ರಾಜ್ಯ

ರಾಜ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ ಸರ್ಕಾರದ ನೆರವು: ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು: ನೆರೆಯ ರಾಜ್ಯಗಳು ಒಡ್ಡುತ್ತಿರುವ ಸವಾಲಿನ ನಡುವೆಯೂ ನಮ್ಮ ರಾಜ್ಯ ಬಂಡವಾಳ ಹೂಡಿಕೆಯಲ್ಲಿ ಮುಂಚೂಣಿಯಲ್ಲಿದ್ದು, ಹೊಸ ಉದ್ದಿಮೆಗಳ ಸ್ಥಾಪನೆಗೆ ನಮ್ಮ ಸರಕಾರ ಎಲ್ಲಾ ರೀತಿಯಲ್ಲೂ ಸಹಕಾರ ನೀಡಲಿದೆ ಎಂದು ಗೃಹ ಸಚಿವರಾದ ಜಿ ಪರಮೇಶ್ವರ ಹೇಳಿದರು.

ಇಂದು ಎಫ್‌ಕೆಸಿಸಿಐ ಸಂಸ್ಥಾಪಕರ ದಿನಾಚರಣೆಯಲ್ಲಿ ಭಾಗವಹಿಸಿ ಭಾರತ ರತ್ನ ಸರ್‌ ಎಂ ವಿಶ್ವೇಶ್ವರಯ್ಯ ಮೆಮೋರಿಯಲ್‌ ಪ್ರಶಸ್ತಿಯನ್ನು ಪ್ರಧಾನ ಮಾಡಿ ಅವರು ಮಾತನಾಡಿದರು.

ಇಂದು ಕರ್ನಾಟಕ ರಾಜ್ಯ ಹಾಗೂ ಭಾರತ ದೇಶ ವಿಶ್ವದ ಆರ್ಥಿಕ ಹಾಗೂ ಕೈಗಾರಿಕಾ ಭೂಪಟದಲ್ಲಿ ತಮ್ಮದೇ ಆದ ವಿಶೇಷ ಸ್ಥಾನ ಪಡೆದುಕೊಂಡಿವೆ. ತೃತೀಯ ಹಂತದ ದೇಶಗಳಲ್ಲಿ ಗುರುತಿಸಲ್ಪಡುತ್ತಿದ್ದ ಭಾರತ ದೇಶ ಇಂದು ವಿಶ್ವದಲ್ಲಿ ವೇಗವಾಗಿ ಬೆಳೆಯುತ್ತಿರುವ ಮೂರನೇ ಆರ್ಥಿಕತೆಯಾಗಿ ಬೆಳೆದು ನಿಂತಿದೆ. ನಮ್ಮ ದೇಶದಲ್ಲಿ ಸಿಗುವಂತಹ ಉತ್ತಮ ಕೌಶಲ್ಯ ಹೊಂದಿರುವ ಮಾನವ ಸಂಪನ್ಮೂಲ ಬೇರೆ ಯಾವುದೇ ದೇಶದಲ್ಲೂ ದೊರೆಯುವುದಿಲ್ಲ. ಭಾರತ ದೇಶ ಅದರಲ್ಲೂ ಕರ್ನಾಟಕ ರಾಜ್ಯ ಕೈಗಾರಿಕೆಗಳ ಅಭಿವೃದ್ದಿಗೆ ನೀಡುತ್ತಿರುವ ಕೊಡುಗೆ ಅಪಾರ. ಎಫ್‌ಕೆಸಿಸಿಐ ನಂತಹ ಸಂಸ್ಥೆಯನ್ನು ಸ್ಥಾಪಿಸುವ ಮೂಲಕ ಸರ್‌ ಎಂ ವಿಶ್ವೇಶ್ವರಯ್ಯ ಉತ್ತಮ ಬುನಾದಿಯನ್ನು ಹಾಕಿದ್ದಾರೆ ಎಂದರು.

