ರಾಜ್ಯ

ರಾಜ್ಯದೆಲ್ಲೆಡೆ ಉತ್ತಮ ಮಳೆ: ಎಲ್ಲ ಕೆರೆಗಳಿಗೆ ನೀರು ತುಂಬಿಸಲು ಸರ್ಕಾರ ಕಾಯಕಲ್ಪ – ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಭದ್ರಾವತಿ: ರಾಜ್ಯದ ರೈತರ ಹಿತ ಕಾಯಲು ಸರ್ಕಾರ ಬದ್ಧವಾಗಿದ್ದು, ರಾಜ್ಯದಲ್ಲೆಡೆ ಈಗ ಉತ್ತಮ ಮಳೆಯಾಗುತ್ತಿರುವುದರಿಂದ ಎಲ್ಲಾ ಕೆರೆಗಳಿಗೆ ನೀರು ತುಂಬಿಸುವ ಕಾಯಕಲ್ಪಕ್ಕೆ ಸರ್ಕಾರ ಮುಂದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಭದ್ರಾವತಿ ತಾಲ್ಲೂಕಿನ ಬಿ.ಆರ್. ಪ್ರಾಜೆಕ್ಟ್ ಬಳಿ ಭಾನುವಾರ ನಡೆದ ಮಧ್ಯಕರ್ನಾಟಕ ಭಾಗದ ಜೀವನಾಡಿ ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಣೆ ಮತ್ತು ಗಂಗಾ ಪೂಜೆಯನ್ನು ನೆರವೇರಿಸಿದ ನಂತರ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ರೈತರ ಬಗ್ಗೆ ಅಪಾರ ಕಾಳಜಿ ಇದೆ. ರೈತರಿಗಾಗಿ ಹಲವು ಯೋಜನೆ ರೂಪಿಸಿದ್ದಾರೆ ಎಂದರು.

ರೈತರ ಸಮಸ್ಯೆಗಳಿಗೆ ಸದಾ ಸ್ಪಂದನೆ

ರಾಜ್ಯದಲ್ಲಿ ಈ ಹಿಂದೆ ಎದುರಾದ ಬರವನ್ನು ನಮ್ಮ ಸರ್ಕಾರ ಸಮರ್ಥವಾಗಿ ಎದುರಿಸಿತು. ಈಗ ಎದುರಾಗಿರುವ ಮಳೆಹಾನಿ, ನೆರೆಯನ್ನೂ ಕೂಡ ಸರ್ಕಾರ ಸಮರ್ಥವಾಗಿ ಎದುರಿಸುತ್ತಿದೆ. ಈ ವರ್ಷ ಸಂತಸದ ಸಂಗತಿ ಎಂದರೆ, ನಾಡಿನಲ್ಲೆಡೆ ಉತ್ತಮವಾಗಿ ಮಳೆ ಆಗಿದೆ. ಕೆಲವೆಡೆ ಅನಾಹುತಕ್ಕೂ ಕಾರಣವಾಗಿದೆ. ಎಲ್ಲೇ, ಏನೇ ಸಮಸ್ಯೆಯಾದರೂ ತಕ್ಷಣವೇ ಸ್ಪಂದಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ರೈತರಿಗೆ, ಜನಸಾಮಾನ್ಯರಿಗೆ ಯಾವುದೇ ರೀತಿಯಿಂದಲೂ ತೊಂದರೆ ಆಗದಂತೆ ಅಗತ್ಯ ಕ್ರಮ ಕೈಗೊಳ್ಳುತ್ತಿದೆ ಎಂದು ಸಚಿವರು ಹೇಳಿದರು.

ಈ ಬಾರಿ ಮಲೆನಾಡ ಭಾಗದಲ್ಲಿ ಉತ್ತಮವಾಗಿ ಮಳೆ ಆಗಿದ್ದು ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಕೃಷಿ ಚಟುವಟಿಕೆಗಳು ಕೂಡ ಬಿರುಸುಗೊಂಡಿವೆ. ಎಲ್ಲೆಡೆ ಒಳ್ಳೆಯ ಮಳೆ ಆಗುತ್ತಿರುವುದರಿಂದ ಉತ್ತಮವಾಗಿ ಬೆಳೆ ಬಂದು ರೈತನ ಸಂಕಷ್ಟ ಪರಿಹಾರವಾಗಲಿ ಎನ್ನುವುದು ಸರ್ಕಾರದ ಆಶಯ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ನೀರಾವರಿ ಯೋಜನೆಗಳಿಗೆ ಆದ್ಯತೆ

ನಾಡಿನ ಹಿತ ಕಾಯುವಂತ ಅನೇಕ ಜನಪರ ಕಾರ್ಯಕ್ರಮಗಳನ್ನು ಸರಕಾರ ಅನುಷ್ಠಾನಗೊಳಿಸುತ್ತಿದೆ. ವಿಶೇಷವಾಗಿ ರೈತರ ಕಲ್ಯಾಣಕ್ಕಾಗಿ ಕಾರ್ಯ ಯೋಜನೆ ರೂಪಿಸಿದೆ. ಕುಂಠಿತಗೊಂಡಿದ್ದ ನೀರಾವರಿ ಯೋಜನೆಗಳಿಗೆ ಕಾಯಕಲ್ಪ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

