ರಾಜ್ಯ

ಪ್ರಯಾಣಿಕರಿಗೆ ಗುಡ್‌ನ್ಯೂಸ್‌: ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ 2,000 ಹೆಚ್ಚುವರಿ ಬಸ್‌ ವ್ಯವಸ್ಥೆ

ಬೆಂಗಳೂರು: ನಾಡಹಬ್ಬ ಮೈಸೂರು ದಸರಾ ಪ್ರಯುಕ್ತ ಸಾಲು ಸಾಲು ದಸರಾ ರಜೆಗಳ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಅಕ್ಟೋಬರ್.9ರಿಂದ 12ರವರೆಗೆ 2,000 ಹೆಚ್ಚುವರಿ ಬಸ್‌ಗಳನ್ನು ಕೆಎಸ್‌ಆರ್‌ಟಿಸಿ ವ್ಯವಸ್ಥೆ ಮಾಡಿದೆ.

ಕೆಎಸ್‌ಆರ್‌ಟಿಸಿ ನಿಗಮವು ದಸರಾ ರಜೆಯನ್ನು ಗಮನದಲ್ಲಿಟ್ಟುಕೊಂಡು ಹೆಚ್ಚುವರಿ ಬಸ್‌ ಸೌಲಭ್ಯ ಮಾಡಿದ್ದು, ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೈಸೂರಿಗೆ ಫ್ಲೈ ಬಸ್‌ ಮೂಲಕ ನೇರ ಸಾರಿಗೆ ಸೌಲಭ್ಯ ಕಲ್ಪಿಸಿದೆ. ಅಲ್ಲದೇ ಜಲದರ್ಶಿನಿ, ಗಿರಿದರ್ಶಿನಿ ಮತ್ತು ದೇವದರ್ಶಿನಿಗಳ ವಿಶೇಷ ಪ್ರವಾಸ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಈ ಹೆಚ್ಚುವರಿ ಬಸ್‌ಗಳು ಬೆಂಗಳೂರಿನ ಕೆಂಪೇಗೌಡ ಬಸ್‌ ನಿಲ್ದಾಣ, ಮೈಸೂರು ರಸ್ತೆ ಬಸ್‌ ನಿಲ್ದಾಣ ಹಾಗೂ ಶಾಂತಿನಗರದ ಬಿಎಂಟಿಸಿ ಬಸ್‌ ನಿಲ್ದಾಣದಿಂದ ಕಾರ್ಯ ನಿರ್ವಹಿಸಲಿವೆ. ಮೈಸೂರು, ಮಡಿಕೇರಿ, ಮಂಡ್ಯ, ಮಳವಳ್ಳಿ, ಎಚ್‌.ಡಿ.ಕೋಟೆ, ಚಾಮರಾಜನಗರ, ಹುಣಸೂರು, ಕೆ.ಆರ್‌.ನಗರ ಹಾಗೂ ಗುಂಡ್ಲುಪೇಟೆ ಸೇರಿದಂತೆ ಇನ್ನಿತರ ಪ್ರವಾಸಿ ತಾಣದ ಕೇಂದ್ರಗಳಿಗೆ ಭೇಟಿ ನೀಡುವ ಪ್ರವಾಸಿಗರ ಅಗತ್ಯತೆಗಳನ್ನು ಪೂರೈಸಲು ಮೈಸೂರಿನಿಂದ 400 ವಿಶೇಷ ಬಸ್‌ಗಳ ವ್ಯವಸ್ಥೆಯನ್ನು ಮಾಡಲಾಗಿದೆ.

ಈ ವಿಶೇಷ ಬಸ್‌ಗಳಿಗೆ ಗಿರಿದರ್ಶಿನಿ ಎಂದು ಹೆಸರಿಸಲಾಗಿದ್ದು, ಮೈಸೂರಿನಿಂದ ಬರುವ ಪ್ರವಾಸಿಗರಿಗೆ ಒಂದು ದಿನದ ವಿಶೇಷ ಪ್ಯಾಕೇಜ್‌ ಪ್ರವಾಸದಂತೆ ಬಂಡಿಪುರ, ಬಿ.ಆರ್‌.ಹಿಲ್ಸ್‌, ಗೋಪಾಲಸ್ವಾಮಿ ಬೆಟ್ಟ ಹಾಗೂ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡುವ ಅವಕಾಶ ಸೌಲಭ್ಯವನ್ನು ಒದಗಿಸಲಾಗಿದೆ. ಮಕ್ಕಳಿಗೆ 250 ರೂ. ಹಾಗೂ ಹಿರಿಯರಿಗೆ 400 ರೂ.ಗಳ ಮಿತಿಯಲ್ಲಿ ಟಿಕೆಟ್‌ ದರವನ್ನು ನಿಗದಿಪಡಿಸಲಾಗಿದೆ.

ಈ ಹೆಚ್ಚುವರಿ ಬಸ್‌ಗಳಲ್ಲಿ ಸಂಚರಿಸಲು ನಾಲ್ಕು ಅಥವಾ ಅದಕ್ಕಿಂತ ಅಧಿಕ ಪ್ರಯಾಣಿಕರು ಒಟ್ಟಿಗೆ ಮುಂಚಿತವಾಗಿ ಟಿಕೆಟ್‌ ಖರೀದಿಸಿದ್ದರೆ ಶೇ.5 ರಷ್ಟು ಮತ್ತು ಪ್ರವಾಸಕ್ಕೆ ಒಂದು ಕಡೆಯಿಂದ ಹೋಗಿ ಬರುವುದಕ್ಕೆ ಒಟ್ಟಿಗೆ ಟಿಕೆಟ್‌ ಖರೀದಿಸಿದ್ದರೆ ಶೇ.10ರಷ್ಟು ಪ್ರಯಾಣದ ದರದಲ್ಲಿ ರಿಯಾಯಿತಿ ಸಿಗಲಿದೆ. ಆಸ್ತಕರು www.ksrtc.karnataka.gov.in ವೈಬ್‌ಸೈಟ್‌ ಅಥವಾ ಮೊಬೈಲ್‌ ಮುಖಾಂತರ ಇ-ಟಿಕೆಟನ್ನು ಕಾಯ್ದಿರಿಸಬಹುದು ಎಂದು ಮಾಹಿತಿ ನೀಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

43 mins ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

45 mins ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

47 mins ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

49 mins ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

53 mins ago