ರಾಜ್ಯ

ರಾಜ್ಯ ತಂಬಾಕು ಬೆಳೆಗಾರರಿಗೆ ಕೇಂದ್ರದಿಂದ ಗುಡ್‌ ನ್ಯೂಸ್‌

ಬೆಂಗಳೂರು: ರಾಜ್ಯದ ತಂಬಾಕು ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸಬೇಕು ಎಂದು ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದ ನಿಯೋಗ ಮಾಡಿದ್ದ ಮನವಿಗೆ ಕೇಂದ್ರ ಸರಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ನಿಖಿಲ್ ಅವರು, ಹುಣಸೂರು, ಪಿರಿಯಾಪಟ್ಟಣ, ಹೆಚ್.ಡಿ.ಕೋಟೆ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಬೆಳೆಯಲಾಗಿರುವ ಪರವಾನಗಿ ರಹಿತ ತಂಬಾಕು ಬೆಳೆಗಾರರಿಗೂ ಮಾರಾಟಕ್ಕೆ ಅವಕಾಶ ನೀಡಿಕೆ ಹಾಗೂ ಆ ಬೆಳೆಗಾರರಿಗೆ ವಿಧಿಸಲಾಗುತ್ತಿದ್ದ ದಂಡ ಮನ್ನಾ ಮಾಡುವ ನಿರ್ಧಾರ ಕೈಗೊಂಡಿರುವ ಕೇಂದ್ರದ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವರಾದ ಪಿಯೂಷ್ ಗೋಯಲ್ ಅವರಿಗೆ ಧನ್ಯವಾದ ಹೇಳಿದ್ದಾರೆ.

ಕಳೆದ 2024 ಡಿಸೆಂಬರ್ 2ರಂದು ನವದೆಹಲಿಯಲ್ಲಿ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಕೇಂದ್ರದ ವಾಣಿಜ್ಯ ಮತ್ತು ಕೈಗಾರಿಕೆ ಸಚಿವರಾದ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿತ್ತು. ಡಿಸೆಂಬರ್ 21ರಂದು ವಾಣಿಜ್ಯ ಇಲಾಖೆಯ ಉನ್ನತ ಅಧಿಕಾರಿಗಳ ಜತೆ ಮಹತ್ವದ ಸಭೆಯನ್ನು ನಡೆಸಲಾಗಿತ್ತು ಎಂದು ತಿಳಿಸಿದ್ದಾರೆ.