ಸರಿಯಾದ ರೀತಿಯಲ್ಲಿ ನೀರಿನ ಸದ್ಬಳಕೆ

ಭದ್ರಾ ಜಲಾಶಯದಿಂದ ಸುಮಾರು 11 ಜಿಲ್ಲೆಗಳ 2.5 ಲಕ್ಷ ಹೆಕ್ಟೇರ್ ಕೃಷಿ ಭೂಮಿಗೆ ನೀರು ಒದಗಿಸಲಾಗುತ್ತಿದೆ. ಇನ್ನೂ 2.5 ಲಕ್ಷ ಹೆಕ್ಟೇರ್ ಕೃಷಿ ಭೂಮಿಗೆ ನೀರು ಒದಗಿಸುವ ಯೋಜನೆಗಳು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನುದಾನದಿಂದ ಕಾರ್ಯಗತವಾಗುತ್ತಿವೆ. ಈ ಭಾಗದ ರೈತರು ಸರಿಯಾದ ರೀತಿಯಲ್ಲಿ ನೀರಿನ ಸದ್ಬಳಕೆ ಮಾಡಿಕೊಳ್ಳಬೇಕೆಂದು ಸಚಿವರು ಸಲಹೆ ನೀಡಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನಾಳೆ ಬುದ್ಧ ಪೂರ್ಣಿಮೆ: ಬೆಂಗಳೂರಿನಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ

ಬೆಂಗಳೂರು: ಬುದ್ಧ ಪೂರ್ಣಿಮೆಯ ಹಿನ್ನೆಲೆಯಲ್ಲಿ ನಾಳೆ(ಮೇ.1ರಂದು) ಬೆಂಗಳೂರು ನಗರದಾದ್ಯಂತ ಮಾಂಸ ಮಾರಾವನ್ನು ನಿಷೇಧಿಸಿ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಆದೇಶ ಹೊರಡಿಸಿದೆ.…

25 mins ago

ಪತ್ನಿಯನ್ನು ಕೊಡಲಿಯಿಂದ ಹೊಡೆದು ಸಾಯಿಸಿ ಪೊಲೀಸರಿಗೆ ಶರಣಾದ ಪತಿ

ಮೈಸೂರು: ಸಣ್ಣ ವಿಚಾರಕ್ಕೆ ಆರಂಭವಾದ  ಕೌಟುಂಬಿಕ ಕಲಹವೊಂದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರಿನ ಹಳೆ ಕೆಸರೆ ಗ್ರಾಮದಲ್ಲಿ ನಡೆದಿದೆ. ಕೆಲಸ…

49 mins ago

ನಾಳೆಗೆ 60 ದಿನಗಳ ಡೆಡ್‌ಲೈನ್‌ ಅಂತ್ಯ: ಸಂಕಷ್ಟದಲ್ಲಿ ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್‌: ಅಮೇರಿಕಾ ಮತ್ತು ಇರಾನ್‌ ನಡುವಿನ ಮಿಲಿಟರಿ ಸಂಘರ್ಷ ಈಗ ನಿರ್ಣಾಯಕ ಘಟ್ಟಕ್ಕೆ ಬಂದು ತಲುಪಿದೆ. ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌…

1 hour ago

ರಾಜ್ಯದಲ್ಲಿ ಮೂರು ದಿನ ಮಳೆ ಮುನ್ಸೂಚನೆ: ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ರಾಜ್ಯದಲ್ಲಿ ಮೂರು ದಿನಗಳ ಕಾಲ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ.1ರಂದು ರಾಯಚೂರು, ಕೊಪ್ಪಳ,…

3 hours ago

ಯಾಲಕ್ಕೂರು, ಸುತ್ತಲಿನ ಗ್ರಾಮಗಳಿಗೆ ಬಂತು ಸಾರಿಗೆ ಬಸ್ಸು!

ಚಾಮರಾಜನಗರ: ತಾಲ್ಲೂಕಿನ ಯಾಲಕ್ಕೂರು ಹಾಗೂ ಸುತ್ತಮುತ್ತಲಿನ ಆರು ಗ್ರಾಮಗಳಿಗೆ ಸಾರಿಗೆ ಬಸ್ಸೇ ಇಲ್ಲ ಎಂದು ‘ಆಂದೋಲನ ಪತ್ರಿಕೆ’ಯಲ್ಲಿ ಈಚೆಗೆ ಪ್ರಕಟವಾಗಿದ್ದ…

6 hours ago

ಓದುಗರ ಪತ್ರ: ಬಿಸಿಲಲ್ಲೋ ಅಣ್ಣಾ..!

ಬಿಸಿಲಲ್ಲೋ ಅಣ್ಣ ಇದು ಬರಿ ಬಿಸಿಲಲ್ಲೋ ! ಯಾರು ಹೆಸರಿಟ್ಟರೋ? ಇದಕ್ಕೆ ‘ನಿಲ್ಲೋ ಎಲ್ಲೋ’ ನಿಂತಲ್ಲಿ ನಿಲ್ಲಲು, ಕುಂತಲ್ಲಿ ಕೂರಲು…

6 hours ago