ಹುಬ್ಬಳ್ಳಿ : ನಾನೂ ಬಿಜೆಪಿಯಲ್ಲಿ ಇದ್ದು ಬಂದವನು. ಬಿಜೆಪಿ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಅವರಿಗೆ ಆದ ಅನುಭವ ನನಗೂ ಆಗಿದೆ ಎಂದು ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದ್ದಾರೆ.
ಇಂದು (ಗುರುವಾರ) ಹುಬ್ಬಳ್ಳಿಯಲ್ಲಿ ಜಾತಿ ಕಾರಣಕ್ಕೆ ನಾಗ್ಪುರದ ಆರ್ಎಸ್ಎಸ್ ಕಚೇರಿಯಲ್ಲಿರುವ ಹೆಡಗೇವಾರ್ ಸ್ಮಾರಕದೊಳಗೆ ಬಿಡಲಿಲ್ಲ ಎಂದು ಗೂಳಿಹಟ್ಟಿ ಶೇಖರ್ ಆರೋಪಿಸಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ಎಎಪಿ ನಾಯಕ ಮುಖ್ಯಮಂತ್ರಿ ಚಂದ್ರು, ಜಾತಿ ಕಾರಣಕ್ಕೆ ಪ್ರವೇಶ ನಿರಾಕರಿಸಿದ್ದರೆ ಅದು ಖಂಡನೀಯ ಎಂದರು.
ಈ ಹಿಂದೆ ನಾನು ಬಿಜೆಪಿಯಲ್ಲಿದ್ದಾಗ ಹಲವು ಸಭೆಗಳಿಗೆ ಆಹ್ವಾನವೇ ನೀಡುತ್ತಿರಲಿಲ್ಲ. ನಿಖರ ಕಾರಣ ಹೇಳದೆ ದೂರುವಿಡುತ್ತಿದ್ದರು. ಆದರೆ ಗೂಳಿಹಟ್ಟಿ ಶೇಖರ್ ಹೇಳಿಕೆ ನಂತರ ಮನವರಿಕೆಯಾಗುತ್ತಿದೆ ಎಂದು ಮುಖ್ಯಮಂತ್ರಿ ಚಂದ್ರು ಹೇಳಿದ್ದಾರೆ.
ಇದೇ ವೇಳೆ, ವೈಜ್ಞಾನಿಕವಾಗಿ ಮೀಸಲಾತಿ ಸೌಲಭ್ಯ ದೊರೆಯಲು ದೇಶಾದ್ಯಂತ ಜಾತಿ ಗಣತಿ ನಡೆಸಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಆಗ್ರಹಿಸಿದರು.
ಬೆಂಗಳೂರು: ವೈದ್ಯಕೀಯ ಕಾಲೇಜುಗಳಿಗೆ ಪರೀಕ್ಷೆ ನಡೆಸುವ ಸಿಇಟಿ ವ್ಯವಸ್ಥೆಯನ್ನು ನಡೆಸಲು ರಾಜ್ಯಗಳಿಗೇ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.…
ಕಾಂಗೋ: ಆಫ್ರಿಕಾದ ಕಾಂಗೋದಲ್ಲಿ ಎಬೋಲಾ ಮಾರಣಾಂತಿಕ ಸೋಂಕಿನಿಂದ ಉಂಟಾದ ಸಾವಿನ ಸಂಖ್ಯೆ 136ಕ್ಕೆ ಏರಿದೆ. ಈ ಬಗ್ಗೆ ವಿಶ್ವ ಆರೋಗ್ಯ…
ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೇ.25ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ…
ನವದೆಹಲಿ: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಸಂಬಂಧ ಸುಪ್ರಿಂಕೋರ್ಟ್ ಮುಂದಿನ ಅರ್ಜಿ ವಿಚಾರಣೆಯನ್ನು…
ಇಸ್ಲಾಮಾಬಾದ್: 2019ರ ಪುಲ್ವಾಮಾ ಉಗ್ರರ ದಾಳಿಯ ಮಾಸ್ಟರ್ ಮೈಂಡ್ ಹಮ್ಜಾ ಬುರ್ಹಾನ್ನನ್ನು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ…
ಬೆಂಗಳೂರು: ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆಯನ್ನು ಕಡಿತ ಮಾಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು,…