Mysore
21
clear sky

Social Media

ಶುಕ್ರವಾರ, 20 ಫೆಬ್ರವರಿ 2026
Light
Dark

ಸಾರಿಗೆ ನೌಕರರ ಒತ್ತಡಕ್ಕೆ ಮಣಿದ ಸರ್ಕಾರ : ವೇತನ ಪರಿಷ್ಕರಣೆಗೆ ಒಪ್ಪಿದೆ ; ರದ್ದಾಗುತ್ತಾ ಮುಷ್ಕರ?

ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯ ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ಸಿಬ್ಬಂದಿಗೆ 26 ತಿಂಗಳ ಬಾಕಿ ವೇತನ (ಅರಿಯರ್ಸ್) ಪಾವತಿಸಲು ಅನುಮೋದನೆ ನೀಡಿದೆ. ಇದರೊಂದಿಗೆ 2025ರ ಏಪ್ರಿಲ್ 1ರಿಂದ ವೇತನ ಪರಿಷ್ಕರಣೆಗೂ ಒಪ್ಪಿಗೆ ಸೂಚಿಸಿದೆ. ಇದರಿಂದ ನೌಕರರು ನಡೆಸಲುದ್ದೇಶಿಸಿದ್ದ ಬೃಹತ್ ಪ್ರತಿಭಟನೆ ರದ್ದಾಗುವ ಸಾಧ್ಯತೆ ಇದೆ.

ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಹಣಕಾಸು ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ನೌಕರರು ಫೆಬ್ರವರಿ 19ರಂದು ‘ಬೆಂಗಳೂರು ಚಲೋ’ ಪ್ರತಿಭಟನೆ ಮತ್ತು ಫೆಬ್ರವರಿ 20ರಿಂದ ರಾಜ್ಯಾದ್ಯಂತ ಬಸ್ ಸೇವೆ ಸ್ಥಗಿತಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದರು. ಈ ಒತ್ತಡಕ್ಕೆ ಸರ್ಕಾರ ಮಣಿದಿದೆ.

ಕಾರ್ಮಿಕ ಸಂಘಟನೆಗಳು ಈ ನಿರ್ಧಾರಕ್ಕೆ ಸ್ವಾಗತಿಸುತ್ತಿವೆಯಾದರೂ, ಉಳಿದ 12 ತಿಂಗಳ ಹಿಂಬಾಕಿ ಮತ್ತು ವೇತನ ಹೆಚ್ಚಳದ ಪ್ರಮಾಣದ ಬಗ್ಗೆ ಇನ್ನಷ್ಟು ಚರ್ಚೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸರ್ಕಾರ ತಿಳಿಸಿದೆ.

ಈ ನಿರ್ಧಾರವು ಸಾರಿಗೆ ನಿಗಮಗಳ ಸಿಬ್ಬಂದಿಗೆ ದೀರ್ಘಕಾಲದ ಆರ್ಥಿಕ ಸಂಕಷ್ಟಕ್ಕೆ ತಾತ್ಕಾಲಿಕ ಪರಿಹಾರ ಒದಗಿಸಿದ್ದು, ಮುಂದಿನ ಚರ್ಚೆಗಳಲ್ಲಿ ಸಂಪೂರ್ಣ ಬೇಡಿಕೆಗಳ ಪೂರೈಕೆಗೆ ಒತ್ತಾಯಿಸಲಾಗುವುದು ಎಂದು ಸಂಘಟನೆಗಳು ತಿಳಿಸಿವೆ.

Tags:
error: Content is protected !!