ಯುವ ಜನರು ಉದ್ದಿಮೆ ಪ್ರಾರಂಭಿಸಲು ಸಿದ್ಧಗೊಳಿಸುವುದು ಸರ್ಕಾರದ ಗುರಿ

ಕರ್ನಾಟಕ ರಾಜ್ಯ ಕೈಗಾರಿಕಾ ರಂಗದಲ್ಲಿ ವೇಗವಾಗಿ ಬೆಳೆಯುತ್ತಿದೆ, ದೇಶದ ಶೇಕಡಾ 50 ರಷ್ಟು ಸಾಫ್ಟೇವರ್‌ ಬೆಂಗಳೂರಿನಲ್ಲಿ ತಯಾರಾಗುತ್ತದೆ. ನಾವು ಯಾವುದೇ ಕ್ಷೇತ್ರದಲ್ಲೂ ಕಡಿಮೆಯಿಲ್ಲ. ಇದು ಸರ್‌ ಎಂ ವಿ ಅವರ ದೂರದೃಷ್ಟಿ. ಕೈಗಾರಿಕೆಗಳ ಸ್ಥಾಪನೆಗೆ ಕರ್ನಾಟಕ ರಾಜ್ಯ  ಸರ್ಕಾರ ಬಹಳಷ್ಟು ಉತ್ತಮ ಸೌಲಭ್ಯಗಳನ್ನು ಒದಗಿಸುತ್ತಾ ಬಂದಿದೆ. ಆದರೂ, ನಮ್ಮ ನೆರೆಯ ರಾಜ್ಯಗಳೂ ನೀಡುತ್ತಿರುವ ಸವಾಲನ್ನ ಸಮರ್ಥವಾಗಿ ನಿಭಾಯಿಸಬೇಕಾಗಿದೆ. ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಮಹರಾಷ್ಟ್ರದಂತಹ ರಾಜ್ಯಗಳು ನೀಡುತ್ತಿರುವ ಸವಾಲನ್ನು ನಿಭಾಯಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಯಾವಾಗಲೂ ಸಿದ್ದವಾಗಿದೆ. ರಾಜ್ಯದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ನಮ್ಮ ಸರಕಾರ ಎಲ್ಲಾ ಸಹಕಾರ ನೀಡಲಿದೆ. ನಮ್ಮ ರಾಜ್ಯದಲ್ಲಿ ಬಂಡವಾಳ ಹೂಡಿಕೆ ಹೆಚ್ಚಾಗಬೇಕು, ಯುವ ಜನರಿಗೆ ಉದ್ಯೋಗಾವಕಾಶ ಹೆಚ್ಚಾಗಬೇಕು ಹಾಗೆಯೇ ಯುವ ಜನರು ಉದ್ದಿಮೆಗಳನ್ನು ಪ್ರಾರಂಭಿಸಲು ಮುಂದಾಗುವಂತಾಗಬೇಕು ಎನ್ನುವುದು ನಮ್ಮ ಸರ್ಕಾರದ ಗುರಿಯಾಗಿದೆ ಎಂದರು.

ತುಮುಕೂರಿನಲ್ಲಿ ಏಷಿಯಾದ ಅತಿದೊಡ್ಡ ಕೈಗಾರಿಕಾ ಹಬ್‌ ನಿರ್ಮಾಣವಾಗುತ್ತಿದೆ. 20 ಸಾವಿರ ಏಕರೆಗಳ ಕೈಗಾರಿಕಾ ಭೂಮಿ ಸಿದ್ದವಾಗಿದ್ದು ಹೆಚ್‌ಎಲ್‌ ನಂತಹ ಪ್ರಮುಖ ಕೈಗಾರಿಕೆಗಳು ಸ್ಥಾಪನೆಯಾಗಿವೆ. ಬೆಂಗಳೂರನ್ನು ಹೊರತುಪಡಿಸಿ ಬೇರೆ ಪಟ್ಟಣಗಳತ್ತ ಉದ್ಯಮಿಗಳು ಗನಮ ಹರಿಸಬೇಕು. ಸಣ್ಣ ಉದ್ಯಮದಿಂದ ಪ್ರಾರಂಭವಾದ ಭಾಗ್ಯಲಕ್ಷ್ಮಿ ಇಂದು ರಾಜ್ಯದ ಮನೆಮಾತಾಗಿದೆ. ಇಂತಹ ಕೈಗಾರಿಕೆಯ ಸ್ಥಾಪನೆಯ ಹಿಂದೆ ಇರುವಂತಹ ವ್ಯಕ್ತಿಗೆ ಈ ಪ್ರಶಸ್ತಿ ದೊರೆತಿರುವುದು ಬಹಳ ಸಂತಸದ ವಿಷಯವಾಗಿದೆ ಎಂದರು.

ಎಫ್‌ಕೆಸಿಸಿಐ ಅಧ್ಯಕ್ಷರಾದ ರಮೇಶ್‌ ಚಂದ್ರ ಲಹೋಟಿ ಮಾತನಾಡಿ, 108 ವರ್ಷಗಳ ಇತಿಹಾಸವನ್ನು ನಮ್ಮ ಸಂಸ್ಥೆ ಹೊಂದಿದೆ. ಸರ್‌ ಎಂ ವಿ ಅವರು ಸ್ಥಾಪನೆ ಮಾಡಿದ ಸಂಸ್ಥೆ ಕಳೆದ ಶತಮಾನದಲ್ಲಿ ರಾಜ್ಯದ ಕೈಗಾರಿಕಾ ಕ್ಷೇತ್ರದ ಅಭಿವೃದ್ದಿಗೆ ವಿಶೇಷ ಕೊಡುಗೆ ನೀಡಿದೆ. ರಾಜ್ಯದ ಕೈಗಾರಿಕಾ ಕ್ಷೇತ್ರವನ್ನು ರೂಪಿಸುವಲ್ಲಿ ಮುಂಚೂಣಿಯಲ್ಲಿದೆ ಎಂದರು.

ಕಾರ್ಯಕ್ರಮದಲ್ಲಿ ಎಫ್‌ಕೆಸಿಸಿಐ ನಿಯೋಜಿತ ಅಧ್ಯಕ್ಷರಾದ ಎಂ.ಜಿ ಬಾಲಕೃಷ್ಣ, ಹಿರಿಯ ಉಪಾಧ್ಯಕ್ಷರಾದ ಉಮಾ ರೆಡ್ಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

29 mins ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

35 mins ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

44 mins ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

1 hour ago

ಮುಡಾ ಮೇಲೆ ಇ.ಡಿ.ದಾಳಿ: ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ: ಡಿಸಿಎಂ ʼಡಿಕೆಶಿʼ

ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…

2 hours ago

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

2 hours ago