ರಾಜ್ಯ

ಹೊರಗುತ್ತಿಗೆ ಕೈಬಿಡಲು ಸರ್ಕಾರ ಚಿಂತನೆ ; ಒಳಗುತ್ತಿಗೆಗೆ ನಿರ್ಧಾರ

ಬೆಂಗಳೂರು : ಖಾಸಗಿ ಏಜೆನ್ಸಿಗಳ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ಒದಗಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಹೀಗಾಗಿ, ಹೊರಗುತ್ತಿಗೆ ವ್ಯವಸ್ಥೆ ರದ್ದು ಮಾಡಿ ಒಳಗುತ್ತಿಗೆ ವ್ಯವಸ್ಥೆ ಜಾರಿಗೆ ತರಲು ಗಂಭೀರ ಚಿಂತನೆಯನ್ನು ಸರ್ಕಾರ ನಡೆಸಿದೆ. ಹೊರಗುತ್ತಿಗೆ ನೌಕರರ ಮೇಲಿನ ದೌರ್ಜನ್ಯ ತಡೆ ಮತ್ತು ಸೇವಾ ಭದ್ರತೆ ಒದಗಿಸುವ ಸಂಬಂಧ ಸುಪ್ರೀಂಕೋರ್ಟ್‌ ಸ್ಪಷ್ಟ ನಿರ್ದೇಶನ ನೀಡಿದೆ. ಹೀಗಾಗಿ ಹೊರಗುತ್ತಿಗೆ ನೌಕರರ ನೇಮಕವನ್ನು ಖಾಸಗಿ ಏಜೆನ್ಸಿಗಳ ಮೂಲಕ ಮಾಡುವುದನ್ನು ತಪ್ಪಿಸಿ ಅನ್ಯಮಾರ್ಗದ ಮೂಲಕ ನೇಮಕಕ್ಕೆ ಸರ್ಕಾರ ನಿರ್ಧರಿಸಿದೆ. ಅದಕ್ಕಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ.ಪಾಟೀಲ್‌ ನೇತೃತ್ವದಲ್ಲಿ ಸಚಿವ ಸಂಪುಟ ಉಪಸಮಿತಿಯೊಂದನ್ನು ರಚಿಸಲಾಗಿದೆ.

ಇದನ್ನು ಓದಿ: ಮುಸ್ಲಿಮರಿಗೆ ಗುತ್ತಿಗೆ ಮೀಸಲಾತಿ ವಿಚಾರ: ಛಲವಾದಿ ನಾರಾಯಣಸ್ವಾಮಿ ಕೆಂಡಾಮಂಡಲ

ಈ ಸಂಪುಟ ಉಪಸಮಿತಿ ಹೊರ ಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ನೀಡಲು ಇರುವ ಮಾರ್ಗಗಳ ಬಗ್ಗೆ ಪರಿಶೀಲನೆ ನಡೆಸಿದ್ದು, ಒಳಗುತ್ತಿಗೆ ಆಧಾರದಲ್ಲಿ ನೇರವಾಗಿ ಸರ್ಕಾರ ಅಥವಾ ಸರ್ಕಾರಿ ಸಂಸ್ಥೆಗಳ ಮೂಲಕ ಸೇವೆಗೆ ಭರ್ತಿ ಮಾಡಿಕೊಳ್ಳಲು ಪರಿಶೀಲನೆ ನಡೆಸಿದೆ. ಇದರ ಸಾಧಕ-ಬಾಧಕಗಳ ಪರಿಶೀಲನೆಗಾಗಿ ಕಾರ್ಮಿಕ ಇಲಾಖೆ, ಕಾನೂನು ಇಲಾಖೆ ಅಧಿಕಾರಿಗಳ ಸಮಿತಿ ರಚಿಸಲಾಗಿದ್ದು, ಸಮಿತಿಯು ವರದಿ ನೀಡಿದ ನಂತರ ಅದನ್ನು ಪರಿಶೀಲಿಸಿ ಹೊರಗುತ್ತಿಗೆ ನೌಕರರಿಗೆ ಪರ್ಯಾಯ ವ್ಯವಸ್ಥೆ ಮಾಡಲು ಸಚಿವ ಸಂಪುಟ ಉಪಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಲು ನಿರ್ಧರಿಸಿದೆ.

ಒಳ ಗುತ್ತಿಗೆ ಎಂದರೇನು?
ಖಾಸಗಿ ಏಜೆನ್ಸಿ ಅಥವಾ ಇನ್ಯಾವುದಾದರೂ ಸಂಸ್ಥೆ ಮೂಲಕ ನೌಕರರನ್ನು ನೇಮಿಸುವ ವ್ಯವಸ್ಥೆಯನ್ನು ಹೊರಗುತ್ತಿಗೆ ಎಂದು ಕರೆಯಲಾಗುತ್ತದೆ. ಅದರಲ್ಲಿ ನೌಕರರಿಗೆ ವೇತನ ಪಾವತಿ ಸೇರಿ ಸೌಲಭ್ಯ ನೀಡುವ ಹೊಣೆಗಾರಿಗೆ ಸರ್ಕಾರಕ್ಕಿರುವುದಿಲ್ಲ. ಖಾಸಗಿ ಸಂಸ್ಥೆಗೆ ನಿಗದಿ ಮಾಡಿರುವ ಶುಲ್ಕ ಪಾವತಿಸಿದರೆ ನೌಕರರಿಗೆ ನೀಡಬೇಕಾದ ಸೌಲಭ್ಯ ಆ ಸಂಸ್ಥೆಯೇ ನೀಡುತ್ತದೆ. ಅದೇ ಒಳ ಗುತ್ತಿಗೆ ನೌಕರರು, ಸರ್ಕಾರದಿಂದಲೇ ಗುತ್ತಿಗೆ ಆಧಾರದಲ್ಲಿ ನೇಮಕವಾಗಲಿದ್ದಾರೆ. ಅವರಿಗೆ ವೇತನ, ಪಿಎಫ್‌ ಸೇರಿ ಇನ್ನಿತರ ಸೌಲಭ್ಯವನ್ನು ಆಯಾ ಇಲಾಖೆಗಳು ನೀಡಲಿವೆ. ಆದರೆ, ಅವರು ಸರ್ಕಾರಿ ನೌಕರರಾಗಿರುವುದಿಲ್ಲ.

