ರಾಜ್ಯ

ಪ್ರತಿ ಟನ್‌ ಕಬ್ಬಿಗೆ 3300 ರೂ. ದರ ನೀಡಲು ಸರ್ಕಾರ ನಿರ್ಧಾರ : ಸಬ್ಸಿಡಿ ಘೋಷಣೆ

ಬೆಂಗಳೂರು : ಪ್ರತಿ ಟನ್‌ ಕಬ್ಬಿಗೆ 3300 ರೂ. ನೀಡಲು ಸರ್ಕಾರ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಪ್ರತಿ ಟನ್‌ಗೆ ನೀಡುವ 3300 ರೂಪಾಯಿಯಲ್ಲಿ ಕಾರ್ಖಾನೆಯಿಂದ 3250 ರೂ. ನೀಡಬೇಕು, ಉಳಿದಂತೆ ಸರ್ಕಾರದಿಂದ 50 ರೂ. ಸಬ್ಸಿಡಿ ನೀಡಲು ನಿರ್ಧಾರ ಮಾಡಲಾಗಿದೆ.

ಸಿಎಂ ನೇತೃತ್ವದ ಸಭೆಯ ಪ್ರಮುಖ ಅಂಶಗಳೇನು?
ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಬದ್ಧವಾಗಿದೆ. ಈ ಹಿನ್ನೆಲೆಯಲ್ಲಿಯೇ, ಸಕ್ಕರೆ ಎಂಎಸ್ಪಿ ಹೆಚ್ಚಳ ಸೇರಿದಂತೆ ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸಲು ಕೋರಿ ಪ್ರಧಾನಿಯವರಿಗೆ ಈಗಾಗಲೇ ಪತ್ರ ಬರೆಯಲಾಗಿದ್ದು, ಅವರು ಸಮಯ ನೀಡಿದರೆ ನಾಳೆಯೇ ಕೇಂದ್ರಕ್ಕೆ ನಿಯೋಗ ಕರೆದುಕೊಂಡು ಹೋಗಲು ಸಿದ್ಧರಿದ್ದೇವೆ. ಇದರಲ್ಲಿ ಯಾವುದೇ ರಾಜಕೀಯವಿಲ್ಲ. ರೈತರ ಹಿತದೃಷ್ಟಿಯಿಂದ ಕೈಗೊಳ್ಳುವ ತೀರ್ಮಾನಗಳನ್ನು ಎಲ್ಲರೂ ಒಪ್ಪಿಕೊಳ್ಳಬೇಕು.

ಸಕ್ಕರೆಗೆ ಎಮ್ಎಸ್ಪಿ ನಿಗದಿಪಡಿಸುವುದು ಕೇಂದ್ರ ಸರ್ಕಾರ. ಇದೇ ರೀತಿ ಕಬ್ಬಿಗೆ ಎಫ್ಆರ್ಪಿ ನಿಗದಿಪಡಿಸುವವರು ಕೇಂದ್ರ ಸರ್ಕಾರ. ಎಥೆನಾಲ್ ಹಂಚಿಕೆ ನಿಗದಿಪಡಿಸುವವರು ಕೇಂದ್ರ ಸರ್ಕಾರ. ಸಕ್ಕರೆ ರಫ್ತು ಮಿತಿ ನಿಗದಿಪಡಿಸುವವರು ಸಹ ಕೇಂದ್ರ ಸರ್ಕಾರ.

ಇದನ್ನೂ ಓದಿ:-ರೈತ ಹೋರಾಟ ಎಫೆಕ್ಟ್‌ : ರಾಜಣ್ಣ ಮನೆಯ ಔತಣಕೂಟ ಮಿಸ್ ಮಾಡ್ಕೊಂಡ ಸಿಎಂ, ಪ್ರವಾಸ ರದ್ದು

ರೈತರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಎಫ್ಆರ್ಪಿ ನಿಗದಿಪಡಿಸುವುದು ಕೇಂದ್ರ ಸರ್ಕಾರದ ಕೆಲಸ. ಕೇಂದ್ರ ಸರ್ಕಾರ ದಿನಾಂಕ 6-05-2025ರಂದು ಕಬ್ಬಿಗೆ ಎಫ್ಆರ್ಪಿ ನಿಗದಿಪಡಿಸಿದೆ. ಈ ಎಫ್ಆರ್ಪಿಯಲ್ಲಿ ಸಾಗಾಟ ಮತ್ತು ಕಟಾವು ವೆಚ್ಚ ಸಹ ಸೇರಿದೆ. ಸಕ್ಕರೆಯ ಎಂಎಸ್ಪಿ ಹೆಚ್ಚಳ ಮಾಡುವಂತೆ ಈ ಹಿಂದೆಯೇ ಕೇಂದ್ರ ಸರ್ಕಾರಕ್ಕೆ ನಾವು ಮನವಿ ಸಲ್ಲಿಸಿದ್ದೇವೆ. ಆದರೆ ಕೇಂದ್ರ ಸರ್ಕಾರ ಇದುವರೆಗೆ ಎಂಎಸ್ಪಿ ಹೆಚ್ಚಳ ಮಾಡಿಲ್ಲ.

