ರಾಜ್ಯ

ಗೂಳಿಹಟ್ಟಿ ಶೇಖರ್ ಗೆ ಆದ ಅನುಭವ ನನಗೂ ಆಗಿದೆ: ಮುಖ್ಯಮಂತ್ರಿ ಚಂದ್ರು

ಹುಬ್ಬಳ್ಳಿ : ನಾನೂ ಬಿಜೆಪಿಯಲ್ಲಿ ಇದ್ದು ಬಂದವನು. ಬಿಜೆಪಿ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಅವರಿಗೆ ಆದ ಅನುಭವ ನನಗೂ ಆಗಿದೆ ಎಂದು ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದ್ದಾರೆ.

ಇಂದು (ಗುರುವಾರ) ಹುಬ್ಬಳ್ಳಿಯಲ್ಲಿ ಜಾತಿ ಕಾರಣಕ್ಕೆ ನಾಗ್ಪುರದ ಆರ್‌ಎಸ್ಎಸ್ ಕಚೇರಿಯಲ್ಲಿರುವ ಹೆಡಗೇವಾರ್ ಸ್ಮಾರಕದೊಳಗೆ ಬಿಡಲಿಲ್ಲ ಎಂದು ಗೂಳಿಹಟ್ಟಿ ಶೇಖರ್ ಆರೋಪಿಸಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ಎಎಪಿ ನಾಯಕ ಮುಖ್ಯಮಂತ್ರಿ ಚಂದ್ರು, ಜಾತಿ ಕಾರಣಕ್ಕೆ ಪ್ರವೇಶ ನಿರಾಕರಿಸಿದ್ದರೆ ಅದು ಖಂಡನೀಯ ಎಂದರು.

ಈ ಹಿಂದೆ ನಾನು ಬಿಜೆಪಿಯಲ್ಲಿದ್ದಾಗ ಹಲವು ಸಭೆಗಳಿಗೆ ಆಹ್ವಾನವೇ ನೀಡುತ್ತಿರಲಿಲ್ಲ. ನಿಖರ ಕಾರಣ ಹೇಳದೆ ದೂರುವಿಡುತ್ತಿದ್ದರು. ಆದರೆ ಗೂಳಿಹಟ್ಟಿ ಶೇಖರ್ ಹೇಳಿಕೆ ನಂತರ ಮನವರಿಕೆಯಾಗುತ್ತಿದೆ ಎಂದು ಮುಖ್ಯಮಂತ್ರಿ ಚಂದ್ರು ಹೇಳಿದ್ದಾರೆ.

ಇದೇ ವೇಳೆ, ವೈಜ್ಞಾನಿಕವಾಗಿ ಮೀಸಲಾತಿ ಸೌಲಭ್ಯ ದೊರೆಯಲು ದೇಶಾದ್ಯಂತ ಜಾತಿ ಗಣತಿ ನಡೆಸಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಆಗ್ರಹಿಸಿದರು.

andolanait

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

1 hour ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

2 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

3 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

4 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

4 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

8 hours ago