ಆಂದೋಲನ ಡೆಸ್ಕ್

Recent Posts

ಮೈಸೂರು | ಧ್ವಜಾರೋಹಣ ನೆರವೇರಿಸಿದ ಸಚಿವ ಮಹದೇವಪ್ಪ : ಸಂವಿಧಾನ ರಕ್ಷಿಸಲು ಕರೆ

ಮೈಸೂರು : ಭಾರತದ ಸಂವಿಧಾನವು ನಮ್ಮ ದೇಶದ ಆತ್ಮವಾಗಿದ್ದು, ಸಮಾನತೆ, ನ್ಯಾಯ, ಸ್ವಾತಂತ್ರ್ಯ ಮತ್ತು ಬಾಂಧವ್ಯದ ಮೂಲಭೂತ ತತ್ವಗಳನ್ನು ನೀಡಿದೆ.…

6 mins ago

ಗಣರಾಜ್ಯೋತ್ಸವ ಸಂಭ್ರಮ : ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋತ್‌ ಧ್ವಜಾರೋಹಣ, ಪರೇಡ್‌ ಆರಂಭ

ಬೆಂಗಳೂರು : ರಾಜ್ಯದಲ್ಲಿ 76ನೇ ಗಣರಾಜ್ಯೋತ್ಸವದ ಸಂಭ್ರಮ ಜೋರಾಗಿದೆ. ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ…

1 hour ago

ಫ್ಲೀಸ್. . ಬಸ್ ನಿಲ್ಲಿಸಿ ಸಾರ್. . !

ಶಿವಪುರ, ನಾಚನಹಳ್ಳಿಪಾಳ್ಯ, ರೈಲ್ವೆ ವರ್ಕ್‌ಶಾಪ್‌ ನಿಲುಗಡೆ ತಾಣದಲ್ಲಿ ನಿಲ್ಲದ ಬಸ್‌ಗಳು ಕೈ ಸಂಜ್ಞೆಗೂ ಕ್ಯಾರೇ ಎನ್ನದ ಡ್ರೈವರ್‌ಗಳು; ಮಹಿಳೆಯರು, ವಯೋವೃದ್ಧರು,…

1 hour ago

ಆರ್.ಟಿ.ವಿಠ್ಠಲಮೂರ್ತಿ ಅವರ ಬೆಂಗಳೂರು ಡೈರಿ : ಗಾಂಧಿ, ಬುದ್ಧ, ಬಸವ ಅರ್ಜೆಂಟಾಗಿ ಬೇಕು

ಕಷ್ಟ-ಸುಖಗಳಿಗೆ ಸ್ಪಂದಿಸುವ ಮನಃಸ್ಥಿತಿ ಕಳೆದುಕೊಂಡ ಜನತೆ ಕೈಯಲ್ಲಿ ಹಿಡಿದಿದ್ದ ದಿನ ಪತ್ರಿಕೆಯ ಮೇಲೆ ಕಣ್ಣು ನೆಟ್ಟಿದ್ದ ಚಿದಾನಂದ ಇದ್ದಕ್ಕಿದ್ದಂತೆ 'ಥೋ'…

2 hours ago

ಸರ್ಕಾರ, ರಾಜ್ಯಪಾಲರ ಸಂಘರ್ಷ ; ನ್ಯಾಯಾಂಗ ಮಧ್ಯಪ್ರವೇಶ ಅಗತ್ಯ

ಕಳೆದ ಗುರುವಾರ ಆರಂಭವಾದ ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಸಿದ್ಧಪಡಿಸಿದ್ದ ಭಾಷಣವನ್ನು ಯಥಾವತ್ತು ಓದುವುದಕ್ಕೆ ರಾಜ್ಯಪಾಲರು ನಿರಾಕರಿಸಿದ್ದಲ್ಲದೆ, ತಾವೇ…

2 hours ago

ದೇಶದ ಐಕ್ಯತೆ, ಪ್ರಗತಿಯ ಸಂಕೇತ-ಸಂವಿಧಾನ

ಜಾಗೃತಿ ಕಾರ್ಯಕ್ರಮಗಳು ಮತ್ತಷ್ಟು ಪರಿಣಾಮಕಾರಿ ಆಗಲಿ ಡಾ.ಡಿ.ಜೆ.ಶಶಿಕುಮಾರ್ ದೇಶದ ಐಕ್ಯತೆ, ಭದ್ರತೆ ಮತ್ತು ಪ್ರಗತಿಗೆ ಕಾರಣವಾಗಿರುವ ಭಾರತದ ಸಂವಿಧಾನ ರಚನೆಯಾಗಿ…

2 hours ago