Transparent umbrella under heavy rain against water drops splash background. Rainy weather concept.
ಬೆಂಗಳೂರು: ಬಿಸಿಲ ಬೇಗೆಯಿಂದ ಬೆಂದಿ ಬೆಂಡಾಗಿದ್ದ ಭೂಮಿಗೆ ವರುಣ ಕೃಪೆ ತೋರಿದ್ದು, ಉತ್ತಮ ಮಳೆಯಾಗುತ್ತಿದೆ. ಅಡಿಕೆ ಹಾಗೂ ಮಾವು ಬೆಳೆ ಸೇರಿದಂತೆ ರೈತರಿಗೆ ಅನುಕೂಲವಾಗಿದೆ.
ನಿನ್ನೆ ರಾಜ್ಯದ ವಿವಿಧೆಡೆ ವರ್ಷದ ಮೊದಲ ಮಳೆಯಾಗಿದ್ದು, ರೈತರು ಮಂದಹಾಸ ಬೀರಿದ್ದಾರೆ. ಬೆಂಗಳೂರು ನಗರ, ಗ್ರಾಮಾಂತರ, ತುಮಕೂರು, ಹಾಸನ, ಕೋಲಾರ, ಚಿಕ್ಕಬಳ್ಳಾಪುರ. ಮಂಡ್ಯ , ಮೈಸೂರು, ಚಾಮರಾಜನಗರ ಸೇರಿದಂತೆ ಮತ್ತಿತರ ಜಿಲ್ಲೆಗಳಲ್ಲಿ ಜೋರು ಮತ್ತು ಸಾಧಾರಣ ಮಳೆಯಾಗಿದೆ. ಮಾವು ಹೆಚ್ಚಾಗಿ ಬೆಳೆಯುವ ಶ್ರೀನಿವಾಸಪುರದಲ್ಲಿ ಆಲಿಕಲ್ಲು ಮಳೆಯಾಗಿದೆ.
ದೇವನಹಳ್ಳಿ ತಾಲೂಕಿನಲ್ಲಿ ಸುಮಾರು ಆರ್ಧ ತಾಸು ಮಳೆ ಸುರಿದಿದ್ದು ನಾಗನಾಯಕನಹಳ್ಳಿ ಹಾಗೂ ವರದೇನಹಳ್ಳಿಯಲ್ಲಿ ಕೆಲ ಮನೆಗಳಿಗೆ ನೀರು ನುಗ್ಗಿದ್ದರಿಂದ ಹಲವು ವಸ್ತುಗಳು ಹಾನಿಗೊಳಗಾಗಿವೆ. ಚಿಂತಾಮಣಿ ತಾಲ್ಲೂಕಿನ ಕಂಗಾಹಳ್ಳಿಯಲ್ಲಿ, ಆಲಿಕಲ್ಲು ಮಳೆಯಾಗಿದ್ದು ಕ್ಯಾಪ್ಸಿಕಂ ತೋಟದ ನೆಟ್ಹೌಸ್ ಮಳೆ ಗಾಳಿಗೆ ನಾಶವಾಗಿದೆ.
ರಾಮನಗರದಲ್ಲಿ ಸಂಜೆ ಗುಡುಗು ಸೀಡಿಲ ಆರ್ಭಟ ಜೋರಾಗಿದ್ದು ಅರ್ಧಗಂಟೆಗಳ ಕಾಲ ಮಳೆ ಸುರಿದಿದೆ. ಕೋಲಾರದಲ್ಲೂ ಸಹ ಉತ್ತಮ ಮಳೆಯಾಗಿದ್ದು ನೀರಾವರಿಯಲ್ಲಿ ಬೆಳೆಯುವ ತರಕಾರಿ ಬೆಳೆ ನಾಟಿಗೆ ಅನುಕೂಲವಾದಂತಿದೆ. ಕಳೆದರೆಡು ದಿನಗಳಿಂದ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಸುರಿಯುತ್ತಿರುವ ಮಳೆ, ಮಳೆಯಿಂದ ಜಾನುವಾರಗಳಿಗೆ ಕುಡಿಯುವ ನೀರು ಮತ್ತು ಮೇವುಗೆ ಸಿಗುವಂತಾಗಿದೆ. ಬೇತಮಂಗಲದ ಅನೇಕ ಭಾಗಗಳಲ್ಲಿ ಸುರಿದ ಮಳೆಯಿಂದ ಮನೆಗಳಿಗೆ ನೀರುನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಇನ್ನೂ ಮಡಿಕೇರಿಯಲ್ಲೂ ಸಹ ಉತ್ತಮ ಮಳೆಯಾಗಿದೆ.
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…
ಬೆಂಗಳೂರು: SIR ನೋಟಿಸ್ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…