ಸಂಖ್ಯೆ ಕಡಿತಗೊಳಿಸಿ, ಹೊಸದಾಗಿ ಲಿಂಕ್‌ ಮಾಡಿಕೊಳ್ಳಬಹುದಾಗಿದೆ.

ಆಗ, ಹೊಸ ಬಾಡಿಗೆ ಮನೆಗೆ ಹೋದ ನಂತರವೂ ತಮ್ಮ ಈ ಹಿಂದಿನ ಸರಾಸರಿಯಷ್ಟೇ ವಿದ್ಯುತ್‌ ಬಳಸಲು ಗ್ರಾಹಕರಿಗೆ ಅನುಕೂಲ ಆಗಲಿದೆ.

ಪ್ರಸ್ತುತ ಡಿ-ಲಿಂಕ್‌ಗೆ ಅವಕಾಶ ಇರಲಿಲ್ಲ. ಹಾಗಾಗಿ, ಯಾವುದೇ ಬಾಡಿಗೆದಾರರು ಮನೆ ಬದಲಾಯಿಸಿದರೆ ಅಲ್ಲಿದ್ದ ಈ ಹಿಂದಿನ ಸರಾಸರಿ ವಿದ್ಯುತ್‌ ಬಳಕೆಗೆ ಅಡ್ಜೆಸ್ಟ್‌ ಆಗಬೇಕಾದ ಅನಿವಾರ್ಯತೆ ಇದೆ. ಹಾಗಾಗಿ, ಕೆಲವರು ತಮ್ಮ ಕುಟುಂಬದ ಬೇರೆ ಸದಸ್ಯರ ಆಧಾರ್‌ ಲಿಂಕ್‌ ಮಾಡುತ್ತಿದ್ದಾರೆ. ಈ ಕಿರಿಕಿರಿ ತಪ್ಪಿಸಲು ಇಂಧನ ಇಲಾಖೆ ಈಗ ಡಿ-ಲಿಂಕ್‌ಗೆ ಅವಕಾಶ ಮಾಡಿಕೊಟ್ಟಿದೆ.

ಡಿ-ಲಿಂಕ್‌ ಮಾಡುವುದು ಹೇಗೆ…?

ಡಿ-ಲಿಂಕ್‌ ಅನ್ನು ಈಗಾಗಲೇ ಗೃಹಜ್ಯೋತಿ ಸೌಲಭ್ಯ ಪಡೆಯಲು ವಿವಿಧ ವಿದ್ಯುತ್‌ ಸರಬರಾಜು ಕಂಪನಿ (ಎಸ್ಕಾಂ)ಗಳ ಉಪಕೇಂದ್ರಗಳಲ್ಲಿ “ಆಧಾರ್‌’ ಲಿಂಕ್‌ ಮಾಡುವ ಸೌಲಭ್ಯ ಕಲ್ಪಿಸಲಾಗಿದೆ. ಅಲ್ಲಿಯೇ ಈ ಡಿ-ಲಿಂಕ್‌ ಕೂಡ ಮಾಡಬಹುದು. ಅಥವಾ ನೇರವಾಗಿ  https://sevasindhu.karnataka.gov.in/ GruhaJyothiDelink/GetAadhaarData.aspx ಲಿಂಕ್‌ ಮೂಲಕವೂ ಗ್ರಾಹಕರು ನೋಂದಾಯಿಸಿಕೊಳ್ಳಬಹುದು. ಗೃಹಜ್ಯೋತಿ ಪೋರ್ಟಲ್‌ ಓಪನ್‌ ಆಗದೆ ಇದ್ದರೆ, Cache Memory Clear ಮಾಡಿ ನಂತರ ಪೋರ್ಟಲ್‌ ಲಿಂಕ್‌ ಕ್ಲಿಕ್‌ ಮಾಡಿ ಸೇವೆಯನ್ನು ಪಡೆಯಬಹುದು. ಹೊಸ ಲಿಂಕ್‌ ಪಡೆಯುವ ಮುನ್ನ ಡಿ-ಲಿಂಕ್‌ ಮಾಡಿರುವುದನ್ನು ಖಾತ್ರಿಪಡಿಸಿಕೊಳ್ಳಬೇಕು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಇಂದು ಸಂಜೆಯಿಂದಲೇ ಆನೆಗಳಿಗೆ ತಾಲೀಮು ಆರಂಭ: ಡಿಸಿಎಫ್‌ ಡಾ.ಪ್ರಭುಗೌಡ

