ರಾಜ್ಯ

ಬಾಡಿಗೆದಾರರಿಗೆ ಶುಭ ಸುದ್ದಿ- ಗೃಹಜ್ಯೋತಿಗೆ ಡಿ-ಲಿಂಕ್

ಮೈಸೂರು: ಬಾಡಿಗೆದಾರರಿಗೊಂದು ಸಿಹಿ ಸುದ್ದಿ. ಕಾಂಗ್ರೆಸ್‌ ತನ್ನ ಮಹತ್ವಾಕಾಂಕ್ಷಿ ಗೃಹಜ್ಯೋತಿ ಯೋಜನೆಗೆ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಡಿ-ಲಿಂಕ್‌ಗೆ  ಅವಕಾಶ ಮಾಡಿಕೊಟ್ಟಿದೆ. ಅದರಂತೆ ಬಾಡಿಗೆದಾರರು ಮನೆ ಬದಲಾಯಿಸಿದಾಗೆಲ್ಲ ಹಳೇ ಮನೆಯ ಆರ್‌.ಆರ್‌. ನಂಬರ್‌ನೊಂದಿಗೆ ಆಧಾರ್‌ ಸಂಖ್ಯೆ ಕಡಿತಗೊಳಿಸಿ, ಹೊಸದಾಗಿ ಲಿಂಕ್‌ ಮಾಡಿಕೊಳ್ಳಬಹುದಾಗಿದೆ.

ಆಗ, ಹೊಸ ಬಾಡಿಗೆ ಮನೆಗೆ ಹೋದ ನಂತರವೂ ತಮ್ಮ ಈ ಹಿಂದಿನ ಸರಾಸರಿಯಷ್ಟೇ ವಿದ್ಯುತ್‌ ಬಳಸಲು ಗ್ರಾಹಕರಿಗೆ ಅನುಕೂಲ ಆಗಲಿದೆ.

ಪ್ರಸ್ತುತ ಡಿ-ಲಿಂಕ್‌ಗೆ ಅವಕಾಶ ಇರಲಿಲ್ಲ. ಹಾಗಾಗಿ, ಯಾವುದೇ ಬಾಡಿಗೆದಾರರು ಮನೆ ಬದಲಾಯಿಸಿದರೆ ಅಲ್ಲಿದ್ದ ಈ ಹಿಂದಿನ ಸರಾಸರಿ ವಿದ್ಯುತ್‌ ಬಳಕೆಗೆ ಅಡ್ಜೆಸ್ಟ್‌ ಆಗಬೇಕಾದ ಅನಿವಾರ್ಯತೆ ಇದೆ. ಹಾಗಾಗಿ, ಕೆಲವರು ತಮ್ಮ ಕುಟುಂಬದ ಬೇರೆ ಸದಸ್ಯರ ಆಧಾರ್‌ ಲಿಂಕ್‌ ಮಾಡುತ್ತಿದ್ದಾರೆ. ಈ ಕಿರಿಕಿರಿ ತಪ್ಪಿಸಲು ಇಂಧನ ಇಲಾಖೆ ಈಗ ಡಿ-ಲಿಂಕ್‌ಗೆ ಅವಕಾಶ ಮಾಡಿಕೊಟ್ಟಿದೆ.

ಡಿ-ಲಿಂಕ್‌ ಮಾಡುವುದು ಹೇಗೆ…?

ಡಿ-ಲಿಂಕ್‌ ಅನ್ನು ಈಗಾಗಲೇ ಗೃಹಜ್ಯೋತಿ ಸೌಲಭ್ಯ ಪಡೆಯಲು ವಿವಿಧ ವಿದ್ಯುತ್‌ ಸರಬರಾಜು ಕಂಪನಿ (ಎಸ್ಕಾಂ)ಗಳ ಉಪಕೇಂದ್ರಗಳಲ್ಲಿ “ಆಧಾರ್‌’ ಲಿಂಕ್‌ ಮಾಡುವ ಸೌಲಭ್ಯ ಕಲ್ಪಿಸಲಾಗಿದೆ. ಅಲ್ಲಿಯೇ ಈ ಡಿ-ಲಿಂಕ್‌ ಕೂಡ ಮಾಡಬಹುದು. ಅಥವಾ ನೇರವಾಗಿ  https://sevasindhu.karnataka.gov.in/ GruhaJyothiDelink/GetAadhaarData.aspx ಲಿಂಕ್‌ ಮೂಲಕವೂ ಗ್ರಾಹಕರು ನೋಂದಾಯಿಸಿಕೊಳ್ಳಬಹುದು. ಗೃಹಜ್ಯೋತಿ ಪೋರ್ಟಲ್‌ ಓಪನ್‌ ಆಗದೆ ಇದ್ದರೆ, Cache Memory Clear ಮಾಡಿ ನಂತರ ಪೋರ್ಟಲ್‌ ಲಿಂಕ್‌ ಕ್ಲಿಕ್‌ ಮಾಡಿ ಸೇವೆಯನ್ನು ಪಡೆಯಬಹುದು. ಹೊಸ ಲಿಂಕ್‌ ಪಡೆಯುವ ಮುನ್ನ ಡಿ-ಲಿಂಕ್‌ ಮಾಡಿರುವುದನ್ನು ಖಾತ್ರಿಪಡಿಸಿಕೊಳ್ಳಬೇಕು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಆಷಾಢ ಶುಕ್ರವಾರ : ಪೂರ್ವಸಿದ್ದತೆ ಪರಿಶೀಲಿಸಿದ ಸಚಿವ ಯತೀಂದ್ರ

