ರಾಜ್ಯ

ವಿಶೇಷ ಚೇತನರಿಗೆ ಗುಡ್‌ನ್ಯೂಸ್‌: ಶಿಕ್ಷಣ ಉದ್ಯೋಗಕ್ಕೆ ಹೊಸ ನೀತಿ

ಬೆಂಗಳೂರು: ರಾಜ್ಯದಲ್ಲಿ ಸುಮಾರು 20 ಲಕ್ಷಕ್ಕೂ ಹೆಚ್ಚು ವಿಶೇಷ ಚೇತನರಿದ್ದು, ಅವರಿಗೆ ಶಿಕ್ಷಣ ಉದ್ಯೋಗವಕಾಶ ಕಲ್ಪಿಸಲು ನಮ್ಮ ಸರ್ಕಾರ ಹೊಸ ನೀತಿ ರೂಪಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್‌ ಪ್ರಕಾಶ್‌ ಪಾಟೀಲ್‌ ಹೇಳಿದ್ದಾರೆ.

ಬಿಎಂಎಸ್‌ ಮಹಿಳಾ ಕಾಲೇಜಿನಲ್ಲಿ ಶನಿವಾರ ವಿಶೇಷ ಚೇತನರಿಗೆ ಆಯೋಜಿಸಿದ್ದ ಜಾಬ್‌ ಹಬ್ಬದಲ್ಲಿ ಅವರು ಮಾತನಾಡಿದರು.

ವಿಶೇಷ ಚೇತನ ಉದ್ಯೋಗಾಕಾಂಕ್ಷಿಗಳು, ಉದ್ಯೋಗದಾತರು, ತರಬೇತಿ ಪಾಲುದಾರರು ಮತ್ತು ನಾಗರಿಕ ಸಮಾಜವನ್ನು ಈ ಜಾಬ್‌ ಹಬ್ಬ ಒಟ್ಟುಗೂಡಿಸಿದೆ.

ಇದು ಅಪರೂಪದ ಕಾರ್ಯಕ್ರಮವಾಗಿದೆ. ವಿಶೇಷ ಚೇತನರು ಸಮರ್ಥರು, ಅವರಿಗೆ ಕೌಶಲ ಪೂರ್ಣ ಮತ್ತು ಉತ್ತಮ ಸಮಾಜ ನಿರ್ಮಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ವಿಶೇಷ ಚೇತನರಿಗೆ ಖಾಸಗಿ ವಲಯದಲ್ಲಿ ಶೇಕಡಾ.5ರಷ್ಟು ಉದ್ಯೋಗ ಮೀಸಲಾತಿ ಕಲ್ಪಿಸಲು ಸರ್ಕಾರ ಈಗಾಗಲೇ ಕರ್ನಾಟಕ ಉದ್ಯೋಗ ಮತ್ತು ಶಿಕ್ಷಣದಲ್ಲಿ ವಿಶೇಷ ಚೇತನ ವ್ಯಕ್ತಿಗಳ ಹಕ್ಕುಗಳ ಕಾಯ್ದೆ ಜಾರಿಗೆ ತಂದಿದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಪ್ರಧಾನ್‌ ರಾಜೀನಾಮೆ : ವಾಂಗ್ಚುಕ್‌ ಫಸ್ಟ್‌ ರಿಯಾಕ್ಷನ್‌

ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್‌ ವಾಂಗ್ಚುಕ್‌ ಮೊದಲ ಪ್ರತಿಕ್ರಿಯೆ…

30 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 25 ಶನಿವಾರ  

9 hours ago

ನೋಟ-ಪ್ರತಿನೋಟ | ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಸರಿಯೇ? ತಪ್ಪೇ?

ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…

9 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಗೆ ಅಜ್ಜಿ ಒಡವೆ ನೀಡಿದ ಪ್ರಸಂಗ…

ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…

9 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ಉಡುಪು ಯಾಕೆ ಬದಲಾಯಿತು?

  ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…

9 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಸಜ್ಜನನಾದ ಆಂಗ್ಲನಾಗುವ ಪ್ರಯತ್ನ

ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್‌ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…

9 hours ago