ರಾಜ್ಯ

ಕಾಡಂಚಿನ ಗ್ರಾಮದಲ್ಲಿ ವಾಸಿಸುತ್ತಿರುವ ರೈತರಿಗೆ ಗುಡ್‌ನ್ಯೂಸ್‌ ಕೊಟ್ಟ ಸಚಿವ ಈಶ್ವರ್‌ ಖಂಡ್ರೆ

ಬೆಳಗಾವಿ: ಕೊಡಗು ಮತ್ತು ಹಾಸನದಲ್ಲಿ ಕಾಡಾನೆಗಳ ಕಾಟ ನಿಯಂತ್ರಿಸಲು 2 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಆನೆಗಳ ವಿಹಾರಧಾಮ ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿಂದು ಮಾತನಾಡಿದ ಅವರು, ಬೇಲೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಡಾನೆಗಳ ದಾಳಿಯಿಂದ ಹಾನಿಗೊಳಗಾದ ಮಾನವ ಪ್ರಾಣಹಾನಿ ಮತ್ತು ಮಾನವ ಗಾಯ ಪ್ರಕರಣಗಳಿಗೆ ದಯಾತ್ಮಕ ಪರಿಹಾರ ಧನ ನೀಡಲಾಗುತ್ತಿದೆ ಎಂದರು.

ಹಾಸನ ಜಿಲ್ಲಾ ವ್ಯಾಪ್ತಿಯ ಬೇಲೂರು ತಾಲ್ಲೂಕಿನ ಬಿಕ್ಕೋಡು ಹೋಬಳಿ ಗ್ರಾಮಗಳಲ್ಲಿ ಕಳೆದ 03 ತಿಂಗಳಿನಿಂದ ಕಾಡಾನೆಗಳು ಹಿಂಡು ಹಿಂಡಾಗಿ ಬಂದು ರೈತರ ಬೆಳೆಗಳನ್ನು ನಾಶ ಮಾಡುತ್ತಿವೆ. ಈ ಕಾಡಾನೆಗಳನ್ನು ಅರಣ್ಯ ಪ್ರದೇಶಗಳ ಕಡೆಗೆ ಹಿಮ್ಮೆಟ್ಟಿಸಲು ಇಲಾಖೆ ವತಿಯಿಂದ ಕ್ರಮ ಕೈಗೊಳ್ಳಲಾಗುತ್ತಿರುತ್ತದೆ.

ಪ್ರತಿನಿತ್ಯ ಕಾಡಾನೆಗಳಿರುವ ಪ್ರದೇಶಗಳಿಗೆ ಭೇಟಿ ನೀಡಿ ಸ್ಥಳೀಯ ಸಾರ್ವಜನಿಕರುನ್ನು ಸಂಪರ್ಕಿಸಿ ಆನೆಗಳ ಚಲನ-ವಲನಗಳ ಮಾಹಿತಿಯನ್ನು ನೀಡಿ ಎಚ್ಚರಿಕೆಯಿಂದ ಇರುವಂತೆ ಧ್ವನಿವರ್ಧಕದ ಮೂಲಕ ತಿಳಿಸಲಾಗುತ್ತಿದೆ. ಆನೆ ಕಾರ್ಯ ಪಡೆ, ಕ್ಷಿಪ್ರ ಸ್ಪಂದನ ತಂಡ ಮತ್ತು ಹಿಮ್ಮೆಟ್ಟಿಸುವ ಶಿಬಿರ ತಂಡದ ಸಿಬ್ಬಂದಿಗಳೊಂದಿಗೆ ರಾತ್ರಿ ಗಸ್ತು ಕಾರ್ಯ ಕೈಗೊಂಡು ಸ್ಥಳೀಯ ಸಾರ್ವಜನಿಕರನ್ನು ಎಚ್ಚರಿಸುವ ಕ್ರಮ ಕೈಗೊಂಡಿವೆ ಎಂದರು.

ಕಾಡಾನೆಗಳು ಸಂಚರಿಸುವ ಪ್ರದೇಶಗಳಲ್ಲಿ ಡಿಜಿಟಲ್ ಸೂಚನಾ ಫಲಕಗಳನ್ನು ಅಳವಡಿಸಿ ಸಾರ್ವಜನಿಕರಿಗೆ ಮಾಹಿತಿಯನ್ನು ರವಾನಿಸಲಾಗುತ್ತಿರುತ್ತದೆ. ಆಕಾಶವಾಣಿ ಮುಖಾಂತರ ಹಾಗೂ ವಾಟ್ಸಾಪ್ ಗ್ರೂಪ್ ಗಳ ಮುಖಾಂತರ ಕಾಡಾನೆಗಳ ಚಲನ-ಚಲನ ಸಂದೇಶಗಳನ್ನು ರವಾನಿಸಲಾಗುತ್ತಿರುತ್ತದೆ, ಇಲಾಖಾ ವಾಹನಗಳಲ್ಲಿ ಪ್ರತಿನಿತ್ಯ ಕಾಡಾನೆಗಳಿರುವ ಸ್ಥಳಗಳಲ್ಲಿ ಗಸ್ತು ಮಾಡಿ ಧ್ವನಿವರ್ಧಕಗಳ ಮುಖಾಂತರ ಸಾರ್ವಜನಿಕರಿಗೆ ಹಾಗೂ ಗ್ರಾಮಸ್ಥರಿಗೆ ಮಾಹಿತಿಯನ್ನು ನೀಡಲಾಗುತ್ತಿದೆ ಎಂದು ವಿವರಿಸಿದರು.

ವನ್ಯಪ್ರಾಣಿಗಳ ದಾಳಿಯಿಂದ ಮೃತಪಟ್ಟ ಕುಟುಂಬದ ಹತ್ತಿರದ ಬಂಧುಗಳಿಗೆ ಈ ಹಿಂದೆ ರೂ.7.50 ಲಕ್ಷ ರೂ. ಪರಿಹಾರ ನೀಡಲಾಗುತ್ತಿತ್ತು. ಈಗ ರೂ.15.00 ಲಕ್ಷ ರೂ. ದಯಾತ್ಮಕ ಪರಿಹಾರ ನೀಡಲಾಗುತ್ತಿದೆ. ಜೊತೆಗೆ ಮಾಹೆಯಾನ ರೂ.4000.00 ರಂತೆ 05 ವರ್ಷಗಳ ಅವಧಿಗೆ ಮಾಸಾಶನ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 22 ಸೋಮವಾರ

26 mins ago

ನೀಟ್-ಯುಜಿ ಮರುಪರೀಕ್ಷೆ : ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳು

ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…

12 hours ago

ತಮಿಳುನಾಡು ಸೀಫುಡ್‌ ಘಟಕದಲ್ಲಿ ಅನಿಲ ಸೋರಿಕೆ ; 7 ಜನ ಸಾವು, ಹಲವರು ಗಂಭೀರ

ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…

12 hours ago

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

13 hours ago

ಚಾ.ನಗರ | ಸಿದ್ದಲಿಂಗಪುರ ಬಳಿ ಹುಲಿ ದಾಳಿ ; 4 ಮೇಕೆಗಳು ಸಾವು

ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…

14 hours ago

ಕರ್ನಾಟಕದಲ್ಲಿ ಮುಂಗಾರು ವಿಳಂಬ: ಕಂಗಾಲಾದ ರೈತರು

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…

18 hours ago