ಬೆಂಗಳೂರು: ರಾಜ್ಯದಲ್ಲಿ ಸುಮಾರು 20 ಲಕ್ಷಕ್ಕೂ ಹೆಚ್ಚು ವಿಶೇಷ ಚೇತನರಿದ್ದು, ಅವರಿಗೆ ಶಿಕ್ಷಣ ಉದ್ಯೋಗವಕಾಶ ಕಲ್ಪಿಸಲು ನಮ್ಮ ಸರ್ಕಾರ ಹೊಸ ನೀತಿ ರೂಪಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಹೇಳಿದ್ದಾರೆ.
ಬಿಎಂಎಸ್ ಮಹಿಳಾ ಕಾಲೇಜಿನಲ್ಲಿ ಶನಿವಾರ ವಿಶೇಷ ಚೇತನರಿಗೆ ಆಯೋಜಿಸಿದ್ದ ಜಾಬ್ ಹಬ್ಬದಲ್ಲಿ ಅವರು ಮಾತನಾಡಿದರು.
ವಿಶೇಷ ಚೇತನ ಉದ್ಯೋಗಾಕಾಂಕ್ಷಿಗಳು, ಉದ್ಯೋಗದಾತರು, ತರಬೇತಿ ಪಾಲುದಾರರು ಮತ್ತು ನಾಗರಿಕ ಸಮಾಜವನ್ನು ಈ ಜಾಬ್ ಹಬ್ಬ ಒಟ್ಟುಗೂಡಿಸಿದೆ.
ಇದು ಅಪರೂಪದ ಕಾರ್ಯಕ್ರಮವಾಗಿದೆ. ವಿಶೇಷ ಚೇತನರು ಸಮರ್ಥರು, ಅವರಿಗೆ ಕೌಶಲ ಪೂರ್ಣ ಮತ್ತು ಉತ್ತಮ ಸಮಾಜ ನಿರ್ಮಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.
ವಿಶೇಷ ಚೇತನರಿಗೆ ಖಾಸಗಿ ವಲಯದಲ್ಲಿ ಶೇಕಡಾ.5ರಷ್ಟು ಉದ್ಯೋಗ ಮೀಸಲಾತಿ ಕಲ್ಪಿಸಲು ಸರ್ಕಾರ ಈಗಾಗಲೇ ಕರ್ನಾಟಕ ಉದ್ಯೋಗ ಮತ್ತು ಶಿಕ್ಷಣದಲ್ಲಿ ವಿಶೇಷ ಚೇತನ ವ್ಯಕ್ತಿಗಳ ಹಕ್ಕುಗಳ ಕಾಯ್ದೆ ಜಾರಿಗೆ ತಂದಿದೆ ಎಂದು ಹೇಳಿದರು.
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್ಎಸ್ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…
ಹೇಮಂತ್ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…