ರಾಜ್ಯ

ಪ್ರಯಾಣಿಕರಿಗೆ ಗುಡ್‌ನ್ಯೂಸ್‌: ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ 2,000 ಹೆಚ್ಚುವರಿ ಬಸ್‌ ವ್ಯವಸ್ಥೆ

ಬೆಂಗಳೂರು: ನಾಡಹಬ್ಬ ಮೈಸೂರು ದಸರಾ ಪ್ರಯುಕ್ತ ಸಾಲು ಸಾಲು ದಸರಾ ರಜೆಗಳ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಅಕ್ಟೋಬರ್.9ರಿಂದ 12ರವರೆಗೆ 2,000 ಹೆಚ್ಚುವರಿ ಬಸ್‌ಗಳನ್ನು ಕೆಎಸ್‌ಆರ್‌ಟಿಸಿ ವ್ಯವಸ್ಥೆ ಮಾಡಿದೆ.

ಕೆಎಸ್‌ಆರ್‌ಟಿಸಿ ನಿಗಮವು ದಸರಾ ರಜೆಯನ್ನು ಗಮನದಲ್ಲಿಟ್ಟುಕೊಂಡು ಹೆಚ್ಚುವರಿ ಬಸ್‌ ಸೌಲಭ್ಯ ಮಾಡಿದ್ದು, ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೈಸೂರಿಗೆ ಫ್ಲೈ ಬಸ್‌ ಮೂಲಕ ನೇರ ಸಾರಿಗೆ ಸೌಲಭ್ಯ ಕಲ್ಪಿಸಿದೆ. ಅಲ್ಲದೇ ಜಲದರ್ಶಿನಿ, ಗಿರಿದರ್ಶಿನಿ ಮತ್ತು ದೇವದರ್ಶಿನಿಗಳ ವಿಶೇಷ ಪ್ರವಾಸ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಈ ಹೆಚ್ಚುವರಿ ಬಸ್‌ಗಳು ಬೆಂಗಳೂರಿನ ಕೆಂಪೇಗೌಡ ಬಸ್‌ ನಿಲ್ದಾಣ, ಮೈಸೂರು ರಸ್ತೆ ಬಸ್‌ ನಿಲ್ದಾಣ ಹಾಗೂ ಶಾಂತಿನಗರದ ಬಿಎಂಟಿಸಿ ಬಸ್‌ ನಿಲ್ದಾಣದಿಂದ ಕಾರ್ಯ ನಿರ್ವಹಿಸಲಿವೆ. ಮೈಸೂರು, ಮಡಿಕೇರಿ, ಮಂಡ್ಯ, ಮಳವಳ್ಳಿ, ಎಚ್‌.ಡಿ.ಕೋಟೆ, ಚಾಮರಾಜನಗರ, ಹುಣಸೂರು, ಕೆ.ಆರ್‌.ನಗರ ಹಾಗೂ ಗುಂಡ್ಲುಪೇಟೆ ಸೇರಿದಂತೆ ಇನ್ನಿತರ ಪ್ರವಾಸಿ ತಾಣದ ಕೇಂದ್ರಗಳಿಗೆ ಭೇಟಿ ನೀಡುವ ಪ್ರವಾಸಿಗರ ಅಗತ್ಯತೆಗಳನ್ನು ಪೂರೈಸಲು ಮೈಸೂರಿನಿಂದ 400 ವಿಶೇಷ ಬಸ್‌ಗಳ ವ್ಯವಸ್ಥೆಯನ್ನು ಮಾಡಲಾಗಿದೆ.

ಈ ವಿಶೇಷ ಬಸ್‌ಗಳಿಗೆ ಗಿರಿದರ್ಶಿನಿ ಎಂದು ಹೆಸರಿಸಲಾಗಿದ್ದು, ಮೈಸೂರಿನಿಂದ ಬರುವ ಪ್ರವಾಸಿಗರಿಗೆ ಒಂದು ದಿನದ ವಿಶೇಷ ಪ್ಯಾಕೇಜ್‌ ಪ್ರವಾಸದಂತೆ ಬಂಡಿಪುರ, ಬಿ.ಆರ್‌.ಹಿಲ್ಸ್‌, ಗೋಪಾಲಸ್ವಾಮಿ ಬೆಟ್ಟ ಹಾಗೂ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡುವ ಅವಕಾಶ ಸೌಲಭ್ಯವನ್ನು ಒದಗಿಸಲಾಗಿದೆ. ಮಕ್ಕಳಿಗೆ 250 ರೂ. ಹಾಗೂ ಹಿರಿಯರಿಗೆ 400 ರೂ.ಗಳ ಮಿತಿಯಲ್ಲಿ ಟಿಕೆಟ್‌ ದರವನ್ನು ನಿಗದಿಪಡಿಸಲಾಗಿದೆ.

