Transparent umbrella under heavy rain against water drops splash background. Rainy weather concept.
ಬೆಂಗಳೂರು: ಬಿಸಿಲ ಬೇಗೆಯಿಂದ ಬೆಂದಿ ಬೆಂಡಾಗಿದ್ದ ಭೂಮಿಗೆ ವರುಣ ಕೃಪೆ ತೋರಿದ್ದು, ಉತ್ತಮ ಮಳೆಯಾಗುತ್ತಿದೆ. ಅಡಿಕೆ ಹಾಗೂ ಮಾವು ಬೆಳೆ ಸೇರಿದಂತೆ ರೈತರಿಗೆ ಅನುಕೂಲವಾಗಿದೆ.
ನಿನ್ನೆ ರಾಜ್ಯದ ವಿವಿಧೆಡೆ ವರ್ಷದ ಮೊದಲ ಮಳೆಯಾಗಿದ್ದು, ರೈತರು ಮಂದಹಾಸ ಬೀರಿದ್ದಾರೆ. ಬೆಂಗಳೂರು ನಗರ, ಗ್ರಾಮಾಂತರ, ತುಮಕೂರು, ಹಾಸನ, ಕೋಲಾರ, ಚಿಕ್ಕಬಳ್ಳಾಪುರ. ಮಂಡ್ಯ , ಮೈಸೂರು, ಚಾಮರಾಜನಗರ ಸೇರಿದಂತೆ ಮತ್ತಿತರ ಜಿಲ್ಲೆಗಳಲ್ಲಿ ಜೋರು ಮತ್ತು ಸಾಧಾರಣ ಮಳೆಯಾಗಿದೆ. ಮಾವು ಹೆಚ್ಚಾಗಿ ಬೆಳೆಯುವ ಶ್ರೀನಿವಾಸಪುರದಲ್ಲಿ ಆಲಿಕಲ್ಲು ಮಳೆಯಾಗಿದೆ.
ದೇವನಹಳ್ಳಿ ತಾಲೂಕಿನಲ್ಲಿ ಸುಮಾರು ಆರ್ಧ ತಾಸು ಮಳೆ ಸುರಿದಿದ್ದು ನಾಗನಾಯಕನಹಳ್ಳಿ ಹಾಗೂ ವರದೇನಹಳ್ಳಿಯಲ್ಲಿ ಕೆಲ ಮನೆಗಳಿಗೆ ನೀರು ನುಗ್ಗಿದ್ದರಿಂದ ಹಲವು ವಸ್ತುಗಳು ಹಾನಿಗೊಳಗಾಗಿವೆ. ಚಿಂತಾಮಣಿ ತಾಲ್ಲೂಕಿನ ಕಂಗಾಹಳ್ಳಿಯಲ್ಲಿ, ಆಲಿಕಲ್ಲು ಮಳೆಯಾಗಿದ್ದು ಕ್ಯಾಪ್ಸಿಕಂ ತೋಟದ ನೆಟ್ಹೌಸ್ ಮಳೆ ಗಾಳಿಗೆ ನಾಶವಾಗಿದೆ.
ರಾಮನಗರದಲ್ಲಿ ಸಂಜೆ ಗುಡುಗು ಸೀಡಿಲ ಆರ್ಭಟ ಜೋರಾಗಿದ್ದು ಅರ್ಧಗಂಟೆಗಳ ಕಾಲ ಮಳೆ ಸುರಿದಿದೆ. ಕೋಲಾರದಲ್ಲೂ ಸಹ ಉತ್ತಮ ಮಳೆಯಾಗಿದ್ದು ನೀರಾವರಿಯಲ್ಲಿ ಬೆಳೆಯುವ ತರಕಾರಿ ಬೆಳೆ ನಾಟಿಗೆ ಅನುಕೂಲವಾದಂತಿದೆ. ಕಳೆದರೆಡು ದಿನಗಳಿಂದ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಸುರಿಯುತ್ತಿರುವ ಮಳೆ, ಮಳೆಯಿಂದ ಜಾನುವಾರಗಳಿಗೆ ಕುಡಿಯುವ ನೀರು ಮತ್ತು ಮೇವುಗೆ ಸಿಗುವಂತಾಗಿದೆ. ಬೇತಮಂಗಲದ ಅನೇಕ ಭಾಗಗಳಲ್ಲಿ ಸುರಿದ ಮಳೆಯಿಂದ ಮನೆಗಳಿಗೆ ನೀರುನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಇನ್ನೂ ಮಡಿಕೇರಿಯಲ್ಲೂ ಸಹ ಉತ್ತಮ ಮಳೆಯಾಗಿದೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…