ರಾಜ್ಯ

ಬೆಳೆ ವಿಮೆಗೆ ಕರ್ನಾಟಕದಲ್ಲಿ ರೈತರಿಂದ ಉತ್ತಮ ಸ್ಪಂದನೆ

ಬೆಂಗಳೂರು: ಅತಿವೃಷ್ಟಿ-ಅನಾವೃಷ್ಟಿ ಸಂದರ್ಭದಲ್ಲಿ ರೈತರನ್ನು ಆರ್ಥಿಕವಾಗಿ ಕೈಹಿಡಿಯುವ ಬೆಳೆ ವಿಮೆ ಯೋಜನೆಗೆ ಇತ್ತೀಚಿನ ವರ್ಷಗಳಲ್ಲಿ ರಾಜ್ಯದಲ್ಲಿ ಉತ್ತಮ ಪ್ರತಿಕ್ರಿಯೆ ಕಂಡುಬರುತ್ತಿದ್ದು, ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಅನ್ನದಾತರು ಬೆಳೆ ವಿಮೆಯತ್ತ ಮುಖ ಮಾಡಿದ್ದಾರೆ.

ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್‌ ಭೀಮಾ ಯೋಜನೆಯಡಿ ಮುಂಗಾರು ಹಂಗಾಮಿನಲ್ಲಿ ಜೂನ್.‌9ರವರೆಗೆ 5,87,741 ರೈತರು 12,29,741 ಹೆಕ್ಟೇರ್‌ಗೆ ವಿಮೆ ಮಾಡಿಸಿದ್ದಾರೆ. ಕಳೆದ ವರ್ಷ ಈ ಅವಧಿಯಲ್ಲಿ 2 ಲಕ್ಷ ರೈತರು ಮಾತ್ರ ವಿಮೆ ಮಾಡಿಸಿದ್ದರು. ಬರಗಾಲ, ಭಾರೀ ಮಳೆಯ ಆತಂಕದಿಂದಾಗಿ ಬೆಳೆ ವಿಮೆ ಮಾಡಿಸುವವರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಾ ಹೋಗುತ್ತಿರುವುದು ಕಂಡುಬಂದಿದೆ.

ಪ್ರಸಕ್ತ ಸಾಲಿನಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ವಿಮೆ ಮಾಡಿಸಲು ರೈತರು ಮುಂದಾಗಿದ್ದಾರೆ.

36 ವಿಧದ ಆಹಾರ, ಎಣ್ಣೆಕಾಳು, ವಾಣಿಜ್ಯ ಮತ್ತು ತೋಟಗಾರಿಕಾ ಬೆಳೆಗಳಿಗೆ ಕೃಷಿ ಇಲಾಖೆ ಅಧಿಸೂಚನೆ ಹೊರಡಿಸಿದ್ದು, ಎಣ್ಣೆಕಾಳು ಬೆಳೆಗಳಿಗೆ ಶೇ.2ರಷ್ಟು ಮತ್ತು ವಾಣಿಜ್ಯ ಮತ್ತು ತೋಟಗಾರಿಕಾ ಬೆಳೆಗಳಿಗೆ ಶೇ.5ರಷ್ಟು ಪ್ರೀಮಿಯಂ ಅನ್ನು ರೈತರು ಪಾವತಿಸಬೇಕು. ರಾಜ್ಯ ಮತ್ತು ಕೇಂದ್ರ ಸರ್ಕಾರ ಇನ್ನುಳಿದ ಪ್ರೀಮಿಯಂ ಮೊತ್ತ ಪಾವತಿಸಲಿವೆ. ರೈತರು ಸಮೀಪದ ರೈತ ಸಂಪರ್ಕ ಕೇಂದ್ರಕ್ಕೆ ತೆರಳಿ ಬೆಳೆ ಮತ್ತು ಜಿಲ್ಲಾವಾರು ಅಂತಿಮ ದಿನಾಂಕವನ್ನು ಪಡೆಯಬಹುದು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

10 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

14 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

14 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

14 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

14 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

14 hours ago