ಮೈಸೂರು: ಮೊದಲ ಹಂತದಲ್ಲಿ ಆಗಮಿಸಿರುವ ದಸರಾ ಆನೆಗಳಿಗೆ ತೂಕ ಪರೀಕ್ಷೆ ಮಾಡಲಾಗಿದೆ. ಶ್ರೀಕಂಠ ಆನೆ ಹೆಚ್ಚು ತೂಕ ಹೊಂದಿದೆ. ಆದರೆ…

47 mins ago

ಮೈಸೂರು ದಸರಾ ಗಜಪಡೆ ಆನೆಗಳ ತೂಕ ಪರೀಕ್ಷೆ: ತೂಕದಲ್ಲಿ ಶ್ರೀಕಂಠನಿಗೆ ಮೊದಲ ಸ್ಥಾನ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಅರಮನೆ ಆವರಣದಲ್ಲಿ ಬೀಡುಬಿಟ್ಟಿರುವ ದಸರಾ ಗಜಪಡೆಗೆ ಇಂದು ತೂಕ ಪರೀಕ್ಷೆ…

1 hour ago

ಓದುಗರ ಪತ್ರ: ಬಾಗೂರು ಅಣೆಕಟ್ಟೆಗೆ ನೀರು ತುಂಬಿಸಿ

ನಂಜನಗೂಡು ತಾಲ್ಲೂಕು ಬಾಗೂರು ಅಣೆಕಟ್ಟೆ ದೊಡ್ಡ ಅಣೆಕಟ್ಟೆಯಾಗಿದೆ. ಹಿಂದೆ ಅನೇಕ ಹಳ್ಳಿಗಳಿಗೆ ಕೋಡಿ ತುಂಬಿ ಯಥೇಚ್ಛವಾಗಿ ಇದರಿಂದ ನೀರು ಹರಿದು…

4 hours ago

ಓದುಗರ ಪತ್ರ: ಈ ‘ಕೆಲಸ’ ಮುಂಚೆಯೇ ಆಗಬೇಕಿತ್ತು

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣದಲ್ಲಿ ಸಚಿವ ಬಿ.ನಾಗೇಂದ್ರ ಅವರು ರಾಜೀನಾಮೆ ನೀಡಿದ್ದಾರೆ. ಇದೇ ಹಗರಣಕ್ಕೆ ಸಂಬಂಧಿಸಿದಂತೆ, ಸಿದ್ದರಾಮಯ್ಯ…

4 hours ago

ಓದುಗರ ಪತ್ರ: ದಂಡ ವಸೂಲಿಯೇ ಪೊಲೀಸರ ಆದ್ಯತೆ ಆಗಬಾರದು

ಸಾಂಸ್ಕೃತಿಕ ನಗರಿ, ಅರೆಮನೆ ನಗರಿ, ಸ್ವಚ್ಛನಗರಿ, ಹಿರಿಯ ನಾಗರಿಕರ ಸ್ವರ್ಗ ಎಂದೆಲ್ಲಾ ಹೆಸರುವಾಸಿಯಾಗಿರುವ ಮೈಸೂರಿನಲ್ಲೂ ಈಗಿನ ಕಾನೂನು ವ್ಯವಸ್ಥೆಯ ಬಗ್ಗೆ…

4 hours ago

ವ್ಯವಸ್ಥೆಯನ್ನು ಪ್ರಶ್ನಿಸುವವರು ದಿಮಾಗಿ ನಕ್ಸಲರೇ?

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ದೇವರು, ಧರ್ಮ ಮತ್ತು ಪುರಾಣಗಳ ಗೊತ್ತಿಲ್ಲದ ಮತ್ತು ಅನುಮಾನಗೊಂಡ ಹಾಗೂ ಅರ್ಥವಾಗದ ವಿಷಯಗಳ…

4 hours ago