ರಾಜ್ಯ

ಸ್ಲೀವ್‌ಲೆಸ್‌, ಹರಿದ ಜೀನ್ಸ್‌ ಹಾಕುವ ಸರ್ಕಾರಿ ನೌಕರರೇ ಹುಷಾರ್.. : ರಾಜ್ಯ ಸರ್ಕಾರದ ಎಚ್ಚರಿಕೆ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರು ಕಚೇರಿಗೆ ಬರುವಾಗ ಯೋಗ್ಯ ಸೂಕ್ತ ಬಟ್ಟೆ ಧರಿಸಿಕೊಂಡು ಬರದಿದ್ದರೆ ಸೂಕ್ತ ಕ್ರಮ ಎದುರಿಸಬೇಕಾಗುತ್ತದೆ ಎಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.

ಸಿಬ್ಬಂದಿ ಆಡಳಿತ ಮತ್ತು ಸುಧಾರಣಾ ಇಲಾಖೆ (DPAR) ವಿವಿಧ ಇಲಾಖೆಗಳ ಮುಖ್ಯಸ್ಥರು, ಉಪ ಆಯುಕ್ತರು, ಮುಖ್ಯಮಂತ್ರಿ ಕಚೇರಿ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಇತರರಿಗೆ ಈ ಸಂದೇಶವನ್ನು ಕಳುಹಿಸಿದ್ದು, ಮಾಡಬೇಕಾದ ಮತ್ತು ಮಾಡಬಾರದ ಕೆಲಸಗಳನ್ನು ಪಟ್ಟಿ ಮಾಡಿದೆ.

ರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಕೆಲವು ನೌಕರರು ಅಸಭ್ಯವಾಗಿ ಬಟ್ಟೆ ಧರಿಸುತ್ತಾರೆ ಎಂದು ಸಾರ್ವಜನಿಕರು ಮತ್ತು ಕೆಲವು ಸಂಸ್ಥೆಗಳಿಂದ ಡಿಪಿಎಆರ್ ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ನೌಕರರಿಗೆ ಯೋಗ್ಯವಾದ ಬಟ್ಟೆಗಳನ್ನು ಧರಿಸಲು ಹೇಳಲಾಗಿದ್ದರೂ, ಅನೇಕರು ಸೂಚನೆಗಳನ್ನು ಪಾಲಿಸುತ್ತಿಲ್ಲ. ನಾವು ಅದನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ:-ಮೈಸೂರು ವಿಶ್ವವಿದ್ಯಾನಿಲಯ ; ಅನಧಿಕೃತ ವಿವಿಧ ವಿದ್ಯಾರ್ಥಿ ಸಂಘಟನೆಗಳ ಪ್ರವೇಶಕ್ಕೆ ನಿರ್ಬಂಧ

ಕಾರ್ಪೊರೇಟ್ ಕಚೇರಿಗಳಿಗಿಂತ ಭಿನ್ನವಾಗಿ, ಸರ್ಕಾರಿ ನೌಕರರಿಗೆ ಯಾವುದೇ ಡ್ರೆಸ್ ಕೋಡ್ ಇಲ್ಲ. ಆದಾಗ್ಯೂ, ಕೆಲವು ಯುವಜನತೆ ಕಾಲೇಜಿಗೆ ಹೋಗುವವರಂತೆ ಬಟ್ಟೆ ಧರಿಸುತ್ತಾರೆ, ಇದು ಸ್ವೀಕಾರಾರ್ಹವಲ್ಲ. ಹರಿದ ಜೀನ್ಸ್, ತೋಳಿಲ್ಲದ ಉಡುಪುಗಳು ಮತ್ತು ತುಂಬಾ ಬಿಗಿಯಾದ ಬಟ್ಟೆಗಳನ್ನು ಧರಿಸಿಕೊಂಡು ಬರುತ್ತಾರೆ ಎಂದು ಅಧಿಕಾರಿಯೊಬ್ಬರು ಆಕ್ಷೇಪ ವ್ಯಕ್ತಪಡಿಸಿದರು.