ಮೈಸೂರು : ಆಷಾಢ ಶುಕ್ರವಾರದ ಶ್ರೀ ಚಾಮುಂಡೇಶ್ವರಿ ಅಮ್ಮನವರ ವಿಶೇಷ ಪೂಜೆ ಪ್ರಯುಕ್ತ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಮೂಲಸೌಕರ್ಯ…

10 hours ago

ಮಂಡ್ಯ ವಿವಿ ಅಭಿವೃದ್ಧಿಗೆ ಅನುಮಾನವೇ ಅಡ್ಡಿ

ಬಿ.ಟಿ.ಮೋಹನ್ ಕುಮಾರ್ ಮಂಡ್ಯ: ಮಂಡ್ಯ ವಿವಿ ಆರಂಭವಾದಾಗಿನಿಂದ ಒಂದಲ್ಲಾ ಒಂದು ಸಮಸ್ಯೆ ಎದುರಾಗುತ್ತಿದ್ದು, ವಿವಿಗೆ ೧೨ಬಿ ಮಾನ್ಯತೆ ಸಿಕ್ಕಿಲ್ಲದಿರುವುದು ಹಲವು…

18 hours ago

ಕೊಡಗು ವಿಶ್ವವಿದ್ಯಾಲಯ ಬಗೆಹರಿಯದ ಕೊರಗು!

ನವೀನ್ ಡಿಸೋಜ ಮಂಗಳೂರು ವಿವಿ ಅಧೀನದಲ್ಲಿದ್ದ ಕೊಡಗು ಈಗ ಪ್ರತ್ಯೇಕ ವಿವಿಯಾಗಿ ರೂಪುಗೊಂಡಿದೆ. ಆದರೆ, ಆಡಳಿತಾತ್ಮಕ ಹುದ್ದೆ ಭರ್ತಿಯಾಗದಿರುವುದು ಮತ್ತು…

18 hours ago

ಚಾ.ನಗರ ವಿವಿಗೆ ಅತಿಥಿ ಅಧ್ಯಾಪಕರೇ ಆಧಾರ!

ಚಾಮರಾಜನಗರ ವಿವಿ ಪ್ರಾರಂಭವಾಗಿ ೩ ವರ್ಷಗಳನ್ನು ಪೂರೈಸಿದೆ. ಈ ಬಾರಿ ಪ್ರಪ್ರಥಮ ಘಟಿಕೋತ್ಸವದ ಸಂಭ್ರಮದಲ್ಲಿದೆ. ಆದರೆ ಇನ್ನೂ ಅತಿಥಿ ಅಧ್ಯಾಪಕರು,…

18 hours ago

ಮೈಸೂರು ವಿವಿಗೆ ಹಣಕಾಸು ಮುಗ್ಗಟ್ಟು

ಗಿರೀಶ್ ಹುಣಸೂರು ರಾಜ್ಯದ ಮೊತ್ತ ಮೊದಲ ವಿವಿ ಎಂಬ ಹೆಗ್ಗಳಿಕೆಯ ಮೈಸೂರು ವಿವಿಗೆ ೧೧೦ ವರ್ಷಗಳಷ್ಟು ಹಿರಿತನವಿದೆ. ಆದರೆ, ಕೆಲವು…

18 hours ago

ಓದುಗರ ಪತ್ರ: ಒಣಗಿದ ಮರ ತೆರವುಗೊಳಿಸಿ

ಮೈಸೂರು ವಿವಿ ಕ್ರಾಫರ್ಡ್ ಭವನದ ಎದುರಿನ ರಸ್ತೆ ಬದಿಯಲ್ಲಿರುವ ಮರ ಒಣಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ…

21 hours ago