ಈ ಹೆಚ್ಚುವರಿ ಬಸ್‌ಗಳಲ್ಲಿ ಸಂಚರಿಸಲು ನಾಲ್ಕು ಅಥವಾ ಅದಕ್ಕಿಂತ ಅಧಿಕ ಪ್ರಯಾಣಿಕರು ಒಟ್ಟಿಗೆ ಮುಂಚಿತವಾಗಿ ಟಿಕೆಟ್‌ ಖರೀದಿಸಿದ್ದರೆ ಶೇ.5 ರಷ್ಟು ಮತ್ತು ಪ್ರವಾಸಕ್ಕೆ ಒಂದು ಕಡೆಯಿಂದ ಹೋಗಿ ಬರುವುದಕ್ಕೆ ಒಟ್ಟಿಗೆ ಟಿಕೆಟ್‌ ಖರೀದಿಸಿದ್ದರೆ ಶೇ.10ರಷ್ಟು ಪ್ರಯಾಣದ ದರದಲ್ಲಿ ರಿಯಾಯಿತಿ ಸಿಗಲಿದೆ. ಆಸ್ತಕರು www.ksrtc.karnataka.gov.in ವೈಬ್‌ಸೈಟ್‌ ಅಥವಾ ಮೊಬೈಲ್‌ ಮುಖಾಂತರ ಇ-ಟಿಕೆಟನ್ನು ಕಾಯ್ದಿರಿಸಬಹುದು ಎಂದು ಮಾಹಿತಿ ನೀಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನೀತಿ ಪಾಠಗಳು ಶಿಕ್ಷಣ ಭಾಗವಾಗಬೇಕೆಂಬ ಸಲಹೆ ಸ್ವಾಗತಾರ್ಹ

ಈಗಿನ ಕಾಲದ ಮಕ್ಕಳಿಗೆ ಎಲ್ಲವೂ ಕ್ಷಣ ಮಾತ್ರದಲ್ಲಿ ಅರ್ಥವಾಗುವುದರಿಂದ ಅವರ ವರ್ತನೆಯಲ್ಲಿ ಸಹಜತೆಯನ್ನು ಕಾಣಬಹುದು. ಇಂದಿನ ಮಕ್ಕಳಿಗೆ ಭಯ ಇಲ್ಲ…

5 hours ago

ಓದುಗರ ಪತ್ರ: ವಿಚ್ಛೇದನಗಳೂ ದುಬಾರಿಯಾಗಿವೇ!

ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ಮತ್ತು ನಾಗರತ್ನ ದಂಪತಿಯ ವಿವಾಹ ವಿಚ್ಛೇದನಕ್ಕೆ ರಾಜ್ಯ ಹೈಕೋರ್ಟ್ ಸಮ್ಮತಿ ನೀಡಿರುವುದು ಮಾಧ್ಯಮಗಳ…

5 hours ago

ಓದುಗರ ಪತ್ರ: 3 ಕೋಟಿ ರೂ. ವೆಚ್ಚದ ಬಸ್ ನಿಲ್ದಾಣ ಜನರಿಗೋ, ಖಾಸಗಿ ವಾಹನಗಳಿಗೋ?

ಮೈಸೂರಿನ ಶಾರದಾದೇವಿ ನಗರದಲ್ಲಿ ಹೊಸ ಬಸ್ ನಿಲ್ದಾಣವನ್ನು ಸುಮಾರು ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಆದರೆ ಈ ಬಸ್…

5 hours ago

ಬಹುತ್ವ ಭಾರತ ನೀತಿಗೆ ಮೋಹನ್ ಭಾಗವತ್ ಬದ್ಧರೇ?

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ರಾಷ್ಟ್ರೀಯ ಸ್ವಯಂ ಸೇವಾ ಸಂಘವು ಆರಂಭವಾಗಿ ನೂರು ವರ್ಷ ತುಂಬಿದ ಸ್ಮರಣಾರ್ಥವಾಗಿ ಸಂಘದ ಉದ್ದೇಶ…

5 hours ago

ವಿಶ್ವದಾಖಲೆಗೆ ಕಾಯುತ್ತಿರುವ ಅರಿವೆಯ ಮೇಲಿನ ಮದರಂಗಿ ಚಿತ್ತಾರ

ಅಕ್ಷತಾ ‘ಹವ್ಯಾಸ ಮನುಷ್ಯನ ಕನಸುಗಳಿಗೆ ಗರಿ ಮೂಡಿಸುತ್ತದೆ. ಕನಸು ಕಾಣುವ ವ್ಯಕ್ತಿಗೆ ಅವಕಾಶಗಳ ದಾರಿ ತೆರೆದುಕೊಳ್ಳುತ್ತವೆ’ ಇದು ಬೆಂಗಳೂರಿನಲ್ಲಿ ನೆಲೆಸಿರುವ…

5 hours ago

ಅಧ್ಯಾತ್ಮದ ಅಮಲಿನಲ್ಲಿ ದಾರಿ ತಪ್ಪಿದ ತರುಣ ತರುಣಿಯರು

ಸಿರಿ ಮೈಸೂರು ಆ ದಿನ ನಾನು ಸಾಮಾನ್ಯವಾಗಿ ಹೋಗದಂತಹ ಒಂದು ಅಪರೂಪದ ಸ್ಥಳಕ್ಕೆ ಹೋಗಿದ್ದೆ. ಮೈಸೂರಿನಿಂದ ಐದಾರು ಗಂಟೆಗಳ ಪ್ರಯಾಣದ…

5 hours ago