ಚಲನಾ ರಿಜಿಸ್ಟರ್ ನೌಕರರು ಕಚೇರಿಯಲ್ಲಿ ಎಷ್ಟು ಹೊತ್ತು ಇರುತ್ತಾರೆ, ಹೇಗೆ ಕೆಲಸ ಮಾಡುತ್ತಾರೆ ಎಂದು ಪತ್ತೆಹಚ್ಚುವುದಾಗಿರುತ್ತದೆ. ಉದ್ಯೋಗಿ ಬೆಳಗ್ಗೆ 10:10 ರೊಳಗೆ ಕಚೇರಿಯಲ್ಲಿರಬೇಕು ಮತ್ತು ಕೆಲಸದ ಸಮಯ ಮುಗಿಯುವವರೆಗೆ ತಮ್ಮ ಸೀಟಿನಲ್ಲಿರಬೇಕು. ಅಧಿಕೃತ ಕರ್ತವ್ಯದ ಮೇಲೆ ಹೋಗುತ್ತಿದ್ದರೆ ಅದನ್ನು ರಿಜಿಸ್ಟರ್‌ನಲ್ಲಿ ನಮೂದಿಸಬೇಕು ಎಂದು ಹೇಳುತ್ತದೆ.

ಆಂದೋಲನ ಡೆಸ್ಕ್

Recent Posts

ಮಾದಕ ವಸ್ತು ಮಾರಾಟ, ಬಳಕೆ ವಿರುದ್ಧ ಕಾರ್ಯಾಚರಣೆ

ನವೀನ್ ಡಿಸೋಜ ೩ ತಿಂಗಳಲ್ಲಿ ೧೩೮ ಎನ್‌ಡಿಪಿಎಸ್ ಪ್ರಕರಣ ದಾಖಲು; ೬ ಕೆ.ಜಿ. ೬೬೪ ಗ್ರಾಂ ಗಾಂಜಾ, ೩೫.೬೬ ಗ್ರಾಂ…

2 hours ago

ಹಾಳಾಗಿ ವರ್ಷಗಳೇ ಕಳೆದರೂ ದುರಸ್ತಿಯಾಗದ ಶುದ್ಧ ನೀರಿನ ಘಟಕಗಳು

ಮಹಾದೇಶ್ ಎಂ.ಗೌಡ ಹನೂರು: ತಾಲ್ಲೂಕಿನ ೨೫ ಗ್ರಾಮ ಪಂಚಾಯಿತಿಗಳ ಪೈಕಿ ೨೧ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ೪೭ ಶುದ್ಧ ಕುಡಿಯುವ ನೀರಿನ…

2 hours ago

ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ಅಪಘಾತಗಳಿಗೆ ಆಹ್ವಾನ

ಎಸ್.ನಾಗಸುಂದರ್ ರೈತನಿಗೆ ಕೈಮೂಳೆ ಮುರಿತ: ಪಾಂಡವಪುರದಲ್ಲಿ ಅವಗಢ, ಸಾರ್ವಜನಿಕರ ಆಕ್ರೋಶ ಪಾಂಡವಪುರ: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ಅವೈಜ್ಞಾನಿಕವಾಗಿ ಮತ್ತು…

2 hours ago

ಅರ್ಜುನಹಳ್ಳಿ ಗ್ರಾಪಂಗೆ ಗಾಂಧಿ ಗ್ರಾಮ ಪುರಸ್ಕಾರ

ಎರಡನೇ ಬಾರಿ ಪ್ರಶಸ್ತಿ ಪಡೆದು ಗಮನಸೆಳೆದ ಪಂಚಾಯಿತಿ ಭೇರ್ಯ ಮಹೇಶ್ ಕೆ.ಆರ್.ನಗರ : ತಾಲೂಕಿನ ಅರ್ಜುನಹಳ್ಳಿ ಗ್ರಾಮ ಪಂಚಾಯಿತಿ ಗ್ರಾಮೀಣಾಭಿವೃದ್ಧಿ…

2 hours ago

ಊರ ಜಾತ್ರೆ ಒಂದು ನೆನಪು…

ನಂಜನಗೂಡಿನ ಜಾತ್ರೆ ಅಂದು ಹೇಗಿತ್ತೋ ಇಂದೂ ಹಾಗೆ ತನ್ನ ಆಚರಣೆಯ ಮುಗ್ಧತೆ ಉಳಿಸಿಕೊಂಡಿದೆ  ಡಾ.ಹೆಚ್.ಸಿ.ಮಹದೇವಪ್ಪ, ಸಚಿವರು ನಂಜನಗೂಡಿನಿಂದ ಕೆಲವೇ ಮೈಲಿಗಳ…

2 hours ago

ಯುದ್ಧ: ಕಟ್ಟಡ ನಿರ್ಮಾಣ ವಲಯಕ್ಕೆ ಬೆಲೆ ಏರಿಕೆಯ ಬಿಸಿ

ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು: ಮಧ್ಯಪ್ರಾಚ್ಯ ದೇಶದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಜನಸಾಮಾನ್ಯರಿಗೆ ನಿತ್ಯ ಒಂದಲ್ಲಾ ಒಂದು ಬಿಸಿ ತಟ್ಟುತ್ತಿದೆ. ಕಟ್ಟಡ…

2 hours ago