ರಾಜ್ಯ

ಕಾಡಂಚಿನ ಗ್ರಾಮದಲ್ಲಿ ವಾಸಿಸುತ್ತಿರುವ ರೈತರಿಗೆ ಗುಡ್‌ನ್ಯೂಸ್‌ ಕೊಟ್ಟ ಸಚಿವ ಈಶ್ವರ್‌ ಖಂಡ್ರೆ

ಬೆಳಗಾವಿ: ಕೊಡಗು ಮತ್ತು ಹಾಸನದಲ್ಲಿ ಕಾಡಾನೆಗಳ ಕಾಟ ನಿಯಂತ್ರಿಸಲು 2 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಆನೆಗಳ ವಿಹಾರಧಾಮ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿಂದು ಮಾತನಾಡಿದ ಅವರು, ಬೇಲೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಡಾನೆಗಳ ದಾಳಿಯಿಂದ ಹಾನಿಗೊಳಗಾದ ಮಾನವ ಪ್ರಾಣಹಾನಿ ಮತ್ತು ಮಾನವ ಗಾಯ ಪ್ರಕರಣಗಳಿಗೆ ದಯಾತ್ಮಕ ಪರಿಹಾರ ಧನ ನೀಡಲಾಗುತ್ತಿದೆ ಎಂದರು.

ಹಾಸನ ಜಿಲ್ಲಾ ವ್ಯಾಪ್ತಿಯ ಬೇಲೂರು ತಾಲ್ಲೂಕಿನ ಬಿಕ್ಕೋಡು ಹೋಬಳಿ ಗ್ರಾಮಗಳಲ್ಲಿ ಕಳೆದ 03 ತಿಂಗಳಿನಿಂದ ಕಾಡಾನೆಗಳು ಹಿಂಡು ಹಿಂಡಾಗಿ ಬಂದು ರೈತರ ಬೆಳೆಗಳನ್ನು ನಾಶ ಮಾಡುತ್ತಿವೆ. ಈ ಕಾಡಾನೆಗಳನ್ನು ಅರಣ್ಯ ಪ್ರದೇಶಗಳ ಕಡೆಗೆ ಹಿಮ್ಮೆಟ್ಟಿಸಲು ಇಲಾಖೆ ವತಿಯಿಂದ ಕ್ರಮ ಕೈಗೊಳ್ಳಲಾಗುತ್ತಿರುತ್ತದೆ.

ಪ್ರತಿನಿತ್ಯ ಕಾಡಾನೆಗಳಿರುವ ಪ್ರದೇಶಗಳಿಗೆ ಭೇಟಿ ನೀಡಿ ಸ್ಥಳೀಯ ಸಾರ್ವಜನಿಕರುನ್ನು ಸಂಪರ್ಕಿಸಿ ಆನೆಗಳ ಚಲನ-ವಲನಗಳ ಮಾಹಿತಿಯನ್ನು ನೀಡಿ ಎಚ್ಚರಿಕೆಯಿಂದ ಇರುವಂತೆ ಧ್ವನಿವರ್ಧಕದ ಮೂಲಕ ತಿಳಿಸಲಾಗುತ್ತಿದೆ. ಆನೆ ಕಾರ್ಯ ಪಡೆ, ಕ್ಷಿಪ್ರ ಸ್ಪಂದನ ತಂಡ ಮತ್ತು ಹಿಮ್ಮೆಟ್ಟಿಸುವ ಶಿಬಿರ ತಂಡದ ಸಿಬ್ಬಂದಿಗಳೊಂದಿಗೆ ರಾತ್ರಿ ಗಸ್ತು ಕಾರ್ಯ ಕೈಗೊಂಡು ಸ್ಥಳೀಯ ಸಾರ್ವಜನಿಕರನ್ನು ಎಚ್ಚರಿಸುವ ಕ್ರಮ ಕೈಗೊಂಡಿವೆ ಎಂದರು.

ಕಾಡಾನೆಗಳು ಸಂಚರಿಸುವ ಪ್ರದೇಶಗಳಲ್ಲಿ ಡಿಜಿಟಲ್ ಸೂಚನಾ ಫಲಕಗಳನ್ನು ಅಳವಡಿಸಿ ಸಾರ್ವಜನಿಕರಿಗೆ ಮಾಹಿತಿಯನ್ನು ರವಾನಿಸಲಾಗುತ್ತಿರುತ್ತದೆ. ಆಕಾಶವಾಣಿ ಮುಖಾಂತರ ಹಾಗೂ ವಾಟ್ಸಾಪ್ ಗ್ರೂಪ್ ಗಳ ಮುಖಾಂತರ ಕಾಡಾನೆಗಳ ಚಲನ-ಚಲನ ಸಂದೇಶಗಳನ್ನು ರವಾನಿಸಲಾಗುತ್ತಿರುತ್ತದೆ, ಇಲಾಖಾ ವಾಹನಗಳಲ್ಲಿ ಪ್ರತಿನಿತ್ಯ ಕಾಡಾನೆಗಳಿರುವ ಸ್ಥಳಗಳಲ್ಲಿ ಗಸ್ತು ಮಾಡಿ ಧ್ವನಿವರ್ಧಕಗಳ ಮುಖಾಂತರ ಸಾರ್ವಜನಿಕರಿಗೆ ಹಾಗೂ ಗ್ರಾಮಸ್ಥರಿಗೆ ಮಾಹಿತಿಯನ್ನು ನೀಡಲಾಗುತ್ತಿದೆ ಎಂದು ವಿವರಿಸಿದರು.

