ರಾಜ್ಯ

ಅಪಾಯಕಾರಿ ಸೇಂದಿ ಮಾರುವವರ ವಿರುದ್ಧ ಗೂಂಡಾ ಕಾಯ್ದೆ: ಅಬಕಾರಿ ಸಚಿವ ಆರ್‌.ಬಿ.ತಿಮ್ಮಾಪುರ ಎಚ್ಚರಿಕೆ

ಬೆಂಗಳೂರು: ಕ್ಲೋರಲ್‌ ಹೈಡ್ರೇಟ್‌ ಎಂಬ ಅಪಾಯಕಾರಿ ರಾಸಾಯನಿಕ ಮಿಶ್ರಿತವಾದ ಸೇಂದಿಯನ್ನು ರಾಜ್ಯದ ಗಡಿ ಜಿಲ್ಲೆಗಳಲ್ಲಿ ಮಾರಾಟ ಮಾಡುತ್ತಿರುವ ಆರೋಪಿಗಳ ವಿರುದ್ಧ ಗೂಂಡಾ ಕಾಯ್ದೆ ಬಳಕೆ ಮಾಡುವುದಾಗಿ ಅಬಕಾರಿ ಸಚಿವ ಆರ್‌.ಬಿ.ತಿಮ್ಮಾಪುರ ಎಚ್ಚರಿಕೆ ನೀಡಿದ್ದಾರೆ.

ವಿಧಾನಸಭೆಯಲ್ಲಿ ಸಂಡೂರು ಕ್ಷೇತ್ರದ ಶಾಸಕಿ ಅನ್ನಪೂರ್ಣ ಅವರು, ಬಳ್ಳಾರಿ ಜಿಲ್ಲೆಯಲ್ಲಿ ನೆರೆಯ ಆಂಧ್ರಪ್ರದೇಶದಿಂದ ಸೇಂದಿಯನ್ನು ಅಕ್ರಮವಾಗಿ ತಂದು ಮಾರಾಟ ಮಾಡಲಾಗುತ್ತಿದೆ. ಇದು ಮನುಷ್ಯರು ಬಳಕೆ ಮಾಡಲು ಯೋಗ್ಯವಲ್ಲ ಎಂದು ಪ್ರಯೋಗಾಲಯದ ವರದಿ ಸ್ಪಷ್ಟಪಡಿಸಿದೆ. ಸರ್ಕಾರ ಕೂಡಲೇ ಇದರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಇದಕ್ಕೆ ಉತ್ತರ ನೀಡಿದ ಸಚಿವ ಆರ್‌.ಬಿ.ತಿಮ್ಮಾಪುರ ಅವರು, ಆಂಧ್ರಪ್ರದೇಶದಿಂದ ಅಕ್ರಮವಾಗಿ ಸೇಂದಿಯನ್ನು ರಾಜ್ಯದ ಗಡಿ ಜಿಲ್ಲೆಗಳಿಗೆ ತರಲಾಗುತ್ತಿದೆ. ಸಿಎಚ್‌ ಎಂಬ ಸಣ್ಣ ಪೊಟ್ಟಣ್ಣದ ಪೌಡರನ್ನು ಸೇಂದಿಗೆ ಮಿಶ್ರಣ ಮಾಡಿ ಐದಾರು ಲೀಟರ್‌ ತಯಾರಿಸಲಾಗುತ್ತಿದೆ. ಇದರ ವಿರುದ್ಧ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ವ್ಯಾಪಕ ಜನಜಾಗೃತಿ ಮಾಡಿದ್ದೇವೆ ಎಂದರು.

ಈವರೆಗೂ ಅಕ್ರಮ ಸೇಂದಿ ಪ್ರಕರಣಕ್ಕೆ ಸಂಬಂಧಪಟ್ಟಂತೆ 160 ಪ್ರಕರಣಗಳನ್ನು ದಾಖಲಿಸಿ 160 ಜನರನ್ನು ಬಂಧಿಸಲಾಗಿದೆ. 19691 ಲೀಟರ್ ಮದ್ಯವನ್ನು ವಶಪಡಿಸಿಕೊಂಡು, 121 ವಾಹನಗಳನ್ನು ಜಪ್ತಿ ಮಾಡಲಾಗಿದೆ. ಸದರಿ ಆರೋಪಿಗಳ ವಿರುದ್ಧ, ಗೂಂಡಾ ಕಾಯ್ದೆ ಬಳಕೆ ಮಾಡಲು ಚರ್ಚೆಗಳು ನಡೆಯುತ್ತಿವೆ. ರಾಯಚೂರಿನಲ್ಲಿ ಇಬ್ಬರು ಆರೋಪಿಗಳ ವಿರುದ್ಧ ಗೂಂಡಾ ಕಾಯ್ದೆ ಬಳಸಲಾಗಿದೆ. ಅಕ್ರಮವಾಗಿ ಸೇಂದಿ ಮಾರುವ 25 ಮಂದಿಯನ್ನು ಗುರುತಿಸಲಾಗಿದ್ದು, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

39 mins ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

4 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

8 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

10 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

11 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

12 hours ago