ಕೇಂದ್ರ ಸರ್ಕಾರ ಕಬ್ಬಿಗೆ ನಿಗದಿಪಡಿಸಿರುವ ಎಫ್ಆರ್ಪಿ ವೈಜ್ಞಾನಿಕವಾಗಿಲ್ಲ. ಸಕ್ಕರೆ ಕಾರ್ಖಾನೆಗಳು ಇಳುವರಿ ರಿಕವರಿ ಕಡಿಮೆ ತೋರಿಸುತ್ತಿವೆ. ಇದನ್ನು ತಪ್ಪಿಸಲು ಪ್ರತಿ ಕಾರ್ಖಾನೆ ಎದುರು ಸರ್ಕಾರದ ವತಿಯಿಂದ ಪ್ರಯೋಗಾಲಯ ತೆರೆಯಬೇಕು. ಕೆಲವು ಕಾರ್ಖಾನೆಗಳು ಹಳೆಯ ಬಾಕಿಯನ್ನು ಉಳಿಸಿಕೊಂಡಿದ್ದು, ಇದರ ಪಾವತಿಗೆ ಕ್ರಮ ಕೈಗೊಳ್ಳಬೇಕು ಎಂದು ರೈತ ಮುಖಂಡರು ಮನವಿ ಮಾಡಿದ್ದಾರೆ.

ತೂಕದಲ್ಲಿ ಮೋಸ, ರಿಕವರಿ ಕಡಿಮೆ ತೋರಿಸುವುದು ಸೇರಿದಂತೆ ಸಕ್ಕರೆ ಕಾರ್ಖಾನೆಗಳ ಕುರಿತು ಕಬ್ಬು ಬೆಳೆಗಾರರಿಗೆ ಇರುವ ಎಲ್ಲಾ ಅಹವಾಲುಗಳನ್ನು ಬಗೆಹರಿಸಲಾಗುವುದು ಎಂದು ರೈತ ಮುಖಂಡರಿಗೆ ತಿಳಿಸಿದ್ದೇವೆ.
ಕಬ್ಬಿನ11.25 ರಿಕವರಿಗೆ ರೂ.3250 ಸಕ್ಕರೆ ಕಾರ್ಖಾನೆಗಳು ಪಾವತಿಸಬೇಕು. ಇದಕ್ಕೆ ಸರ್ಕಾರ ರೂ.50 ಹೆಚ್ಚುವರಿಯಾಗಿ ಪಾವತಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಇದು ಇಡೀ ರಾಜ್ಯಕ್ಕೆ ಅನ್ವಯವಾಗಲಿದೆ.

ಸಕ್ಕರೆ ಕಾರ್ಖಾನೆಗಳು ಮಾರಾಟ ಮಾಡುವ ವಿದ್ಯುತ್ ಮೇಲೆ ಪ್ರತಿ ಯುನಿಟ್ಗೆ 60 ಪೈಸೆ ತೆರಿಗೆ ನಿಗದಿಪಡಿಸುವ ಪ್ರಸ್ತಾವನೆಯನ್ನು ಮರು ಪರಿಶೀಲಿಸಬೇಕು ಎಂದು ಕಾರ್ಖಾನೆ ಮಾಲೀಕರು ಮನವಿ ಮಾಡಿದ್ದು, ಇದರ ಮರು ಪರಿಶೀಲನೆ ನಡೆಸಲಾಗುವುದು.

ಸಕ್ಕರೆ ಕಾರ್ಖಾನೆಗಳು ಎದುರಿಸುತ್ತಿರುವ ಸಮಸ್ಯೆಗಳು ಅದೇ ರೀತಿ ಕಬ್ಬು ಬೆಳೆಗಾರರು ಸಕ್ಕರೆ ಕಾರ್ಖಾನೆಗಳಿಂದ ಎದುರಿಸುತ್ತಿರುವ ಸಮಸ್ಯೆ ಕುರಿತು ಸಮಾಲೋಚನೆ ನಡೆಸಿ ಪರಿಹಾರ ಒದಗಿಸಲು ಪ್ರತ್ಯೇಕ ಸಭೆ ನಡೆಸಲಾಗುವುದು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

18 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

18 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

18 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

18 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

18 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

21 hours ago