ರಾಜ್ಯ

ಹೊರಗುತ್ತಿಗೆ ಕೈಬಿಡಲು ಸರ್ಕಾರ ಚಿಂತನೆ ; ಒಳಗುತ್ತಿಗೆಗೆ ನಿರ್ಧಾರ

ಬೆಂಗಳೂರು : ಖಾಸಗಿ ಏಜೆನ್ಸಿಗಳ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ಒದಗಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಹೀಗಾಗಿ, ಹೊರಗುತ್ತಿಗೆ ವ್ಯವಸ್ಥೆ ರದ್ದು ಮಾಡಿ ಒಳಗುತ್ತಿಗೆ ವ್ಯವಸ್ಥೆ ಜಾರಿಗೆ ತರಲು ಗಂಭೀರ ಚಿಂತನೆಯನ್ನು ಸರ್ಕಾರ ನಡೆಸಿದೆ. ಹೊರಗುತ್ತಿಗೆ ನೌಕರರ ಮೇಲಿನ ದೌರ್ಜನ್ಯ ತಡೆ ಮತ್ತು ಸೇವಾ ಭದ್ರತೆ ಒದಗಿಸುವ ಸಂಬಂಧ ಸುಪ್ರೀಂಕೋರ್ಟ್‌ ಸ್ಪಷ್ಟ ನಿರ್ದೇಶನ ನೀಡಿದೆ. ಹೀಗಾಗಿ ಹೊರಗುತ್ತಿಗೆ ನೌಕರರ ನೇಮಕವನ್ನು ಖಾಸಗಿ ಏಜೆನ್ಸಿಗಳ ಮೂಲಕ ಮಾಡುವುದನ್ನು ತಪ್ಪಿಸಿ ಅನ್ಯಮಾರ್ಗದ ಮೂಲಕ ನೇಮಕಕ್ಕೆ ಸರ್ಕಾರ ನಿರ್ಧರಿಸಿದೆ. ಅದಕ್ಕಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ.ಪಾಟೀಲ್‌ ನೇತೃತ್ವದಲ್ಲಿ ಸಚಿವ ಸಂಪುಟ ಉಪಸಮಿತಿಯೊಂದನ್ನು ರಚಿಸಲಾಗಿದೆ.

ಇದನ್ನು ಓದಿ: ಮುಸ್ಲಿಮರಿಗೆ ಗುತ್ತಿಗೆ ಮೀಸಲಾತಿ ವಿಚಾರ: ಛಲವಾದಿ ನಾರಾಯಣಸ್ವಾಮಿ ಕೆಂಡಾಮಂಡಲ

ಈ ಸಂಪುಟ ಉಪಸಮಿತಿ ಹೊರ ಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ನೀಡಲು ಇರುವ ಮಾರ್ಗಗಳ ಬಗ್ಗೆ ಪರಿಶೀಲನೆ ನಡೆಸಿದ್ದು, ಒಳಗುತ್ತಿಗೆ ಆಧಾರದಲ್ಲಿ ನೇರವಾಗಿ ಸರ್ಕಾರ ಅಥವಾ ಸರ್ಕಾರಿ ಸಂಸ್ಥೆಗಳ ಮೂಲಕ ಸೇವೆಗೆ ಭರ್ತಿ ಮಾಡಿಕೊಳ್ಳಲು ಪರಿಶೀಲನೆ ನಡೆಸಿದೆ. ಇದರ ಸಾಧಕ-ಬಾಧಕಗಳ ಪರಿಶೀಲನೆಗಾಗಿ ಕಾರ್ಮಿಕ ಇಲಾಖೆ, ಕಾನೂನು ಇಲಾಖೆ ಅಧಿಕಾರಿಗಳ ಸಮಿತಿ ರಚಿಸಲಾಗಿದ್ದು, ಸಮಿತಿಯು ವರದಿ ನೀಡಿದ ನಂತರ ಅದನ್ನು ಪರಿಶೀಲಿಸಿ ಹೊರಗುತ್ತಿಗೆ ನೌಕರರಿಗೆ ಪರ್ಯಾಯ ವ್ಯವಸ್ಥೆ ಮಾಡಲು ಸಚಿವ ಸಂಪುಟ ಉಪಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಲು ನಿರ್ಧರಿಸಿದೆ.

ಒಳ ಗುತ್ತಿಗೆ ಎಂದರೇನು?
ಖಾಸಗಿ ಏಜೆನ್ಸಿ ಅಥವಾ ಇನ್ಯಾವುದಾದರೂ ಸಂಸ್ಥೆ ಮೂಲಕ ನೌಕರರನ್ನು ನೇಮಿಸುವ ವ್ಯವಸ್ಥೆಯನ್ನು ಹೊರಗುತ್ತಿಗೆ ಎಂದು ಕರೆಯಲಾಗುತ್ತದೆ. ಅದರಲ್ಲಿ ನೌಕರರಿಗೆ ವೇತನ ಪಾವತಿ ಸೇರಿ ಸೌಲಭ್ಯ ನೀಡುವ ಹೊಣೆಗಾರಿಗೆ ಸರ್ಕಾರಕ್ಕಿರುವುದಿಲ್ಲ. ಖಾಸಗಿ ಸಂಸ್ಥೆಗೆ ನಿಗದಿ ಮಾಡಿರುವ ಶುಲ್ಕ ಪಾವತಿಸಿದರೆ ನೌಕರರಿಗೆ ನೀಡಬೇಕಾದ ಸೌಲಭ್ಯ ಆ ಸಂಸ್ಥೆಯೇ ನೀಡುತ್ತದೆ. ಅದೇ ಒಳ ಗುತ್ತಿಗೆ ನೌಕರರು, ಸರ್ಕಾರದಿಂದಲೇ ಗುತ್ತಿಗೆ ಆಧಾರದಲ್ಲಿ ನೇಮಕವಾಗಲಿದ್ದಾರೆ. ಅವರಿಗೆ ವೇತನ, ಪಿಎಫ್‌ ಸೇರಿ ಇನ್ನಿತರ ಸೌಲಭ್ಯವನ್ನು ಆಯಾ ಇಲಾಖೆಗಳು ನೀಡಲಿವೆ. ಆದರೆ, ಅವರು ಸರ್ಕಾರಿ ನೌಕರರಾಗಿರುವುದಿಲ್ಲ.

ಆಂದೋಲನ ಡೆಸ್ಕ್

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

10 hours ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

11 hours ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

11 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

12 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

12 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

12 hours ago