ರಾಜ್ಯ

ವಿಶೇಷ ಚೇತನರಿಗೆ ಉದ್ಯೋಗಾವಕಾಶ ಕಲ್ಪಿಸಲು ಸರ್ಕಾರ ಬದ್ಧ

ಬೆಂಗಳೂರು : ವಿಶೇಷ ಚೇತನರ ಬಗ್ಗೆ ಯಾರೂ ಕನಿಷ್ಠ ಭಾವನೆ ಹೊಂದಬೇಕಾಗಿಲ್ಲ. ಅವರಿಗೆ ದೇವರು ವಿಶೇಷವಾದ ಶಕ್ತಿಯನ್ನು ಕೊಟ್ಟಿರುತ್ತಾನೆ. ಹೀಗಾಗಿ ಅವರು ಸಮರ್ಥರು. ಅವರಿಗೆ ಕೌಶಲ್ಯಪೂರ್ಣ ಮತ್ತು ಉತ್ತಮ ಸಮಾಜವನ್ನು ನಿರ್ಮಿಸಲು ಕರ್ನಾಟಕ ಸರ್ಕಾರ ಸದಾ ಬದ್ಧವಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದ್ದಾರೆ.

ಶನಿವಾರ ಕೆಎಸ್‌ಡಿಎ, ಕೆಎಸ್‌ಡಿಸಿ ಮತ್ತು ಅಸಿಸ್‌ಟೆಕ್ ಫೌಂಡೇಶನ್ ಜಂಟಿಯಾಗಿ ಬಿಎಂಎಸ್ ಮಹಿಳಾ ಕಾಲೇಜಿನಲ್ಲಿ ವಿಶೇಷ ಚೇತನರಿಗಾಗಿ ಆಯೋಜಿಸಲಾದ “ಜಾಬ್ ಹಬ್ಬ”ವನ್ನು ಉದ್ದೇಶಿಸಿ ಸಚಿವರು ಮಾತನಾಡಿದರು.

ಈ ಕಾರ್ಯಕ್ರಮವು ಅಂಗವಿಕಲ ಉದ್ಯೋಗಾಕಾಂಕ್ಷಿಗಳು, ಉದ್ಯೋಗದಾತರು, ತರಬೇತಿ ಪಾಲುದಾರರು ಮತ್ತು ನಾಗರಿಕ ಸಮಾಜವನ್ನು ಒಟ್ಟುಗೂಡಿಸಿದೆ. ನಿಜಕ್ಕೂ ಇದೊಂದು ಅಪರೂಪದ ಕಾರ್ಯಕ್ರಮ ಎಂದರು.

ಒಂದು ರಾಜ್ಯ ಸಮಗ್ರವಾಗಿ ಬೆಳವಣಿಗೆಯಾಗಬೇಕಾದರೆ ಎಲ್ಲರನ್ನು ಒಳಗೊಂಡ ಪ್ರಗತಿ ಮುಖ್ಯ ಇದಕ್ಕೆ ಸೂಕ್ತ ಆರ್ಥಿಕತೆಯ ಅವಶ್ಯಕತೆಯೂ ಇದೆ ಎಂದು ಡಾ. ಪಾಟೀಲ್ ಹೇಳಿದರು.

ಕರ್ನಾಟಕದಲ್ಲಿ 20 ಲಕ್ಷಕ್ಕೂ ಹೆಚ್ಚು ವಿಶೇಷ ಚೇತನರಿದ್ದಾರೆ ಎಂಬ ಮಾಹಿತಿ ಇದೆ. ಇವರಿಗೆ ಶಿಕ್ಷಣ ಮತ್ತು ಉದ್ಯೋಗ ಎರಡರಲ್ಲೂ ಅವಕಾಶಗಳನ್ನು ಒದಗಿಸಲು ನಮ್ಮ ಸರ್ಕಾರವು ಹೊಸ ನೀತಿಯನ್ನು ರೂಪಿಸಿ ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ ಎಂದು ಸಚಿವರು ವಿವರಿಸಿದರು.

“ಕಾರ್ಪೊರೇಟ್ ಕ್ಷೇತ್ರದಲ್ಲಿ ವಿಶೇಷ ಚೇತನರ ಸಂಖ್ಯೆ ಕಡಿಮೆ ಇದೆ. ಈ ನಿಟ್ಟಿನಲ್ಲಿ ಕೆಲವೊಂದು ಬದಲಾವಣೆ ತರುವ ತುರ್ತು ಅವಶ್ಯಕತೆಯಿದೆ” ಎಂದು ಅವರು ಹೇಳಿದರು.

