ರಾಜ್ಯ

ಸರ್ಕಾರದ ಪ್ರತಿ ಸಹಿ ಮಾರಾಟಕ್ಕಿದೆ: ಎಚ್.ಡಿ ಕುಮಾರಸ್ವಾಮಿ

ಬೆಂಗಳೂರು: ರಾಜ್ಯದಲ್ಲಿ ಎಲ್ಲ ಸರ್ಕಾರಿ ಕೆಸಲಗಳಿಗೂ ರೇಟ್‌ ಫಿಕ್ಸ್‌ ಆಗಿದೆ. ಸರ್ಕಾರದ ಪ್ರತಿ ಸಹಿಯೂ ಮಾರಾಟಕ್ಕ ಇದೆ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಆರೋಪಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕೂಡ ಎರಡು ಬಾರಿ ಸಿಎಂ ಆಗಿ ಅಧಿಕಾರ ನಡೆಸಿದ್ದೇನೆ. ನಾನು ಹರಿಶ್ಚಂದ್ರ ಎಂದು ಎಲ್ಲೂ ಹೇಳಿಲ್ಲ. ವಿಧಾನಸಭೆಯಲ್ಲಿಯೇ ಈ ಮಾತು ಹೇಳಿದ್ದೇನೆ. ಚುನಾವಣೆ ನಡೆಸಬೇಕಾದರೆ ಇನ್ನೊಬ್ಬರ ಹತ್ತಿರ ಕೈ ಚಾಚಲೇಬೇಕು. ಆದರೆ ನಾನು ಅಧಿಕಾರ ನಡೆಸುವಾಗ ನನ್ನ ಸಹಿಯನ್ನು ಮಾರಾಟಕ್ಕೆ ಇಟ್ಟಿರಲಿಲ್ಲ ಎಂದರು.

ಈ ಸರ್ಕಾರ ಪ್ರತಿಯೊಂದಕ್ಕೂ ಸಹಿಯನ್ನು ಮಾರಾಟಕ್ಕೆ ಇಟ್ಟಿದೆ. ಪ್ರತಿಯೊಂದಕ್ಕೂ ಲೂಟಿ ಹೊಡೆದುಕೊಂಡು ಕೂತಿದ್ದಾರೆ. ಈ ಸರ್ಕಾರದಲ್ಲಿ ರೇಟ್ ಕಾರ್ಡ್ ಮೊದಲೇ ಫಿಕ್ಸ್ ಆಗಿ ಹೋಗಿದೆ. ನಾನು ಪ್ರಾರಂಭದಲ್ಲೇ ಈ ಸರ್ಕಾರದ ರೇಟ್ ಕಾರ್ಡ್ ಬಗ್ಗೆ ಹೇಳಿದ್ದೆ ಎಂದು ಕುಮಾರಸ್ವಾಮಿ ಕಿಡಿಕಾರಿದರು.

ನಾನು ಸತ್ಯ ಹರಿಶ್ಚಂದ್ರ ಎಂದು ಎಲ್ಲೂ ಹೇಳಿಲ್ಲ. ಇವತ್ತಿನ ರಾಜಕಾರಣಕ್ಕೆ ದುಡ್ಡು ಬೇಕು. ಪ್ರೀತಿ ವಿಶ್ವಾಸದಿಂದ ನಾವು ಕೆಲಸ ಮಾಡಿದಾಗ ಚುನಾವಣೆ ಸಮಯದಲ್ಲಿ ಯಾರೋ ನಾಲ್ವರು ಸಹಾಯ ಮಾಡುತ್ತಾರೆ. ಆದರೆ ಅಧಿಕಾರ ಇಟ್ಟುಕೊಂಡು ಪ್ರತಿದಿನ ನನ್ನ ಸಹಿಯನ್ನು ಮಾರಾಟಕ್ಕೆ ಇಟ್ಟಿರಲಿಲ್ಲ. ಈ ಸರಕಾರ ಪ್ರತಿಯೊಂದಕ್ಕೂ ತನ್ನ ಸಹಿಯನ್ನು ಮಾರಾಟಕ್ಕೆ ಇಟ್ಟಿದೆ. ಪ್ರತೀ ಕ್ಷಣವೂ ಈ ಸರಕಾರದಲ್ಲಿ ಮಾರಾಟವೇ ನಡೆಯುತ್ತಿದೆ ಎಂದು ಅವರು ಕಿಡಿಕಾರಿದರು.

ದಲಿತ ಶಾಸಕರ ಡಿನ್ನರ್ ಪಾರ್ಟಿ ವಿಚಾರದ ಬಗ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, SC-ST ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಕೊಟ್ಟಿಲ್ಲ, ಅದಕ್ಕೆ ಸಭೆ ಮಾಡುತ್ತಿದ್ದೇವೆ ಎಂದು ಕೆಲವರು ಹೇಳಿದ್ದಾರೆ. ಡಿನ್ನರ್ ಪಾರ್ಟಿಯಲ್ಲಿ ವಿದ್ಯಾರ್ಥಿಗಳ ಸ್ಕಾಲರ್ ಶಿಪ್ ಬಗ್ಗೆ ಚರ್ಚೆ ಮಾಡುವುದಾದರೆ ಕ್ಯಾಬಿನೆಟ್ ಇರುವುದು ಯಾಕೆ? SC-ST ಇರಲಿ ಯಾವುದೇ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಸಿಗದೇ ಇದ್ದರೆ ಕ್ಯಾಬಿನೆಟ್ ನಲ್ಲಿ ಕೂತು ಚರ್ಚೆ ಮಾಡಬೇಕಾ? ಅಥವಾ ಡಿನ್ನರ್ ಪಾರ್ಟಿಯಲ್ಲಿ ಚರ್ಚೆ ಮಾಡಬೇಕಾ? ಎಂದು ಕಟುವಾಗಿ ಟೀಕಿಸಿದರು.

ಕಾಂಗ್ರೆಸ್ ನಲ್ಲಿ ಸಿಎಂ ಫೈಟ್ ವಿಚಾರದ ಬಗ್ಗೆ ಉತ್ತರಿಸಲು ನಿರಾಕರಿಸಿದ ಅವರು; ಅದು ಅವರ ಪಕ್ಷದ ವಿಚಾರ. ಅವರ ಪಕ್ಷದ ವಿಚಾರ ಅವರು ಚರ್ಚೆ ಮಾಡಿಕೊಳ್ಳಲಿ ಬಿಡಿ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

5 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

8 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

12 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

14 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

15 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

16 hours ago