ಬೆಂಗಳೂರು: ರಾಜ್ಯದಲ್ಲಿ ಸುಮಾರು 20 ಲಕ್ಷಕ್ಕೂ ಹೆಚ್ಚು ವಿಶೇಷ ಚೇತನರಿದ್ದು, ಅವರಿಗೆ ಶಿಕ್ಷಣ ಉದ್ಯೋಗವಕಾಶ ಕಲ್ಪಿಸಲು ನಮ್ಮ ಸರ್ಕಾರ ಹೊಸ ನೀತಿ ರೂಪಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಹೇಳಿದ್ದಾರೆ.
ಬಿಎಂಎಸ್ ಮಹಿಳಾ ಕಾಲೇಜಿನಲ್ಲಿ ಶನಿವಾರ ವಿಶೇಷ ಚೇತನರಿಗೆ ಆಯೋಜಿಸಿದ್ದ ಜಾಬ್ ಹಬ್ಬದಲ್ಲಿ ಅವರು ಮಾತನಾಡಿದರು.
ವಿಶೇಷ ಚೇತನ ಉದ್ಯೋಗಾಕಾಂಕ್ಷಿಗಳು, ಉದ್ಯೋಗದಾತರು, ತರಬೇತಿ ಪಾಲುದಾರರು ಮತ್ತು ನಾಗರಿಕ ಸಮಾಜವನ್ನು ಈ ಜಾಬ್ ಹಬ್ಬ ಒಟ್ಟುಗೂಡಿಸಿದೆ.
ಇದು ಅಪರೂಪದ ಕಾರ್ಯಕ್ರಮವಾಗಿದೆ. ವಿಶೇಷ ಚೇತನರು ಸಮರ್ಥರು, ಅವರಿಗೆ ಕೌಶಲ ಪೂರ್ಣ ಮತ್ತು ಉತ್ತಮ ಸಮಾಜ ನಿರ್ಮಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.
ವಿಶೇಷ ಚೇತನರಿಗೆ ಖಾಸಗಿ ವಲಯದಲ್ಲಿ ಶೇಕಡಾ.5ರಷ್ಟು ಉದ್ಯೋಗ ಮೀಸಲಾತಿ ಕಲ್ಪಿಸಲು ಸರ್ಕಾರ ಈಗಾಗಲೇ ಕರ್ನಾಟಕ ಉದ್ಯೋಗ ಮತ್ತು ಶಿಕ್ಷಣದಲ್ಲಿ ವಿಶೇಷ ಚೇತನ ವ್ಯಕ್ತಿಗಳ ಹಕ್ಕುಗಳ ಕಾಯ್ದೆ ಜಾರಿಗೆ ತಂದಿದೆ ಎಂದು ಹೇಳಿದರು.
ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…
ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…
ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…
ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…
ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…
ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…