ಇದನ್ನೂ ಓದಿ:-ಸಿಎಂ ಹಾಗೂ ಡಿಸಿಎಂ ಒಪ್ಪಂದದ ಬಗ್ಗೆ ಗೊತ್ತಿಲ್ಲ, ಹೈಕಮಾಂಡ್‌ ನಿರ್ಧಾರಕ್ಕೆ ಎಲ್ಲರೂ ಬದ್ಧ: ಡಾ. ಶರಣಪ್ರಕಾಶ್‌ ಪಾಟೀಲ್‌

ವಿಶೇಷ ಚೇತನರಿಗೆ ಖಾಸಗಿ ವಲಯದಲ್ಲಿ 5% ಉದ್ಯೋಗ ಮೀಸಲಾತಿ ಕಲ್ಪಿಸಲು ಸರ್ಕಾರ ಈಗಾಗಲೇ “ಕರ್ನಾಟಕ ಉದ್ಯೋಗ ಮತ್ತು ಶಿಕ್ಷಣದಲ್ಲಿ ವಿಶೇಷ ಚೇತನ ವ್ಯಕ್ತಿಗಳ ಹಕ್ಕುಗಳ ಮಸೂದೆ 2025” ವಿಧೇಯಕವನ್ನು ಜಾರಿಗೆ ತಂದಿದೆ. ಇದು ದೇಶದಲ್ಲಿ ಅತ್ಯಂತ ಪರಿಣಾಮಕಾರಿ ಕಾನೂನಾಗಿದೆ. ಇದಲ್ಲದೇ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನೀತಿ 2025–32 ಅನ್ನೂ ನಾವು ರೂಪಿಸಿದ್ದೇವೆ ಎಂದರು.

ಕೌಶಲ್ಯ, ಕೈಗಾರಿಕಾ ಪಾಲುದಾರಿಕೆ, ಮೂಲಸೌಕರ್ಯ ಮತ್ತು ತಂತ್ರಜ್ಞಾನಕ್ಕೆ ಪೂರಕವಾದ ತರಬೇತಿ ನೀಡಲು ನಮ್ಮ ಸರ್ಕಾರ ಮುಂದಾಗಿದೆ. ಮುಖ್ಯಮಂತ್ರಿಯವರ ಕೌಶಲ್ಯ ಕರ್ನಾಟಕ ಯೋಜನೆಯು (CMKKY) ವಿಶೇಷ ಚೇತನ ವ್ಯಕ್ತಿಗಳಿಗೆ ತರಬೇತಿ ನೀಡಲು ಅವಕಾಶ ಒದಗಿಸಿದೆ ಎಂದರು.

ರಾಜ್ಯದಾದ್ಯಂತ ಹೆಚ್ಚಿನ ಅಭ್ಯರ್ಥಿಗಳು ಕೌಶಲ್ಯ ಮತ್ತು ನಿರ್ದಿಷ್ಟ ತರಬೇತಿ ಪಡೆಯಲು ಅವಕಾಶ ಒದಗಿಸಲು ನಾವು ಬದ್ಧವಾಗಿದ್ದೇವೆ. ಎಐ ತಂತ್ರಜ್ಞಾನ, ವರ್ಚುವಲ್ ಉದ್ಯೋಗ ಅವಕಾಶಗಳನ್ನು ಒದಗಿಸಲು ಅಸಿಸ್‌ಟೆಕ್‌ ಫೌಂಡೇಶನ್‌ ಸಹಯೋಗ ಅಗತ್ಯ ಎಂದು ಸಚಿವರು ಇದೇ ಸಂದರ್ಭದಲ್ಲಿ ಘೋಷಿಸಿದರು.

ಈ ರೀತಿಯ ನೇಮಕಾತಿಯು “ಸ್ಮಾರ್ಟ್ ಎಕನಾಮಿಕ್ಸ್‌ ಆಗಿದೆ ಹೊರತು ಚಾರಿಟಿ ರೀತಿಯಲ್ಲ. ಉದ್ಯೋಗದಾತರು ವೈವಿಧ್ಯತೆ, ನಾವೀನ್ಯತೆಗೆ ಹೆಚ್ಚು ಆದ್ಯತೆ ನೀಡಬೇಕು. ಈ ಜಾಬ್‌ ಹಬ್ಬದ ಮೂಲಕ ಕರ್ನಾಟಕದಿಂದ ಕೆಲವು ಯಶಸ್ವಿ ಕಥೆಗಳು ಹೊರಹೊಮ್ಮಲಿ. ಈ ನಿಟ್ಟಿನಲ್ಲಿ ಈ ವೇದಿಕೆ ಮುನ್ನಡೆಯಲಿ ಎಂದು‌ ಪಾಟೀಲ್‌ ಶುಭ ಕೋರಿದರು.

ಕೌಶಲ್ಯಾಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಎನ್‌ಎಂ ನಾಗರಾಜ, ಅಸಿಸ್‌ಟೆಕ್ ಸಹ ಸಂಸ್ಥಾಪಕ ಪ್ರತೀಕ್, ಭಾರತ ಅಂಧರ ಕ್ರಿಕೆಟ್ ತಂಡದ ನಾಯಕ ಶೇಖರ್ ನಾಯ್ಕ್, ಬಿಎಂಎಸ್ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ರಘುಕುಮಾರ್ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.25 ಸೋಮವಾರ

1 hour ago

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

18 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

21 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

23 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

23 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

23 hours ago