ಬೆಂಗಳೂರು: ಅನ್ನಭಾಗ್ಯ ಯೋಜನೆಯ ಹಣದ ಬದಲು ಪೂರ್ಣ ಪ್ರಮಾಣದ ಅಕ್ಕಿ ಕೊಡಲು ತೀರ್ಮಾನಿಸಿದ್ದೇವೆ ಎಂದು ಆಹಾರ ಸಚಿವ ಕೆಎಚ್ ಮುನಿಯಪ್ಪ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇಷ್ಟು ದಿನಗಳ ಕಾಲ 5 ಕೆಜಿ ಅಕ್ಕಿ ಬದಲಿಗೆ 170ರೂ. ಹಣ ನೀಡಲಾಗುತ್ತಿತ್ತು. ಇದೀಗ, ಕೇಂದ್ರ ಸರ್ಕಾರ ಅಕ್ಕಿ ನೀಡಲು ಒಪ್ಪಿಗೆ ನೀಡಿದೆ. ಇದೆ ತಿಂಗಳಿನಿಂದ ಹಣದ ಬದಲು 10 ಕೆಜಿ ಅಕ್ಕಿ ನೀಡುತ್ತೇವೆ ಎಂದು ಹೇಳಿದರು.
ನಮ್ಮ ಇಲಾಖೆ ಬರೆದ ಪತ್ರಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಂದಿಸಿದ್ದು, ಈಗ ಕೇಂದ್ರ ಸಚಿವರು ಅಕ್ಕಿ ಕೊಡುವುದಕ್ಕೆ ಒಪ್ಪಿಕೊಂಡಿದ್ದಾರೆ. ಕೇಂದ್ರ ಸರ್ಕಾರ ಮೊದಲ ಒಂದು ಕೆಜಿ ಅಕ್ಕಿಗೆ 28 ರೂ. ನಿಗದಿಪಡಿಸಿತ್ತು. ಜನವರಿಯಿಂದ ಪ್ರತಿ ಕೆಜಿಗೆ 22.50 ರೂ.ನಂತೆ ಕೊಡಲು ನಿರ್ಧರಿಸಿದೆ ಎಂದು ಹೇಳಿದರು.
ಎಲ್ಲಿಯವರೆಗೆ ಕೇಂದ್ರ ಅಕ್ಕಿ ಕೊಡುತ್ತದೆಯೋ ಅಲ್ಲಿಯವರೆಗೆ ಪೂರ್ಣ ಪ್ರಮಾಣದ ಅಕ್ಕಿ ನೀಡುತ್ತೇವೆ ಎಂದು ತಿಳಿಸಿದರು.
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…