ಅಲ್ಲದೆ, ರಾಜ್ಯದ ತಂಬಾಕು ಬೆಳೆಗಾರ ರೈತರು ಕಳೆದ ವರ್ಷ ಮೇ, ಜುಲೈ ತಿಂಗಳಲ್ಲಿ ವಿಪರೀತ ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದರು. ರಾಜ್ಯದಲ್ಲಿ ಬೆಳೆಯಲಾಗುವ ಎಫ್‌ಸಿವಿ (flue-cured Virginia-FCV) ತಂಬಾಕು ಬೆಳೆಯ ಇಳುವರಿ ಗಣನೀಯವಾಗಿ ಕಡಿಮೆಯಾಗಿತ್ತು ಹಾಗೂ ತಂಬಾಕು ಎಲೆಗಳ ಗುಣಮಟ್ಟಕ್ಕೆ ದೊಡ್ಡ ಮಟ್ಟದಲ್ಲಿ ಹಾನಿಯಾಗಿತ್ತು. ಇದರಿಂದಾಗಿ ಬೆಳೆಗಾರರು ಭಾರೀ ನಷ್ಟಕ್ಕೆ ತುತ್ತಾಗಿದ್ದರು. ಕೇಂದ್ರ ಸರಕಾರ ಇದೀಗ ನೆರವಿಗೆ ಧಾವಿಸಿರುವ ಪರಿಣಾಮ ಸಾವಿರಾರು ಬೆಳೆಗಾರರಿಗೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಸರಕಾರ ರೈತಪರವಾದ ಅನೇಕ ಐತಿಹಾಸಿಕ ನಿರ್ಧಾರಗಳನ್ನು ಕೈಗೊಂಡಿದ್ದು, ಅದರಲ್ಲಿ ರಾಜ್ಯದ ತಂಬಾಕು ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸಿರುವುದು ಕೂಡ ಒಂದಾಗಿದೆ. ಕೇಂದ್ರ ಸರಕಾರದ ಈ ನಿರ್ಧಾರದ ಮೂಲಕ ತಂಬಾಕು ಮಂಡಳಿಯ ಹರಾಜು ಕೇಂದ್ರಗಳಲ್ಲಿ ನೋಂದಾಯಿತ ಬೆಳೆಗಾರರಿಂದ ಹೆಚ್ಚುವರಿ ತಂಬಾಕು ಮತ್ತು ನೋಂದಾಯಿಸದಿರುವ ಬೆಳೆಗಾರರಿಂದ ಅನಧಿಕೃತ ತಂಬಾಕು ಮಾರಾಟಕ್ಕೆ ಅನುಮತಿ ನೀಡಲಿದೆ. ಜತೆಗೆ, ಯಾವುದೇ ಹೆಚ್ಚುವರಿ ಸೇವಾ ಶುಲ್ಕಗಳಿಲ್ಲದೆ ಬೆಳೆಗಾರರು ನ್ಯಾಯಯುತವಾಗಿ ಮಾರುಕಟ್ಟೆ ಬೆಲೆಯನ್ನು ಪಾರದರ್ಶಕವಾಗಿ ಪಡೆಯಬಹುದಾಗಿದೆ ಎಂದು ನಿಖಿಲ್ ಅವರು ಮಾಹಿತಿ ನೀಡಿದ್ದಾರೆ.

ಎಫ್‌ಸಿವಿ ತಂಬಾಕನ್ನು 53,325 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗುತ್ತಿದೆ. 40,487 ನೋಂದಾಯಿತ ಹಾಗೂ 12,838 ಪರವಾನಗಿ ರಹಿತ ಬೆಳೆಗಾರರು ಬೆಳೆಯುತ್ತಿದ್ದಾರೆ. ಕೇಂದ್ರದ ನಿರ್ಧಾರದಿಂದಾಗಿ ಪ್ರಮುಖವಾಗಿ 12,838 ತಂಬಾಕು ಬೆಳೆಗಾರರಿಗೆ ಅನುಕೂಲವಾಗಲಿದೆ. ಕರ್ನಾಟಕದ ತಂಬಾಕು ಬೆಳೆಗಾರರ ಸಂಕಷ್ಟ ನಿವಾರಿಸಲು ಕೇಂದ್ರದ ನರೇಂದ್ರ ಮೋದಿ ಅವರ ಸರಕಾರ ಐತಿಹಾಸಿಕ ನಿರ್ಧಾರ ಕೈಗೊಂಡಿದೆ ಎಂದು ಅವರು ತಿಳಿಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

1 hour ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026: ಗಜಪಯಣಕ್ಕೆ ವಿದ್ಯುಕ್ತ ಚಾಲನೆ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…

3 hours ago

ಓದುಗರ ಪತ್ರ: ಕಾವೇರಿ ನದಿ ನೀರಿನ ವಿವಾದಕ್ಕೆ ಮಾತುಕತೆಯೇ ಮದ್ದು

ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…

4 hours ago

ಓದುಗರ ಪತ್ರ: ಈ ‘ಎರಡು’ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು

ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…

4 hours ago

ಓದುಗರ ಪತ್ರ: ಸ್ಥಳ ಶುದ್ಧೀಕರಣಕ್ಕಿಂತ ಮನ ಶುದ್ಧೀಕರಣವಾಗಲಿ

ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…

4 hours ago

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

8 hours ago