ರಾಜ್ಯ

ರಾಜ್ಯದ ವಿವಿಧೆಡೆ ಉತ್ತಮ ಮಳೆ ; ರೈತರ ಮೊಗದಲ್ಲಿ ಮಂದಹಾಸ

ಬೆಂಗಳೂರು: ಬಿಸಿಲ ಬೇಗೆಯಿಂದ ಬೆಂದಿ ಬೆಂಡಾಗಿದ್ದ ಭೂಮಿಗೆ ವರುಣ ಕೃಪೆ ತೋರಿದ್ದು, ಉತ್ತಮ ಮಳೆಯಾಗುತ್ತಿದೆ.  ಅಡಿಕೆ ಹಾಗೂ ಮಾವು ಬೆಳೆ ಸೇರಿದಂತೆ ರೈತರಿಗೆ ಅನುಕೂಲವಾಗಿದೆ.

ನಿನ್ನೆ ರಾಜ್ಯದ ವಿವಿಧೆಡೆ ವರ್ಷದ ಮೊದಲ ಮಳೆಯಾಗಿದ್ದು, ರೈತರು ಮಂದಹಾಸ ಬೀರಿದ್ದಾರೆ. ಬೆಂಗಳೂರು ನಗರ, ಗ್ರಾಮಾಂತರ, ತುಮಕೂರು, ಹಾಸನ, ಕೋಲಾರ, ಚಿಕ್ಕಬಳ್ಳಾಪುರ. ಮಂಡ್ಯ , ಮೈಸೂರು, ಚಾಮರಾಜನಗರ ಸೇರಿದಂತೆ ಮತ್ತಿತರ ಜಿಲ್ಲೆಗಳಲ್ಲಿ ಜೋರು ಮತ್ತು ಸಾಧಾರಣ ಮಳೆಯಾಗಿದೆ. ಮಾವು ಹೆಚ್ಚಾಗಿ ಬೆಳೆಯುವ ಶ್ರೀನಿವಾಸಪುರದಲ್ಲಿ ಆಲಿಕಲ್ಲು ಮಳೆಯಾಗಿದೆ.

ದೇವನಹಳ್ಳಿ ತಾಲೂಕಿನಲ್ಲಿ ಸುಮಾರು ಆರ್ಧ ತಾಸು ಮಳೆ ಸುರಿದಿದ್ದು ನಾಗನಾಯಕನಹಳ್ಳಿ ಹಾಗೂ ವರದೇನಹಳ್ಳಿಯಲ್ಲಿ ಕೆಲ ಮನೆಗಳಿಗೆ ನೀರು ನುಗ್ಗಿದ್ದರಿಂದ ಹಲವು ವಸ್ತುಗಳು ಹಾನಿಗೊಳಗಾಗಿವೆ. ಚಿಂತಾಮಣಿ ತಾಲ್ಲೂಕಿನ ಕಂಗಾಹಳ್ಳಿಯಲ್ಲಿ, ಆಲಿಕಲ್ಲು ಮಳೆಯಾಗಿದ್ದು ಕ್ಯಾಪ್ಸಿಕಂ ತೋಟದ ನೆಟ್‍ಹೌಸ್ ಮಳೆ ಗಾಳಿಗೆ ನಾಶವಾಗಿದೆ.

ರಾಮನಗರದಲ್ಲಿ ಸಂಜೆ ಗುಡುಗು ಸೀಡಿಲ ಆರ್ಭಟ ಜೋರಾಗಿದ್ದು ಅರ್ಧಗಂಟೆಗಳ ಕಾಲ ಮಳೆ ಸುರಿದಿದೆ. ಕೋಲಾರದಲ್ಲೂ ಸಹ ಉತ್ತಮ ಮಳೆಯಾಗಿದ್ದು ನೀರಾವರಿಯಲ್ಲಿ ಬೆಳೆಯುವ ತರಕಾರಿ ಬೆಳೆ ನಾಟಿಗೆ ಅನುಕೂಲವಾದಂತಿದೆ. ಕಳೆದರೆಡು ದಿನಗಳಿಂದ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಸುರಿಯುತ್ತಿರುವ ಮಳೆ, ಮಳೆಯಿಂದ ಜಾನುವಾರಗಳಿಗೆ ಕುಡಿಯುವ ನೀರು ಮತ್ತು ಮೇವುಗೆ ಸಿಗುವಂತಾಗಿದೆ. ಬೇತಮಂಗಲದ ಅನೇಕ ಭಾಗಗಳಲ್ಲಿ ಸುರಿದ ಮಳೆಯಿಂದ ಮನೆಗಳಿಗೆ ನೀರುನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಇನ್ನೂ ಮಡಿಕೇರಿಯಲ್ಲೂ ಸಹ ಉತ್ತಮ ಮಳೆಯಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

8 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

8 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

9 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

9 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

9 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

10 hours ago