ಬೆಂಗಳೂರು: ಅತಿವೃಷ್ಟಿ-ಅನಾವೃಷ್ಟಿ ಸಂದರ್ಭದಲ್ಲಿ ರೈತರನ್ನು ಆರ್ಥಿಕವಾಗಿ ಕೈಹಿಡಿಯುವ ಬೆಳೆ ವಿಮೆ ಯೋಜನೆಗೆ ಇತ್ತೀಚಿನ ವರ್ಷಗಳಲ್ಲಿ ರಾಜ್ಯದಲ್ಲಿ ಉತ್ತಮ ಪ್ರತಿಕ್ರಿಯೆ ಕಂಡುಬರುತ್ತಿದ್ದು, ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಅನ್ನದಾತರು ಬೆಳೆ ವಿಮೆಯತ್ತ ಮುಖ ಮಾಡಿದ್ದಾರೆ.
ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ಮುಂಗಾರು ಹಂಗಾಮಿನಲ್ಲಿ ಜೂನ್.9ರವರೆಗೆ 5,87,741 ರೈತರು 12,29,741 ಹೆಕ್ಟೇರ್ಗೆ ವಿಮೆ ಮಾಡಿಸಿದ್ದಾರೆ. ಕಳೆದ ವರ್ಷ ಈ ಅವಧಿಯಲ್ಲಿ 2 ಲಕ್ಷ ರೈತರು ಮಾತ್ರ ವಿಮೆ ಮಾಡಿಸಿದ್ದರು. ಬರಗಾಲ, ಭಾರೀ ಮಳೆಯ ಆತಂಕದಿಂದಾಗಿ ಬೆಳೆ ವಿಮೆ ಮಾಡಿಸುವವರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಾ ಹೋಗುತ್ತಿರುವುದು ಕಂಡುಬಂದಿದೆ.
ಪ್ರಸಕ್ತ ಸಾಲಿನಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ವಿಮೆ ಮಾಡಿಸಲು ರೈತರು ಮುಂದಾಗಿದ್ದಾರೆ.
36 ವಿಧದ ಆಹಾರ, ಎಣ್ಣೆಕಾಳು, ವಾಣಿಜ್ಯ ಮತ್ತು ತೋಟಗಾರಿಕಾ ಬೆಳೆಗಳಿಗೆ ಕೃಷಿ ಇಲಾಖೆ ಅಧಿಸೂಚನೆ ಹೊರಡಿಸಿದ್ದು, ಎಣ್ಣೆಕಾಳು ಬೆಳೆಗಳಿಗೆ ಶೇ.2ರಷ್ಟು ಮತ್ತು ವಾಣಿಜ್ಯ ಮತ್ತು ತೋಟಗಾರಿಕಾ ಬೆಳೆಗಳಿಗೆ ಶೇ.5ರಷ್ಟು ಪ್ರೀಮಿಯಂ ಅನ್ನು ರೈತರು ಪಾವತಿಸಬೇಕು. ರಾಜ್ಯ ಮತ್ತು ಕೇಂದ್ರ ಸರ್ಕಾರ ಇನ್ನುಳಿದ ಪ್ರೀಮಿಯಂ ಮೊತ್ತ ಪಾವತಿಸಲಿವೆ. ರೈತರು ಸಮೀಪದ ರೈತ ಸಂಪರ್ಕ ಕೇಂದ್ರಕ್ಕೆ ತೆರಳಿ ಬೆಳೆ ಮತ್ತು ಜಿಲ್ಲಾವಾರು ಅಂತಿಮ ದಿನಾಂಕವನ್ನು ಪಡೆಯಬಹುದು.
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…
ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…
ರೇಣುಕಾ ನಿಡುಗುಂದಿ ಜಂತರ್ ಮಂತರ್ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…
ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…