Transparent umbrella under heavy rain against water drops splash background. Rainy weather concept.
ಬೆಂಗಳೂರು: ಬಿಸಿಲ ಬೇಗೆಯಿಂದ ಬೆಂದಿ ಬೆಂಡಾಗಿದ್ದ ಭೂಮಿಗೆ ವರುಣ ಕೃಪೆ ತೋರಿದ್ದು, ಉತ್ತಮ ಮಳೆಯಾಗುತ್ತಿದೆ. ಅಡಿಕೆ ಹಾಗೂ ಮಾವು ಬೆಳೆ ಸೇರಿದಂತೆ ರೈತರಿಗೆ ಅನುಕೂಲವಾಗಿದೆ.
ನಿನ್ನೆ ರಾಜ್ಯದ ವಿವಿಧೆಡೆ ವರ್ಷದ ಮೊದಲ ಮಳೆಯಾಗಿದ್ದು, ರೈತರು ಮಂದಹಾಸ ಬೀರಿದ್ದಾರೆ. ಬೆಂಗಳೂರು ನಗರ, ಗ್ರಾಮಾಂತರ, ತುಮಕೂರು, ಹಾಸನ, ಕೋಲಾರ, ಚಿಕ್ಕಬಳ್ಳಾಪುರ. ಮಂಡ್ಯ , ಮೈಸೂರು, ಚಾಮರಾಜನಗರ ಸೇರಿದಂತೆ ಮತ್ತಿತರ ಜಿಲ್ಲೆಗಳಲ್ಲಿ ಜೋರು ಮತ್ತು ಸಾಧಾರಣ ಮಳೆಯಾಗಿದೆ. ಮಾವು ಹೆಚ್ಚಾಗಿ ಬೆಳೆಯುವ ಶ್ರೀನಿವಾಸಪುರದಲ್ಲಿ ಆಲಿಕಲ್ಲು ಮಳೆಯಾಗಿದೆ.
ದೇವನಹಳ್ಳಿ ತಾಲೂಕಿನಲ್ಲಿ ಸುಮಾರು ಆರ್ಧ ತಾಸು ಮಳೆ ಸುರಿದಿದ್ದು ನಾಗನಾಯಕನಹಳ್ಳಿ ಹಾಗೂ ವರದೇನಹಳ್ಳಿಯಲ್ಲಿ ಕೆಲ ಮನೆಗಳಿಗೆ ನೀರು ನುಗ್ಗಿದ್ದರಿಂದ ಹಲವು ವಸ್ತುಗಳು ಹಾನಿಗೊಳಗಾಗಿವೆ. ಚಿಂತಾಮಣಿ ತಾಲ್ಲೂಕಿನ ಕಂಗಾಹಳ್ಳಿಯಲ್ಲಿ, ಆಲಿಕಲ್ಲು ಮಳೆಯಾಗಿದ್ದು ಕ್ಯಾಪ್ಸಿಕಂ ತೋಟದ ನೆಟ್ಹೌಸ್ ಮಳೆ ಗಾಳಿಗೆ ನಾಶವಾಗಿದೆ.
ರಾಮನಗರದಲ್ಲಿ ಸಂಜೆ ಗುಡುಗು ಸೀಡಿಲ ಆರ್ಭಟ ಜೋರಾಗಿದ್ದು ಅರ್ಧಗಂಟೆಗಳ ಕಾಲ ಮಳೆ ಸುರಿದಿದೆ. ಕೋಲಾರದಲ್ಲೂ ಸಹ ಉತ್ತಮ ಮಳೆಯಾಗಿದ್ದು ನೀರಾವರಿಯಲ್ಲಿ ಬೆಳೆಯುವ ತರಕಾರಿ ಬೆಳೆ ನಾಟಿಗೆ ಅನುಕೂಲವಾದಂತಿದೆ. ಕಳೆದರೆಡು ದಿನಗಳಿಂದ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಸುರಿಯುತ್ತಿರುವ ಮಳೆ, ಮಳೆಯಿಂದ ಜಾನುವಾರಗಳಿಗೆ ಕುಡಿಯುವ ನೀರು ಮತ್ತು ಮೇವುಗೆ ಸಿಗುವಂತಾಗಿದೆ. ಬೇತಮಂಗಲದ ಅನೇಕ ಭಾಗಗಳಲ್ಲಿ ಸುರಿದ ಮಳೆಯಿಂದ ಮನೆಗಳಿಗೆ ನೀರುನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಇನ್ನೂ ಮಡಿಕೇರಿಯಲ್ಲೂ ಸಹ ಉತ್ತಮ ಮಳೆಯಾಗಿದೆ.
ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…
ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರು ಆದ ಕಾರಣ, ಇಂದು (ಡಿಸೆಂಬರ್ 17) ವಿಧಾನಸಭೆ ಅಧಿವೇಶನದಲ್ಲಿ…
ನಂಜನಗೂಡು : ದಕ್ಷಿಣ ಕಾಶಿ ಎಂದೇ ಹೆಸರಾಗಿರುವ, ಆದಾಯದಲ್ಲಿ ರಾಜ್ಯದಲ್ಲಿ ಐದನೇ ಸ್ಥಾನದಲ್ಲಿರುವ ನಂಜನಗೂಡು ಶ್ರೀಕಂಠೇಶ್ವರ ದೇವಾಯದಲ್ಲಿ ಲಕ್ಷಾಂತರ ರೂ.…
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’…
ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದಿಂದ ಬಂಧನಕ್ಕೆ ಒಳಗಾದ ಚಿನ್ನಯ್ಯ ಕೊನೆಗೂ…
ಮಂಡ್ಯ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಯಾವ ಕೈಗಾರಿಕೆಯನ್ನು ತರುವರೋ ತರಲಿ. ಮಳವಳ್ಳಿ ಕ್ಷೇತ್ರದಲ್ಲಿ 400ರಿಂದ 500 ಎಕರೆ…