ವನ್ಯಪ್ರಾಣಿಗಳ ದಾಳಿಯಿಂದ ಮೃತಪಟ್ಟ ಕುಟುಂಬದ ಹತ್ತಿರದ ಬಂಧುಗಳಿಗೆ ಈ ಹಿಂದೆ ರೂ.7.50 ಲಕ್ಷ ರೂ. ಪರಿಹಾರ ನೀಡಲಾಗುತ್ತಿತ್ತು. ಈಗ ರೂ.15.00 ಲಕ್ಷ ರೂ. ದಯಾತ್ಮಕ ಪರಿಹಾರ ನೀಡಲಾಗುತ್ತಿದೆ. ಜೊತೆಗೆ ಮಾಹೆಯಾನ ರೂ.4000.00 ರಂತೆ 05 ವರ್ಷಗಳ ಅವಧಿಗೆ ಮಾಸಾಶನ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಗೋವಾದಲ್ಲಿ 25 ಮಂದಿ ಸಜೀವ ದಹನ: ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಉತ್ತರ ಗೋವಾದ ಬಾಗಾ ಬೀಚ್‌ ಬಳಿಯ ಅರ್ಪೊರಾದ ನೈಟ್‌ಕ್ಲಬ್‌ ಬೀರ್ಚ್‌ ಬೈ ರೋಮಿಯೋ ಲೇನ್‌ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ…

41 mins ago

ಮೈಸೂರು| ಕಣ್ಣಿಗೆ ಕಾರದಪುಡಿ ಎರಚಿ ಹಲ್ಲೆ ಬಳಿಕ ಅಪಹರಣ

ಮೈಸೂರು: ಕಣ್ಣಿಗೆ ಕಾರದಪುಡಿ ಎರಚಿ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿ ಅಪಹರಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ವಿಜಯನಗರ ಮೂರನೇ ಹಂತದಲ್ಲಿ ಈ…

54 mins ago

ಗೋವಾದಲ್ಲಿ ಘೋರ ದುರಂತ: ಬಾಗಾ ಬೀಚ್‌ ಬಳಿ ನೈಟ್‌ ಕ್ಲಬ್‌ನಲ್ಲಿ ಭೀಕರ ಅಗ್ನಿ ಅವಘಡ: 25 ಮಂದಿ ಸಜೀವ ದಹನ

ಗೋವಾ: ಇಲ್ಲಿನ ನೈಟ್‌ ಕ್ಲಬ್‌ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 25 ಜನ ಸಾವನ್ನಪ್ಪಿದ್ದಾರೆ. ಉತ್ತರ ಗೋವಾದ ಅರ್ಪೋರಾದಲ್ಲಿರುವ ನೈಟ್‌…

54 mins ago

ಓದುಗರ ಪತ್ರ: ಅಮೃತ ಬೇಕರಿ ನಿಲ್ದಾಣದಲ್ಲಿ ಬಸ್ ತಂಗುದಾಣ ನಿರ್ಮಿಸಿ

ಮೈಸೂರಿನ ಶ್ರೀರಾಂಪುರದ ಮಾರ್ಗದಲ್ಲಿ ಬರುವ ಅಮೃತ್ ಬೇಕರಿ ಬಸ್ ನಿಲ್ದಾಣದಲ್ಲಿ ನಿರ್ಮಿಸಲಾಗಿದ್ದ ತಂಗುದಾಣ ಹಾಳಾಗಿದ್ದು, ಬಸ್‌ಗಾಗಿ ಕಾಯುವವರು ರಸ್ತೆಯಲ್ಲಿ ನಿಲ್ಲಬೇಕಾದ…

1 hour ago

ಓದುಗರ ಪತ್ರ:  ತಂಬಾಕು ಉತ್ಪನ್ನ  ಸೆಸ್: ಕಠಿಣ ಕ್ರಮ ಅಗತ್ಯ

ನಿಕೋಟಿನ್, ಪಾನ್ ಮಸಾಲಾ ಮತ್ತು ಇತರೆ ಹೊಗೆ ರಹಿತ ತಂಬಾಕು ಪದಾರ್ಥಗಳ ಮೇಲೆ ಕೇಂದ್ರ ಸರ್ಕಾರ ಪ್ರಸ್ತಾವಿಸಿದ ಆರೋಗ್ಯ ಮತ್ತು…

1 hour ago

ಓದುಗರ ಪತ್ರ:  ಚಾ.ನಗರ-ಮೈಸೂರು ನಡುವೆ ಹೆಚ್ಚಿನ ರೈಲು ಸೌಲಭ್ಯ ಕಲ್ಪಿಸಿ

ಮೈಸೂರಿನಿಂದ ಚಾಮರಾಜನಗರಕ್ಕೆ ಪ್ರತಿನಿತ್ಯ ೬ ರೈಲುಗಳು ಸಂಚರಿಸುತ್ತಿವೆ. ಈಗ ಸಂಚರಿಸುವ ರೈಲುಗಳ ಜೊತೆ ಚಾಮರಾಜನಗರದಿಂದ ಮೈಸೂರಿಗೆ ಬೆಳಿಗ್ಗೆ ೪.೪೦ಕ್ಕೆ ,…

2 hours ago