ಮೈಸೂರು: ಬಾಡಿಗೆದಾರರಿಗೊಂದು ಸಿಹಿ ಸುದ್ದಿ. ಕಾಂಗ್ರೆಸ್ ತನ್ನ ಮಹತ್ವಾಕಾಂಕ್ಷಿ ಗೃಹಜ್ಯೋತಿ ಯೋಜನೆಗೆ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಡಿ-ಲಿಂಕ್ಗೆ ಅವಕಾಶ ಮಾಡಿಕೊಟ್ಟಿದೆ. ಅದರಂತೆ ಬಾಡಿಗೆದಾರರು ಮನೆ ಬದಲಾಯಿಸಿದಾಗೆಲ್ಲ ಹಳೇ ಮನೆಯ ಆರ್.ಆರ್. ನಂಬರ್ನೊಂದಿಗೆ ಆಧಾರ್ ಸಂಖ್ಯೆ ಕಡಿತಗೊಳಿಸಿ, ಹೊಸದಾಗಿ ಲಿಂಕ್ ಮಾಡಿಕೊಳ್ಳಬಹುದಾಗಿದೆ.
ಆಗ, ಹೊಸ ಬಾಡಿಗೆ ಮನೆಗೆ ಹೋದ ನಂತರವೂ ತಮ್ಮ ಈ ಹಿಂದಿನ ಸರಾಸರಿಯಷ್ಟೇ ವಿದ್ಯುತ್ ಬಳಸಲು ಗ್ರಾಹಕರಿಗೆ ಅನುಕೂಲ ಆಗಲಿದೆ.
ಪ್ರಸ್ತುತ ಡಿ-ಲಿಂಕ್ಗೆ ಅವಕಾಶ ಇರಲಿಲ್ಲ. ಹಾಗಾಗಿ, ಯಾವುದೇ ಬಾಡಿಗೆದಾರರು ಮನೆ ಬದಲಾಯಿಸಿದರೆ ಅಲ್ಲಿದ್ದ ಈ ಹಿಂದಿನ ಸರಾಸರಿ ವಿದ್ಯುತ್ ಬಳಕೆಗೆ ಅಡ್ಜೆಸ್ಟ್ ಆಗಬೇಕಾದ ಅನಿವಾರ್ಯತೆ ಇದೆ. ಹಾಗಾಗಿ, ಕೆಲವರು ತಮ್ಮ ಕುಟುಂಬದ ಬೇರೆ ಸದಸ್ಯರ ಆಧಾರ್ ಲಿಂಕ್ ಮಾಡುತ್ತಿದ್ದಾರೆ. ಈ ಕಿರಿಕಿರಿ ತಪ್ಪಿಸಲು ಇಂಧನ ಇಲಾಖೆ ಈಗ ಡಿ-ಲಿಂಕ್ಗೆ ಅವಕಾಶ ಮಾಡಿಕೊಟ್ಟಿದೆ.
ಡಿ-ಲಿಂಕ್ ಮಾಡುವುದು ಹೇಗೆ…?
ಡಿ-ಲಿಂಕ್ ಅನ್ನು ಈಗಾಗಲೇ ಗೃಹಜ್ಯೋತಿ ಸೌಲಭ್ಯ ಪಡೆಯಲು ವಿವಿಧ ವಿದ್ಯುತ್ ಸರಬರಾಜು ಕಂಪನಿ (ಎಸ್ಕಾಂ)ಗಳ ಉಪಕೇಂದ್ರಗಳಲ್ಲಿ “ಆಧಾರ್’ ಲಿಂಕ್ ಮಾಡುವ ಸೌಲಭ್ಯ ಕಲ್ಪಿಸಲಾಗಿದೆ. ಅಲ್ಲಿಯೇ ಈ ಡಿ-ಲಿಂಕ್ ಕೂಡ ಮಾಡಬಹುದು. ಅಥವಾ ನೇರವಾಗಿ https://sevasindhu.karnataka.gov.in/ GruhaJyothiDelink/GetAadhaarData.aspx ಲಿಂಕ್ ಮೂಲಕವೂ ಗ್ರಾಹಕರು ನೋಂದಾಯಿಸಿಕೊಳ್ಳಬಹುದು. ಗೃಹಜ್ಯೋತಿ ಪೋರ್ಟಲ್ ಓಪನ್ ಆಗದೆ ಇದ್ದರೆ, Cache Memory Clear ಮಾಡಿ ನಂತರ ಪೋರ್ಟಲ್ ಲಿಂಕ್ ಕ್ಲಿಕ್ ಮಾಡಿ ಸೇವೆಯನ್ನು ಪಡೆಯಬಹುದು. ಹೊಸ ಲಿಂಕ್ ಪಡೆಯುವ ಮುನ್ನ ಡಿ-ಲಿಂಕ್ ಮಾಡಿರುವುದನ್ನು ಖಾತ್ರಿಪಡಿಸಿಕೊಳ್ಳಬೇಕು.
ಪಿರಿಯಾಪಟ್ಟಣ : ಪಿರಿಯಾಪಟ್ಟಣದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಜನರು ಪಡಿತರ ಪಡೆಯಲು ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಜನಸಾಮಾನ್ಯರು ಎಂದಿನಂತೆ ಪ್ರತಿ…
ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…
ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…
ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ…
ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…
ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…